Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!


Team Udayavani, Oct 6, 2024, 11:35 AM IST

1

ಬೆಂಗಳೂರು: ಇತ್ತೀಚೆಗೆ ವೈಯಾಲಿಕಾವಲ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ನೇಪಾಳ ಮೂಲದ ಮಹಾಲಕ್ಷ್ಮೀ ಎಂಬಾಕೆಯ ಭೀಕರ ಹತ್ಯೆ ರಹಸ್ಯ ಬಯಲಾಗಿದೆ.

ಒಡಿಶಾದ ಆರೋಪಿ ಮುಕ್ತಿರಂಜನ್‌ ರಾಯ್‌, ಪ್ರೇಯಸಿಯನ್ನು ಕತ್ತು ಹಿಸುಕಿ ಕೊಲೆಗೈದ ಬಳಿಕ, ಯುಟ್ಯೂಬ್‌ ನೋಡಿ ಆಕೆಯ ದೇಹದವನ್ನು 59 ತುಂಡು ಮಾಡಿದ್ದಾನೆ ಎಂಬುದು ಗೊತ್ತಾಗಿದೆ. ಮೃತದೇಹವನ್ನು ಹೊರಗೆ ಸಾಗಿಸುವುದು ಕಷ್ಟವೆಂದು ಅರಿತಿದ್ದ ಆರೋಪಿ, ಅದನ್ನು ಹೇಗೆ ವಿಲೇವಾರಿ ಮಾಡಬೇಕೆಂಬ ಕುರಿತು ಯುಟ್ಯೂಬ್‌ನಲ್ಲಿ ಹಲವು ವಿಡಿಯೋಗಳನ್ನು ವೀಕ್ಷಿಸಿದ್ದಾನೆ. ಬಳಿಕ ಹೊರಗೆ ಹೋಗಿ ಆಕ್ಸೈಲ್ ಬ್ಲೇಡ್‌ ಮತ್ತು ಮಾಂಸ ಕತ್ತರಿಸುವ ಚಾಕು ತಂದು ಆಕೆಯ ದೇಹವನ್ನು 59 ತುಂಡುಗಳನ್ನಾಗಿ ಮಾಡಿ, ಬಳಿಕ ಫ್ರಿಡ್ಜ್ನಲ್ಲಿ  ತರಕಾರಿ ಜೋಡಿಸುವಂತೆ ಜೋಡಿಸಿದ್ದಾನೆ. ಬಳಿಕ ಮನೆಯ ಮಧ್ಯದ ಕೋಣೆ ಹಾಗೂ ವಾಶ್‌ರೂಂನಲ್ಲಿದ್ದ ರಕ್ತದ ಕಲೆಗಳನ್ನು ಆ್ಯಸಿಡ್‌ ಹಾಕಿ ಸ್ವತ್ಛ ಮಾಡಿದ್ದಾನೆ. ಆದರೆ, ಅಷ್ಟರಲ್ಲಿ ಮಧ್ಯರಾತ್ರಿಯಾಗಿದೆ. ನಸುಕಿನಲ್ಲೇ ಆಕೆಯ ಮನೆಗೆ ಬೀಗ ಹಾಕಿ ಹೆಬ್ಬಗೋಡಿಯಲ್ಲಿದ್ದ ತನ್ನ

ರೂಮ್‌ಗೆ ಹೋಗಿ, ಜತೆಯಲ್ಲಿದ್ದ ತನ್ನ ಸಹೋದರನಿಗೆ ಮಹಾಲಕ್ಷ್ಮೀಯನ್ನು ಕೊಲೆ ಮಾಡಿರುವ ವಿಷಯ ತಿಳಿಸಿ, ನೀನು ರೂಮ್ ಖಾಲಿಮಾಡಿಕೊಂಡು ಬೇರೆ ಕಡೆ ಹೋಗು ಎಂದು ಹೇಳಿ, ಆತನಿಂದಲೇ ಹಣ ಪಡೆದು ಬೈಕ್‌ನಲ್ಲಿ 1,660 ಕಿ.ಮೀ. ತನ್ನ ಊರಾದ ಒಡಿಶಾದ ಭದ್ರಕ್‌ ಎಂಬ ಜಿಲ್ಲೆಗೆ ಪ್ರಯಾಣಿಸಿದ್ದ. ಊರು ತಲುಪಿದ ಬಳಿಕ ನಡೆದ ವಿಷಯವನ್ನು ತನ್ನ ತಾಯಿಗೆ ಹೇಳಿದ್ದಾನೆ. ಆಗ ಗಂಜಂನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಹೋದರನ ಜತೆ ಹೋಗಿ ಇರುವಂತೆ ತಾಯಿ ಸಲಹೆ ನೀಡಿದ್ದಾರೆ. ತಾಯಿಯ ಸಲಹೆಯಂತೆ ಸಹೋದರನ ರೂಮ್‌ಗೆ ಹೋಗಿ ಸೇರಿಕೊಂಡಿದ್ದ.

ಆದರೆ, ಕರ್ನಾಟಕ ಪೊಲೀಸರು ತನ್ನನ್ನು ಹುಡುಕಾಟ ನಡೆಸುತ್ತಿದ್ದಾರೆ ಎಂಬುದು ಗೊತ್ತಾಗಿ, ಮತ್ತೆ ತನ್ನ ಭದ್ರಕ್‌ಗೆ ಬಂದು, ಡೈರಿಯಲ್ಲಿ ಡೆತ್‌ನೋಟ್‌ ಬರೆದಿಟ್ಟು ಮನೆಯ ಸಮೀಪದಲ್ಲಿರುವ ಸ್ಮಶಾನಕ್ಕೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದರು.

ಆರೋಪಿ ಮುಕ್ತಿರಂಜನ್‌ ರಾಯ್‌ ಮತ್ತು ಮಹಾಲಕ್ಷ್ಮೀ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಆಕೆ ಬೇರೊಬ್ಬನ ಜತೆ ಓಡಾಡುತ್ತಿದ್ದಳು. ಜತೆಗೆ ತನಗೆ ಮದುವೆಯಾಗಿ ಮಗು ಇರುವ ವಿಚಾರವನ್ನು ಆಕೆ ಮರೆ ಮಾಚಿದ್ದಳು. ಅದರಿಂದ ಕೋಪಗೊಂಡು ಸೆ.2ರಂದು ಆರೋಪಿ ಆಕೆಯನ್ನು ಹತ್ಯೆಗೈದು, ತಂಡು ಮಾಡಿದ್ದ. ಈ ಸಂಬಂಧ ವೈಯಾಲಿಕಾವಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.