ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Team Udayavani, Oct 6, 2024, 1:28 PM IST
ಶಿರ್ವ: ಕನ್ನಡವು ಕನ್ನಡಿಗರ ಆಸ್ಮಿತೆಯಾಗಿದ್ದು ಹೆಗ್ಗುರುತಾಗಿದೆ. ಕನ್ನಡವು ವ್ಯಾವಹಾರಿಕ ಭಾಷೆಯಾಗಿ ಬೆಳೆಯಬೇಕಿದ್ದು, ವೈಜ್ಞಾ ನಿಕ ಮತ್ತು ತಾರ್ಕಿಕ ತಳಹದಿಯಲ್ಲಿ ರೂಪುಗೊಂಡಿರುವ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಹೆತ್ತವರು ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಓದಿಸುವ ಮೂಲಕ ಸ್ವಾಭಿಮಾನಿಗಳಾಗಿ ಕನ್ನಡಾಭಿಮಾನ ಬೆಳೆಸಿಕೊಂಡು ಕನ್ನಡವನ್ನು ಅಮೃತ ಭಾಷೆಯಾಗಿ ಬೆಳಗಿಸಬೇಕಾಗಿದೆ ಎಂದು ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ಹೇಳಿದರು.
ಅವರು ಅ. 6ರಂದು ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಕಾಪು ತಾಲೂಕಿನ ಶಿರ್ವಪೇಟೆಗೆ ಆಗಮಿಸಿದ ಸಂದರ್ಭದಲ್ಲಿ ರಥಕ್ಕೆ ಕಾಯಿ ಒಡೆದು, ಕನ್ನಡ ತಾಯಿ ಭುವನೇಶ್ವರಿಗೆ ಮಾಲಾರ್ಪಣೆ ಮಾಡಿ ಆರತಿಬೆಳಗಿಸಿ ಸ್ವಾಗತ ಕೋರಿ ಮಾತನಾಡಿದರು.
ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ ಮಾತನಾಡಿ ಬಹುಭಾಷಾ ವೈವಿಧ್ಯತೆ ಹೊಂದಿರುವ ದೇಶದಲ್ಲಿ ಕನ್ನಡಭಾಷೆ, ನೆಲ, ಜಲ, ಸಂಸ್ಕೃತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕನ್ನಡ ರಥಯಾತ್ರೆ ಹಂಪಿಯಲ್ಲಿ ಚಾಲನೆಗೊಂಡು ರಾಜ್ಯಾದ್ಯಂತ ಸಂಚರಿಸುತ್ತಿದೆ.ಪ್ರಾದೇಶಿಕ ಭಾಷೆಗಳೊಂದಿಗೆ ಕನ್ನಡವನ್ನು ವ್ಯಾವಹಾರಿಕ ಭಾಷೆಯಾಗಿ ಬಳಸಿ ಕನ್ನಡಾಭಿಮಾನವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಹೇಳಿದರು.
ಕನ್ನಡ ರಥದ ಮೂಲಕ ಕನ್ನಡಾಭಿಮಾನವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ನೇತೃತ್ವದಲ್ಲಿ ಶಿರ್ವ ಎಂಎಸ್ಆರ್ಎಸ್ ಕಾಲೇಜು ತಂಗುದಾಣದ ಬಳಿ ಕನ್ನಡ ರಥವನ್ನು ಸ್ವಾಗತಿಸಿ ಮೆರವಣಿಗೆಯ ಮೂಲಕ ಶಿರ್ವ ಪೇಟೆಯವರೆಗೆ ಬರಲಾಯಿತು.
ಶಿರ್ವ ಗ್ರಾ.ಪಂ. ನೋಡಲ್ ಅಧಿಕಾರಿ/ಶಿರ್ವ ಪಶುವೈದ್ಯಾಧಿಕಾರಿ ಡಾ| ಅರುಣ್ ಕುಮಾರ್ ಹೆಗ್ಡೆ, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ರಾವ್,ಶಿರ್ವ ಪೊಲೀಸ್ ಠಾಣಾಧಿಕಾರಿ ಸಕ್ತಿವೇಲು .ಇ, ಕಾಪು ಕಂದಾಯ ಪರಿವೀಕ್ಷಕ ಇಜ್ಜಾರ್ ಶಬೀರ್, ಶಿರ್ವ ಗ್ರಾಮ ಆಡಳಿತಾಧಿಕಾರಿ ಶ್ವೇತಾ ಸುವರ್ಣ, ಕಾಪು ತಾ| ಕಂದಾಯ ಇಲಾಖೆಯ ಅರುಣ್ ಕುಮಾರ್, ಸಂಪ್ರೀತ್, ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಚರಣ್ ಜೋಗಿ, ಕಾಪು ತಾ|ಮಟ್ಟದ ಅಧಿಕಾರಿಗಳು, ದೇವದಾಸ್ ಹೆಬ್ಟಾರ್, ಶಿರ್ವ ಹಿಂದೂ ಪ.ಪೂ.ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ಸುಂದರ ಮೇರ,ಎನ್ನೆಸ್ಸೆಸ್ ವಿದ್ಯಾರ್ಥಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು,ಆರೋಗ್ಯ ಕೇಂದ್ರದ ಸಿಬಂದಿ,ಕಾಪು ತಾ| ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಪು ತಾ| ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಮರಾಠೆ ಸ್ವಾಗತಿಸಿದರು. ನೀಲಾನಂದ ನಾಯ್ಕ ನಿರೂಪಿಸಿ, ಸಂಘಟನಾ ಕಾರ್ಯದರ್ಶಿ ಕೆ.ಆರ್.ಪಾಟ್ಕರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.