Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
Team Udayavani, Oct 6, 2024, 4:03 PM IST
ಹೊಸದಿಲ್ಲಿ: ತೀವ್ರ ವಾಗ್ವಾದದ ವೇಳೆ ಶಿರೋಮಣಿ ಅಕಾಲಿದಳದ ಮುಖಂಡರೊಬ್ಬರು ಹಾರಿಸಿದ ಗುಂಡು ತಗುಲಿ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ (AAP) ಮುಖಂಡರೊಬ್ಬರು ಗಾಯಗೊಂಡಿದ್ದಾರೆ. ಪಂಜಾಬ್ನ ಫಾಜಿಲ್ಕಾ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ.
ಬುಲೆಟ್ ನಿಂದ ಗಾಯಗೊಂಡ ಸ್ಥಳೀಯ ಎಎಪಿ ನಾಯಕ ಮನದೀಪ್ ಸಿಂಗ್ ಬ್ರಾರ್ ಅವರನ್ನು ಪಂಜಾಬ್ನ ಜಲಾಲಾಬಾದ್ ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಅವರ ಗಂಭೀರ ಸ್ಥಿತಿಯನ್ನು ನೋಡಿ ಹೆಚ್ಚಿನ ಚಿಕಿತ್ಸೆಗಾಗಿ ಲುಧಿಯಾನದ ಜಿಲ್ಲಾ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಅಕಾಲಿ ನಾಯಕ ವರದೇವ್ ಸಿಂಗ್ ಮಾನ್ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಜಲಾಲಾಬಾದ್ ಎಎಪಿ ಶಾಸಕ ಜಗದೀಪ್ ಕಾಂಬೋಜ್ ಗೋಲ್ಡಿ ಆರೋಪಿಸಿದ್ದಾರೆ.
ಬ್ಲಾಕ್ ಅಭಿವೃದ್ಧಿ ಮತ್ತು ಪಂಚಾಯತ್ ಅಧಿಕಾರಿ (ಬಿಡಿಪಿಒ) ಕಚೇರಿಯ ಹೊರಗೆ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ತಿಳಿದ ಫಾಜಿಲ್ಕಾ ಹಿರಿಯ ಪೊಲೀಸ್ ಅಧಿಕಾರಿ ವರೀಂದರ್ ಸಿಂಗ್ ಬ್ರಾರ್ ಜಲಾಲಾಬಾದ್ಗೆ ಧಾವಿಸಿದ್ದಾರೆ.
ಮಾಜಿ ಸಂಸದ ಜೋರಾ ಸಿಂಗ್ ಮಾನ್ ಅವರ ಪುತ್ರ ವರದೇವ್ ಸಿಂಗ್ ನೋನಿ ಮಾನ್ ಅವರು ಶಾಲೆಗೆ ಸಂಬಂಧಿಸಿದ ಫೈಲ್ ಅನ್ನು ತೆರವುಗೊಳಿಸುವ ಬಗ್ಗೆ ಕೇಳಲು ಬಿಡಿಪಿಒ ಕಚೇರಿಗೆ ಬಂದಿದ್ದರು ಎಂದು ಬ್ರಾರ್ ಹೇಳಿದರು. ಬಿಡಿಪಿಓ ಅವರ ಮನವಿಯನ್ನು ನಿರಾಕರಿಸಿದ್ದರು. ಹೀಗಾಗಿ ಅಕಾಲಿ ನಾಯಕ ಮಾನ್ ಅಸಮಾಧಾನಗೊಂಡಿದ್ದು, ಕಚೇರಿಯಿಂದ ಹೊರನಡೆದರು.
ಕಚೇರಿಯ ಹೊರಗಡೆ ಅಕಾಲಿದಳ ನಾಯಕ ಮನದೀಪ್ ಸಿಂಗ್ ಬ್ರಾರ್ ಸಿಕ್ಕಿದ್ದು, ಅವರ ಜೊತೆಗೆ ಜಗಳವಾಗಿದೆ. ಈ ವೇಳೆ ಮಾನ್ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.