Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

ಅಕ್ರಮವಾಗಿ ಪ್ರವೇಶಿಸುವ ಬೋಟ್‌ಗಳ ಮಾಲೀಕರ ವಿರುದ್ಧ ಕಾನೂನು ಕ್ರಮ, ದಂಡದ ಮೊತ್ತ 10 ಲಕ್ಷ ರೂ.ಗೆ ಹೆಚ್ಚಿಸಲು ಮೀನುಗಾರಿಕೆ ಇಲಾಖೆ ಪ್ರಸ್ತಾವನೆ

Team Udayavani, Oct 6, 2024, 5:50 PM IST

10

ಪಣಜಿ: ಗೋವಾದ ಕಡಲ ಗಡಿಗೆ ಅಕ್ರಮವಾಗಿ ನುಗ್ಗಿ ಬುಲ್ ಟ್ರಾಲಿಂಗ್ ಮಾಡುತ್ತಿದ್ದ ಉಡುಪಿ ಜಿಲ್ಲೆಯ ಮಲ್ಪೆಯ ಎರಡು ಮೀನುಗಾರಿಕಾ ಬೋಟ್ ಗಳನ್ನು ಗೋವಾ ರಾಜ್ಯ ಮೀನುಗಾರಿಕೆ ಇಲಾಖೆ ವಶಪಡಿಸಿಕೊಂಡಿದೆ.

ಶನಿವಾರ ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಕರಾವಳಿ ಪೊಲೀಸರು ಮತ್ತು ಸ್ಥಳೀಯ ಮೀನುಗಾರರು ಪಾಲ್ಗೊಂಡಿದ್ದರು. ವಶಪಡಿಸಿಕೊಂಡ ಬೋಟ್ ಗಳಲ್ಲಿದ್ದ ಮೀನುಗಳನ್ನು ಹರಾಜು ಹಾಕಿ ಬೋಟ್ ಮಾಲೀಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೋವಾ ರಾಜ್ಯ ಮೀನುಗಾರಿಕಾ ಸಚಿವ ನೀಲಕಂಠ ಹಳರ್ಣಕರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮೀನುಗಾರಿಕೆ ಅಧಿಕಾರಿಗಳೊಂದಿಗೆ ಸಚಿವ ಚರ್ಚೆ:
ಕಳೆದ ಕೆಲ ದಿನಗಳಿಂದ ಮಲ್ಪೆಯಿಂದ ಮೀನುಗಾರಿಕಾ ಬೋಟ್ ಗಳು ಗೋವಾ ಕಡಲ ಗಡಿ ಪ್ರವೇಶಿಸಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿವೆ ಎಂದು ಸ್ಥಳೀಯ ಮೀನುಗಾರರು ದೂರು ನೀಡಿದ್ದರು. ಆ ಬೋಟ್ ನಲ್ಲಿದ್ದ ಮೀನುಗಾರರು ಸ್ಥಳೀಯರಿಗೆ ತೊಂದರೆ ನೀಡಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಪೊಲೀಸರಿಗೆ ದೂರು ಸಲ್ಲಿಕೆಯಾಗಿತ್ತು. ಇದಾದ ಬಳಿಕ ಗೋವಾ ರಾಜ್ಯ ಮೀನುಗಾರಿಕಾ ಸಚಿವ ನೀಲಕಂಠ ಹಳರ್ಣಕರ್  ಕರ್ನಾಟಕದ ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆಯೂ ನಡೆಸಿದ್ದರು.

ಆದರೆ, ಮಲ್ಪೆಯಿಂದ ಬರುತ್ತಿದ್ದ ಮೀನುಗಾರಿಕಾ ಬೋಟ್ ಗಳು ಗೋವಾ ಪ್ರದೇಶ ಪ್ರವೇಶಿಸಿ ಮೀನುಗಾರಿಕೆ ನಡೆಸುತ್ತಿದ್ದವು ಎಂಬ ಆರೋಪವಿದೆ. ಇದಾದ ಬಳಿಕ ಇಂತಹ ಘಟನೆಗಳ ತಡೆಯಲು ಗೋವಾದ ಮೀನುಗಾರಿಕೆ ಇಲಾಖೆ ವಿಶೇಷ ಕಾರ್ಯಪಡೆ ನೇಮಿಸಿತ್ತು. ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್  ಅಂತಹ ಬೋಟ್ ಗಳ ವಿರುದ್ಧ ಕಠಿನ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದರು.

ಮತ್ತೆರಡು ಬೋಟ್‌ಗಳು ಪರಾರಿ: 
ಶನಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ಕರ್ನಾಟಕದ ಮಲ್ಪೆ ಮೀನುಗಾರಿಕಾ ಬೋಟ್‌ಗಳ ವಶಪಡಿಸಿಕೊಂಡು ಕ್ರಮ ಕೈಗೊಂಡಿದ್ದು, ಕಾರ್ಯಾಚರಣೆ ವೇಳೆ ಇನ್ನೆರಡು ಬೋಟ್‌ಗಳು ಪರಾರಿಯಾಗುವಲ್ಲಿ ಯಶಸ್ವಿಯಾಗಿದೆ ಎಂದು ಗೋವಾ ಮೀನುಗಾರಿಕಾ ಇಲಾಖೆ ಮಾಹಿತಿ ನೀಡಿದೆ. ವಶಪಡಿಸಿಕೊಂಡ ಮೀನುಗಾರಿಕಾ ಬೋಟ್‌ಗಳ ಪಣಜಿ ಜೆಟ್ಟಿಗೆ ತರಲಾಗಿದೆ. ಅಕ್ರಮ ಒಳ ನುಸುಳುವಿಕೆಯ ವಿರುದ್ಧ ಇದೇ ರೀತಿ ಕ್ರಮ ಮುಂದುವರಿಯಲಿದೆ ಎಂದು ಸಚಿವ ಹಳರ್ಣಕರ್ ಮಾಹಿತಿ ನೀಡಿದ್ದಾರೆ.

ದಂಡದ ಮೊತ್ತ ಹೆಚ್ಚಿಸಲು ಪ್ರಸ್ತಾವನೆ
ಮೀನುಗಾರಿಕಾ ಇಲಾಖೆಯ ಅಧೀಕ್ಷಕ ಚಂದ್ರೇಶ ಹಳದನಕರ ಮಾತನಾಡಿ, ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ನೀಡಿದ ಆದೇಶದಂತೆ ಇಲಾಖಾ ಅಧಿಕಾರಿಗಳ ಸಭೆ ನಡೆಸಲಾಗಿತ್ತು. ಅದರಂತೆ ಈ ಕ್ರಮ ಕೈಗೊಂಡಿದ್ದೇವೆ. ವಶಪಡಿಸಿಕೊಂಡ ಮೀನುಗಾರಿಕಾ ಬೋಟ್ ಗಳ ಮಾಲೀಕರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ದಂಡದ ಮೊತ್ತ ರೂ. 10 ಲಕ್ಷಕ್ಕೆ ಹೆಚ್ಚಿಸಲು ಇಲಾಖೆ ಪ್ರಕ್ರಿಯೆ ಆರಂಭಿಸಿದೆ. ಕಾನೂನು ಬದಲಾದರೆ ಈ ಮೊತ್ತವನ್ನು ಹೆಚ್ಚಿಸಲಾಗುವುದು ಎಂಬ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.