Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!
ಮನೆಗಳು ಜಲಾವೃತ, ದಿಢೀರ್ ಸುರಿದ ಮಳೆಗೆ ತತ್ತರಿಸಿ ಹೋದ ಗ್ರಾಮಸ್ಥರು
Team Udayavani, Oct 6, 2024, 8:01 PM IST
ಮಣಿಪಾಲ: ಹೆಬ್ರಿಯಲ್ಲಿ ರವಿವಾರ(ಅ6) ಮೇಘಸ್ಫೋಟ ಸಂಭವಿಸಿದ್ದು, ಧಾರಾಕಾರ ಮಳೆ, ಪ್ರವಾಹದಿಂದ ಜನರು ತತ್ತರಿಸಿ ಹೋದ ಘಟನೆ ವರದಿಯಾಗಿದೆ.
ಮಧ್ಯಾಹ್ನ 3.30ರಿಂದ ಸಂಜೆ 4 ಗಂಟೆವರೆಗೆ ಒಂದು ಗಂಟೆ ಕಾಲ ದಿಢೀರ್ ಮಳೆ ಸುರಿದಿದ್ದು, ಬಲ್ಲಾಡಿ, ಕಂತಾರ್ಬೈಲು ಗ್ರಾಮದ ಜನರು ನಲುಗಿ ಹೋಗಿದ್ದಾಾರೆ. ಒಂದು ಗಂಟೆಕಾಲ ಸುರಿದ ಧಾರಾಕಾರ ಮಳೆಗೆ ಗ್ರಾಮದ ಕೆಲವು ಮನೆಗಳು ಜಲಾವೃತಗೊಂಡಿದ್ದು, ಒಂದು ಕಾರು, 15ಕ್ಕೂ ಹೆಚ್ಚು ದನಕರುಗಳು, ಅಡಿಕೆ ಮರಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದೆ.
ಮಳೆಯಿಂದ ನಲುಗಿದ ಗ್ರಾಮದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದ್ದು, ಸ್ಥಳೀಯರು, ಅಧಿಕಾರಿಗಳು ದೌಡಾಯಿಸಿದ್ದಾರೆ. ಕಳೆದ ಹಲವು ದಿನಗಳಿಂದ ಮಳೆ ಪ್ರಮಾಣ ಕಡಿಮೆ ಇದ್ದು, ಬಿಸಿಲು-ಮೋಡ ಕವಿದ ವಾತಾವರಣ ಹೆಚ್ಚಿತ್ತು. ಈ ದಿಢೀರ್ ಮೇಘಸ್ಫೋಟದಿಂದ ಪ್ರವಾಹ ಸಂಭವಿಸಿದ್ದು, ಸ್ಥಳೀಯರಲ್ಲಿ ಹೆಚ್ಚಿನ ಆತಂಕ ಸೃಷ್ಟಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.