By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

3 ತಿಂಗಳಲ್ಲಿ 20 ದಿನ ಬಂದಿದ್ದೇನೆ ಅಂತಾ ಹೇಳ್ತಿದ್ದಾರಲ್ಲ ಏನು ಮಾಡಿದ್ರಿ ಬಂದು ಪಟ್ಟಿ ಕೊಡಿ: ಕೇಂದ್ರ ಸಚಿವ

Team Udayavani, Oct 6, 2024, 10:42 PM IST

HDK-Chennapattana

ಚನ್ನಪಟ್ಟಣ (ರಾಮನಗರ): ಚನ್ನಪಟ್ಟಣ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅನುದಾನ ತಂದಿದ್ದೇನೆ ಎಂದು ಹೇಳಿದ್ದಾರೆ. ಎಲ್ಲಿದೆ ಅನುದಾನ?, ಎಲ್ಲಿ ತಂದವ್ರೆ?, ಯಾವುದೋ ಬೋರ್ಡ್‌ಗಳಲ್ಲಿ ಮಾತ್ರವಾ? ಹಾಗಾದರೆ, ನಮ್ಮ ಅಧಿಕಾರಾವಧಿಯಲ್ಲಿ ಏನೂ ಅಭಿವೃದ್ಧಿ ಆಗಿಲ್ವ? ನಾನು ಅಭಿವೃದ್ಧಿ ಮಾಡಿದ್ದು, ಎಲ್ಲ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಕೋಡಂಬಹಳ್ಳಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ತಿಂಗಳಲ್ಲಿ 20 ದಿನ ಬಂದಿದ್ದೇನೆ ಅಂತಾ ಹೇಳ್ತಿದ್ದೀರಲ್ಲ ಏನು ಮಾಡಿದ್ರಿ ಬಂದು? ಪಟ್ಟಿ ಕೊಡಿ?, ಒಬ್ಬ 300 ಕೋಟಿ, ಇನ್ನೊಬ್ಬ 500 ಕೋಟಿ ಇನ್ವೆಸ್ಟ್‌ ಮಾಡಿದ್ದೇವೆ ಅಂತಾನೆ. ಸೇತುವೆಗಳ ನಿರ್ಮಾಣಕ್ಕೆ ನಾನು ಅನುಮತಿ ಕೊಡಿಸಿದ್ದೆ. ಅದಕ್ಕೆ ಚೆಕ್‌ ಡ್ಯಾಂ ಅಂತ ಪಕ್ಕದಲ್ಲಿ ಬೋರ್ಡ್‌ ಹಾಕೊಂಡು ಓಡಾಡ್ತಿದ್ದಾರೆ ಎಂದು ದೂರಿದರು.

ಚನ್ನಪಟ್ಟಣದ ಕಡೆ ನೀವು ತಲೆ ಹಾಕ್ತಿದ್ರಾ: 
“ಚನ್ನಪಟ್ಟಣದ ಸೀಟು ಖಾಲಿ ಇರೋದಕ್ಕೆ ಬಂದಿದ್ದೇನೆ’ ಎಂಬ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಗರಂ ಆದ ಎಚ್‌.ಡಿ.ಕುಮಾರಸ್ವಾಮಿ, ಚನ್ನಪಟ್ಟಣದ ಚೇರ್‌ ಖಾಲಿ ಇರೋದಕ್ಕೆ ಬಂದಿದ್ದೀರಾ? ಖಾಲಿ ಇಲ್ಲಾಂದಿದ್ರೆ ಬರ್ತಿರಲಿಲ್ಲವಾ? ಹಾಗಾದರೆ, ನೀವು ಪದೇ ಪದೆ ಇಲ್ಲಿಗೆ ಬರ್ತಿರೋದು ಕುರ್ಚಿಗಾಗಿ ತಾನೇ? ಇಲ್ಲವಾದ್ರೆ ಚನ್ನಪಟ್ಟಣದ ಕಡೆ ನೀವು ತಲೆ ಹಾಕ್ತಿದ್ರಾ, ತಿರುಗಿ ನೋಡ್ತಿರಲಿಲ್ಲ. ಚುನಾವಣೆ, ಕುರ್ಚಿ ಮೇಲೆ ಕಣ್ಣಿಟ್ಟು ಅಭಿವೃದ್ಧಿ ಅಂತಾ ನಾಟಕ ಮಾಡ್ತೀರಾ, ಚನ್ನಪಟ್ಟಣ ಜನರ ಬಗ್ಗೆ ನಿಜವಾಗಿ ಕಾಳಜಿ ಇದ್ದಿದ್ರೆ ಹೀಗೆ ಹೇಳ್ತಿದ್ರಾ, ಚುನಾವಣೆ ಮುಗಿದ ಮೇಲೆ ನೀವು ಮತ್ತೆ ಚನ್ನಪಟ್ಟಣ ಕಡೆ ಬರೋದಿಲ್ಲ. ಟಾಟಾ ಮಾಡ್ಕೊಂಡು ಹೋಗ್ತೀವೆ ಅನ್ನೋದೇ ಇವರ ಮಾತಿನ ಅರ್ಥ ಎಂದು ವಾಗ್ಧಾಳಿ ನಡೆಸಿದರು.

ಅಭ್ಯರ್ಥಿಯ ಪಕ್ಷಗಳ ಹೈಕಮಾಂಡ್‌ ನಿರ್ಧರಿಸುತ್ತೆ
ಎನ್‌ಡಿಎ ಅಭ್ಯರ್ಥಿ ಯಾರೇ ಆದ್ರೂ ಅವರನ್ನು ಗೆಲ್ಲಿಸಿ, ಹಾಗಾಂತ ನೀವು ನನಗೆ ಮಾತು ಕೊಡಿ, ನನಗೆ 3 ಬಾರಿ ಆಪರೇಷನ್‌ ಆಗಿದೆ. ನಿಮ್ಮ ಸೇವೆ ಮಾಡಲು ನಾನು ರಾಜಕೀಯದಲ್ಲಿ ಉಳಿದಿದ್ದೇನೆ. ದರೋಡೆ ಮಾಡುವವರ ಮಾತು ಕೇಳಬೇಡಿ. ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಿಖಿಲ್‌ ಇರ್ತಾರೋ, ಬೇರೆಯವರು ಇರ್ತಾರೋ ಅನ್ನೋದನ್ನ ಎರಡು ಪಕ್ಷಗಳ ಹೈಕಮಾಂಡ್‌ ನಿರ್ಧರಿಸುತ್ತೆ ಎಂದು ಹೇಳಿದರು.
ನಾಗಮಂಗಲದ ಪ್ರಕರಣದಲ್ಲಿ ಬಂಧಿತರಲ್ಲಿ ಮುಸಲ್ಮಾನರೇ ಹೆಚ್ಚಿದ್ರು. ಆದರೂ ನಾನು ನಮ್ಮ ಲೀಡರ್‌ಗಳಿಗೆ ಹೇಳಿ ಎಲ್ಲರನ್ನೂ ಬಿಡಿಸಿದ್ದೇನೆ. ಆ ಮಹಾನುಭಾವರು ಅವರನ್ನು ಬಿಡಿಸವ್ರಾ ಎಂದು ಎಚ್‌ಡಿಕೆ ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shiva-Kumar

By Polls: ಚನ್ನಪಟ್ಟಣದ ಅಭಿವೃದ್ಧಿ ನಾನೇ ಮಾಡುವೆ, ಅಭ್ಯರ್ಥಿ ನೆಪಕ್ಕೆ ಮಾತ್ರ: ಡಿಕೆಶಿ

2-ramanagara

Ramnagara: ನಾಲ್ಕು ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.