Congress; ಮತ್ತೆ ಪರಮೇಶ್ವರ್-ಜಾರಕಿಹೊಳಿ ಭೇಟಿ: ಯಾಕೆ ಕುತೂಹಲ?
ಮುಂದಿನ ಸಿಎಂ ಸತೀಶ್ ಜಾರಕಿಹೊಳಿ: ಘೋಷಣೆ!
Team Udayavani, Oct 7, 2024, 6:30 AM IST
ತುಮಕೂರು: ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕುಣಿಕೆ ಬಿಗಿಯಾಗುತ್ತಿದ್ದಂತೆ ಇನ್ನೊಂದು ಕಡೆ ಕಾಂಗ್ರೆಸ್ ಸರಕಾರದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಕಾಂಗ್ರೆಸ್ನ ದಲಿತ ನಾಯಕರು ಮೇಲಿಂದ ಮೇಲೆ ಭೇಟಿ ಯಾಗುತ್ತಿರುವುದು ಕುತೂಹಲಕ್ಕೆ ಕಾರಣ ವಾಗಿದೆ. ಇತ್ತೀಚೆಗಷ್ಟೇ ಗೃಹಸಚಿವ ಡಾ| ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಈಗ ಮತ್ತೂಮ್ಮೆ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ.
ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇರುವ ಗೆಸ್ಟ್ ಹೌಸ್ನಲ್ಲಿ ಪರಮೇಶ್ವರ್ ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಗೌಪ್ಯ ಮಾತುಕತೆ ನಡೆಸಿದರು. ಏನು ಮಾತನಾಡಿದ್ದಾರೆನ್ನುವುದು ತಿಳಿದು ಬಂದಿಲ್ಲ. ಸತೀಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಪರಮೇಶ್ವರ್ ನನ್ನನ್ನು ಊಟಕ್ಕೆ ಕರೆದಿದ್ದರು. ಹೀಗಾಗಿ ಊಟ ಮಾಡಲು ಬಂದಿದ್ದೆ ಅಷ್ಟೇ ಎಂದರು. ಬೇರೊಂದು ಕಾರ್ಯಕ್ರಮವೂ ಇಲ್ಲಿಯೇ ಇದ್ದ ಕಾರಣ ಬಂದಿದ್ದೆ. ಆಗ ಸಾಹೇಬ್ರನ್ನು ನೋಡ್ಕೊಂಡ್ ಹೋದೆ ಅಷ್ಟೇ, ಬೇರೆ ಏನು ಚರ್ಚೆ ನಡೆಯುತ್ತದೆ ನಮ್ಮ ನಡುವೆ ಎಂದು ಪ್ರಶ್ನಿಸಿದರು.
ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಬಗ್ಗೆ ಮಾಧ್ಯಮ ದವರ ಪ್ರಶ್ನೆಗೆ, ಅದು ಕೂಡ ಅಷ್ಟೇ, ಅವರು ನಮ್ಮ ರಾಷ್ಟ್ರೀಯ ಅಧ್ಯಕ್ಷರು. ಹೀಗಾಗಿ ಭೇಟಿಯಾಗಿದ್ದೇನೆ ಅಷ್ಟೇಎಂದರು. ದಲಿತ ಸಿಎಂ ಕೂಗಿನ ವಿಚಾರಕ್ಕೆ ಪ್ರತಿ ಕ್ರಿಯಿಸಿ, ದಲಿತ ಸಿಎಂ ವಿಚಾರದ ಪ್ರಸ್ತಾವನೆ ಸದ್ಯಕ್ಕಿಲ್ಲ, ಇದ್ದಾಗ ನಾವೇ ಕರೆದು ಹೇಳುತ್ತೇವೆ ಎಂದರು.
ನಮ್ಮ ಬೇಡಿಕೆ ಅಂತ ಸದ್ಯಕ್ಕೆ ಯಾವುದೂ ಇಲ್ಲ ಎಂದು ಜಾರಕಿಹೊಳಿ ಹೇಳಿದರು. ಸಿಎಂ ಹುದ್ದೆ ಖಾಲಿಯೇ ಇಲ್ಲ, ಯಾರಿಗೆ ಮಾಡ್ತೀರಿ? ಇರೋದು ಒಂದೇ ಸ್ಥಾನ, ಆ ತರಹದ ಸನ್ನಿವೇಶ ಇಲ್ಲ ಎಂದರು.
ಕುತೂಹಲ ಮೂಡಿಸುತ್ತಿರುವ ಭೇಟಿಗಳು
ಈಚೆಗೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಡಾ| ಜಿ. ಪರಮೇಶ್ವರ್ ನಿವಾಸಕ್ಕೆ ತೆರಳಿ ಸುಮಾರು ಅರ್ಧ ಗಂಟೆ ಗೌಪ್ಯ ಮಾತುಕತೆ ನಡೆಸಿದ್ದರು. ಬಳಿಕ ಸಚಿವ ಮಹದೇವಪ್ಪ ನಿವಾಸದಲ್ಲಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ್ದರು. ಮೂವರು ದಲಿತ ಸಚಿವರು ಒಂದೆಡೆ ಸೇರಿ ಚರ್ಚೆ ನಡೆಸಿದ್ದು ಕುತೂಹಲವನ್ನು ಹುಟ್ಟುಹಾಕಿತ್ತು.
ಇದಾದ ಬಳಿಕ ದಿಢೀರನೆ ದಿಲ್ಲಿಗೆ ತೆರಳಿದ್ದ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿದ್ದರು. ಈ ವೇಳೆ ತಮ್ಮ ಸಭೆಗಳ ಮಾಹಿತಿಯನ್ನು ಹೇಳಿ ಬಂದಿದ್ದಾರೆ ಎನ್ನಲಾಗಿದೆ. ಅಲ್ಲಿಂದ ಬಂದವರು ಈಗ ಪರಮೇಶ್ವರ್ ಅವರನ್ನು ಪುನಃ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.
ಮುಂದಿನ ಸಿಎಂ ಸತೀಶ್ ಜಾರಕಿಹೊಳಿ: ಘೋಷಣೆ!
ತುಮಕೂರಿನಲ್ಲಿ ನಡೆದ ದಲಿತ ಸಂಘರ್ಷ ಸಮಿತಿ ಕಾರ್ಯಕ್ರಮದಲ್ಲಿ, ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಅವರ ಮುಂದೆಯೇ ದಲಿತ ನಾಯಕರು ಮತ್ತು ಮುಖಂಡರು ಘೋಷಣೆ ಕೂಗಿದರು. ಆದರೆ ಜಾರಕಿಹೊಳಿ ಯಾವುದಕ್ಕೂ ಪ್ರತಿಕ್ರಿಯೆ ನೀಡದೆ ಹೊರಟರು.
ಯಾಕೆ ಕುತೂಹಲ?
ರಾಜ್ಯದಲ್ಲಿ ಪ್ರಸ್ತುತ ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆಗೆ ಆಗ್ರಹ
ಈ ಬೆನ್ನಲ್ಲೇ ಡಿಸಿಎಂ ಡಿಕೆಶಿ, ಪರಮೇಶ್ವರ್ ಭೇಟಿ, ಗೌಪ್ಯ ಮಾತುಕತೆ
ಅನಂತರ ಸತೀಶ್ ಜಾರಕಿಹೊಳಿ, ಪರಮೇಶ್ವರ್, ಮಹದೇವಪ್ಪ ಮಾತುಕತೆ
ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಜತೆ ಜಾರಕಿಹೊಳಿ ಗುಪ್ತ ಮಾತು
ಮತ್ತೆ ಪರಂ-ಜಾರಕಿಹೊಳಿ ಭೇಟಿಯಿಂದ ಗರಿಗೆದರಿದ ಕುತೂಹಲ
ತೆರೆಮರೆಯಲ್ಲಿ ಕಾಂಗ್ರೆಸ್ ಪಕ್ಷದೊಳಕ್ಕೆ ವಿಶೇಷ ಬೆಳವಣಿಗೆ: ವಿಶ್ಲೇಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್ಮನ್!
NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್ಡಿಕೆ ಪರೋಕ್ಷ ಸುಳಿವು
Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ
Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್
Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.