NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್ಡಿಕೆ ಪರೋಕ್ಷ ಸುಳಿವು
2028ಕ್ಕಿಂತ ಮೊದಲೇ ರಾಜ್ಯ ಸರಕಾರ ಪತನ ಎಚ್ಡಿಕೆ ಭವಿಷ್ಯ
Team Udayavani, Oct 7, 2024, 6:45 AM IST
ರಾಮನಗರ: ಎನ್ಡಿಎ ಅಭ್ಯರ್ಥಿಯನ್ನು ಉಪ ಚುನಾವಣೆ ಕಣಕ್ಕಿಳಿಸುತ್ತೇವೆ. ಇಲ್ಲಿ ಯಾರೇ ಅಭ್ಯರ್ಥಿ ಆದರೂ ಅವರನ್ನು ಗೆಲ್ಲಿಸಿ ಕೊಡಿ. ನೀವು ನನಗೆ ಮಾತು ಕೊಡಿ. ನಿಮಗೆ ದ್ರೋಹ ಮಾಡುವು ದಿಲ್ಲ, ನನ್ನನ್ನು ನಂಬಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ ಚನ್ನ ಪಟ್ಟಣದ ಜೆಡಿಎಸ್ ಕಾರ್ಯಕರ್ತರ ಮುಂದೆ ಭಾವನಾತ್ಮಕ ವಾಗಿ ಮಾತನಾಡಿದ್ದು, ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.
ಚನ್ನಪಟ್ಟಣ ತಾಲೂಕಿನ 5 ಜಿ.ಪಂ. ವ್ಯಾಪ್ತಿಯಲ್ಲಿ ಕಾರ್ಯ ಕರ್ತರ ಸಭೆ ನಡೆಸಿದ ಅವರು, ನಾನು ನಿಮ್ಮ ಮನೆ ಮಗ, ನೀವು ಹಾಲಾದರೂ ಕೊಡಿ, ವಿಷವಾದರೂ ಕೊಡಿ. ಕ್ಷೇತ್ರದ ಶಾಸಕನಾಗಿ ನಾನು ಒಳ್ಳೆಯ ಕೆಲಸ ಮಾಡಿದ್ದರೆ, ಗೆಲ್ಲಿಸಿಕೊಡಿ ಎಂದರು.
ನಾನು ಕ್ಷೇತ್ರಕ್ಕೆ ಬರದೇ ಹೋದರೂ ನನ್ನನ್ನು ಎರಡು ಬಾರಿ ಗೆಲ್ಲಿಸಿದ್ದೀರಿ. ನಾನು ನಿಮಗೆ ದ್ರೋಹ ಮಾಡಿಲ್ಲ, ಜಾತಿ, ಮತ, ಪಕ್ಷಭೇದ ತೊರೆದು ಕೆಲಸ ಮಾಡಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಆಶೀರ್ವದಿಸಿ ಎಂದು ಮನವಿ ಮಾಡಿದರು.
ಇನ್ನೊಂದು ವಾರದಲ್ಲಿ ಅಭ್ಯರ್ಥಿ ಫೈನಲ್
ಚನ್ನಪಟ್ಟಣ ಉಪ ಚುನಾವಣೆ ಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸಬೇಕು, ಇಲ್ಲೇ ಘೋಷಣೆ ಮಾಡಿ ಎಂದು ಕಾರ್ಯಕರ್ತರು ಆಗ್ರಹಿಸಿದರು. ಇನ್ನೊಂದು ವಾರದಲ್ಲಿ ಘೋಷಣೆ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದರು.
2028ಕ್ಕಿಂತ ಮೊದಲೇ ರಾಜ್ಯ ಸರಕಾರ ಪತನ: ಎಚ್ಡಿಕೆ ಭವಿಷ್ಯ
ರಾಜ್ಯ ಸರಕಾರದ ಕೌಂಟ್ ಡೌನ್ ಪ್ರಾರಂಭವಾಗಿದೆ. ಮುಂದಿನ ಚುನಾವಣೆಗೆ 2028ರ ವರೆಗೆ ಕಾಯಬೇಕಿಲ್ಲ. ಬಹುಶಃ ಅದಕ್ಕಿಂತ ಮೊದಲೇ ಬರಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್ಮನ್!
Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ
Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ
Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್
Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.