Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?


Team Udayavani, Oct 6, 2024, 5:04 PM IST

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

ಹೊಸದಿಲ್ಲಿ: ಸಿ-ವೋಟರ್ ಎಕ್ಸಿಟ್ ಪೋಲ್ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಅತಂತ್ರ ಅಸೆಂಬ್ಲಿಯನ್ನು ಅಂದಾಜಿಸಿದೆ. 95 ಸದಸ್ಯರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿ 40 ರಿಂದ 48 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ತೊಂಬತ್ತು ಶಾಸಕರು ಚುನಾಯಿತರಾಗಿದ್ದರೆ, ಐವರನ್ನು ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡುತ್ತಾರೆ.

47 ಸ್ಥಾನಗಳನ್ನು ಹೊಂದಿರುವ ಕಣಿವೆಯಲ್ಲಿ ಬಿಜೆಪಿಯ ಒಟ್ಟಾರೆ ಸಾಧನೆ ಕಳಪೆಯಾಗಿ ಉಳಿಯುವ ನಿರೀಕ್ಷೆಯಿದೆ. 2014 ರ ಚುನಾವಣೆಯಲ್ಲಿ ಯಾವುದೇ ಸ್ಥಾನಗಳನ್ನು ಪಡೆಯಲು ವಿಫಲವಾಗಿದ್ದ ಬಿಜೆಪಿ ಈ ಬಾರಿಯ ಹೆಚ್ಚಿನ ಪ್ರದರ್ಶನದ ನಿರೀಕ್ಷೆ ಕಾಣುತ್ತಿಲ್ಲ. ಈತನ್ಮಧ್ಯೆ, ಸಿ ವೋಟರ್‌ ಚುನಾವಣೋತ್ತರ ಸಮೀಕ್ಷೆ ಪ್ರಕಾರ, ಜಮ್ಮುವಿನಲ್ಲಿ ಪಕ್ಷವು ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಅಲ್ಲಿ ಒಟ್ಟು 43 ರಲ್ಲಿ 27-31 ಸ್ಥಾನಗಳನ್ನು ಪಡೆದುಕೊಳ್ಳುತ್ತದೆ ಎಂದು ವರದಿ ಹೇಳಿದೆ.

ಕಳೆದ ಐದು ವರ್ಷಗಳಲ್ಲಿ ಈ ಪ್ರದೇಶವನ್ನು ‘ನಯಾ ಕಾಶ್ಮೀರʼವನ್ನಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ವಾಕ್ಚಾತುರ್ಯ, ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಯತ್ತ ಗಮನಹರಿಸಿದ್ದರೂ, ಈ ʼಬದಲಾವಣೆʼ ಕೇಸರಿ ಪಕ್ಷಕ್ಕೆ ಮತಗಳಾಗಿ ಪರಿವರ್ತನೆಯಾಗಲಿಲ್ಲ.

ಸಯ್ಯದ್ ಅಲ್ತಾಫ್ ಬುಖಾರಿಯವರ ಅಪ್ನಿಯಂತಹ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದರೊಂದಿಗೆ ಕಣಿವೆಯಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸಲು ಮತ್ತು ತನ್ನ ಕಾರ್ಯಕರ್ತರನ್ನು ಬಲಪಡಿಸಲು ಶ್ರಮಿಸಿದ ಬಿಜೆಪಿಗೆ ಈ ‘ನಯಾ ಕಾಶ್ಮೀರ’ ದೃಷ್ಟಿ ಏಕೆ ಚುನಾವಣಾ ಲಾಭವಾಗಿ ಬದಲಾಗಲಿಲ್ಲ ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕುತ್ತದೆ.

2019ರ ಆಗಸ್ಟ್‌ ನಲ್ಲಿ ಕೇಂದ್ರ ಸರ್ಕಾರವು ಆರ್ಟಿಕಲ್‌ 370 ರದ್ದುಗೊಳಿಸಿದ ಬಳಿಕ ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನ ಕಿತ್ತು ಕೇಂದ್ರಾಡಳಿತ ಪ್ರದೇಶವನ್ನಾಗಿಸಿತ್ತು. ಪರಿಸ್ಥಿತಿ ತಹಬಂದಿಗೆ ಬರುತ್ತಿದ್ದಂತೆ, ನರೇಂದ್ರ ಮೋದಿ ಸರ್ಕಾರವು ಅಭಿವೃದ್ಧಿ, ಉದ್ಯೋಗಗಳು ಮತ್ತು ಭದ್ರತೆಯ ಭರವಸೆಗಳೊಂದಿಗೆ ‘ನಯಾ ಕಾಶ್ಮೀರʼದ ತನ್ನ ನಿರೂಪಣೆಯನ್ನು ಮುಂದಿಟ್ಟಿತು. ಆದರೆ, ತಮ್ಮ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುವ ಮೂಲಕ ಜನರು ಅನುಭವಿಸಿದ ನಷ್ಟದ ಭಾವನೆಯನ್ನು ಪರಿಹರಿಸಲು ಸರಿಯಾದ ಪ್ರಯತ್ನ ನಡೆಸಿಲ್ಲ ಎನ್ನುತ್ತದೆ ವರದಿ.

ಈತನ್ಮಧ್ಯೆ, ಪ್ರಾದೇಶಿಕ ಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ‘ಘನತೆ’ ಅಂಶವನ್ನು ಒತ್ತಿ ಹೇಳುವ ಮೂಲಕ, ಈ ನಡೆಯನ್ನು ಕಾಶ್ಮೀರ ವಿರೋಧಿ ಎಂದು ರೂಪಿಸಿತು. ಬಿಜೆಪಿಯನ್ನು ಕಾಶ್ಮೀರಿ ವಿರೋಧಿ ಎಂದು ಬಣ್ಣಿಸಿತು, ಇದು ಬಿಜೆಪಿಯ ಶಾಂತಿಯ ಅಭಿವೃದ್ಧಿಯ ತುಡಿತದ ನಡುವೆಯೂ ಜೀವಂತವಾಗಿ ಉಳಿದಿದೆ.

ಬಿಜೆಪಿಯ ‘ನಯಾ ಕಾಶ್ಮೀರʼತಂತ್ರವು ಸಾಮೂಹಿಕ ಜವಾಬ್ದಾರಿ ಮತ್ತು ಶಿಕ್ಷೆಯ ನೀತಿಯನ್ನು ಒಳಗೊಂಡಿತ್ತು. ಇದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದೆ. ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ಕಲ್ಲು ತೂರಾಟದ ವಿರುದ್ಧ ದೃಢವಾದ ಕ್ರಮಗಳನ್ನು ಸ್ವಾಗತಿಸಿದರೂ, ವಾಕ್ ಸ್ವಾತಂತ್ರ್ಯದ ಹಕ್ಕನ್ನು ನಿಗ್ರಹಿಸಲಾಗುತ್ತಿದೆ ಎಂದು ಅನೇಕ ಸ್ಥಳೀಯ ನಿವಾಸಿಗಳು ಭಾವಿಸಿದರು. ಭಿನ್ನಾಭಿಪ್ರಾಯವನ್ನು ನಿಗ್ರಹಿಸಲು ಭಯವನ್ನು ಬಳಸಲಾಗುತ್ತಿದೆ ಎಂಬ ವ್ಯಾಪಕ ಗ್ರಹಿಕೆಯು ಕಣಿವೆಯಲ್ಲಿ ಚುನಾವಣಾ ಹಿಡಿತವನ್ನು ಗಳಿಸುವ ಬಿಜೆಪಿಯ ಸಾಮರ್ಥ್ಯವನ್ನು ಸೀಮಿತಗೊಳಿಸಿದೆ.

ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ನಂತರ, ಈ ಪ್ರದೇಶದ ಹೆಚ್ಚಿನ ಸಂಖ್ಯೆಯ ವಿದ್ಯಾವಂತ ಆದರೆ ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡು ಬೃಹತ್ ಹೂಡಿಕೆಗಳ ಮೂಲಕ ಉದ್ಯೋಗ ಸೃಷ್ಟಿ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಅಲೆಯನ್ನು ಬಿಜೆಪಿ ಭರವಸೆ ನೀಡಿತ್ತು. ಆದರೆ, ಈ ನಿರ್ಣಾಯಕ ವಿಷಯಗಳಲ್ಲಿ ಗಮನಾರ್ಹ ಪ್ರಗತಿಯ ಕೊರತೆಯು ಜನರಲ್ಲಿ ಹತಾಶೆ ಮತ್ತು ದ್ರೋಹದ ಭಾವನೆಯನ್ನು ಬೆಳೆಸಿದೆ ಎನ್ನುತ್ತದೆ ವರದಿ.

ತನ್ನ ಚುನಾವಣಾ ಕಾರ್ಯತಂತ್ರದ ಭಾಗವಾಗಿ, ಬಿಜೆಪಿಯು ಅಪ್ನಿ ಪಾರ್ಟಿ ಮತ್ತು ಪೀಪಲ್ಸ್ ಕಾನ್ಫರೆನ್ಸ್‌ನಂತಹ ಹೊಸ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಎನ್‌ ಸಿ ಮತ್ತು ಪಿಡಿಪಿ ಯ ಸಾಂಪ್ರದಾಯಿಕ ಪ್ರಾಬಲ್ಯವನ್ನು ಮೀರಿ ವಿಸ್ತರಿಸಲು ಪ್ರಯತ್ನಿಸಿತು. ಆದರೆ, ಈ ಮೈತ್ರಿಗಳಲ್ಲಿ ಹೂಡಿಕೆಯು ಫಲ ನೀಡಲಿಲ್ಲ, ಏಕೆಂದರೆ ಈ ಪಕ್ಷಗಳು ಎನ್‌ ಸಿ ಅಥವಾ ಪಿಡಿಪಿಯಂತಹ ಸ್ಥಾಪಿತ ಪಕ್ಷಗಳಿಗೆ ಸವಾಲು ಹಾಕುವ ಸಾಮರ್ಥ್ಯವಿರುವ ಪ್ರಬಲ ರಾಜಕೀಯ ಶಕ್ತಿಗಳಾಗಿ ಹೊರಹೊಮ್ಮಲು ವಿಫಲವಾಗಿವೆ.

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.