![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 7, 2024, 11:59 AM IST
ಬೆಂಗಳೂರು: ಪಾರ್ಟ್ ಟೈಮ್ ಕೆಲಸ ಕೊಡಿಸುವುದಾಗಿ ಟೆಲಿಗ್ರಾಂ ಆ್ಯಪ್ ಮೂಲಕ ಯುವಕನ ಸಂಪರ್ಕಿಸಿದ ಸೈಬರ್ ವಂಚಕರು, 2.58 ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹೊಸರೋಡ್ ನಿವಾಸಿ ಎ.ಬಿ.ಚರಣ್ ಕುಮಾರ್ ಎಂಬವರು ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು, ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಆಗಸ್ಟ್ನಲ್ಲಿ ಟೆಲಿಗ್ರಾಮ್ ಆ್ಯಪ್ ಮೂಲಕ ದೂರುದಾರ ಚರಣ್ ಕುಮಾರ್ ಅವರನ್ನು ಸಂಪರ್ಕಿಸಿದ್ದ ಅಪರಿಚಿತರು, ಪಾರ್ಟ್ ಟೈಮ್ ಕೆಲಸದ ಸಂದೇಶ ಕಳುಹಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಚರಣ್ ಕುಮಾರ್, ಕೆಲಸ ಪಡೆಯುವ ಬಗೆ ತಿಳಿಸುವಂತೆ ಕೇಳಿದ್ದಾರೆ. ಆಗ ದುಷ್ಕರ್ಮಿಗಳು ಮೊದಲಿಗೆ ಸ್ವಲ್ಪ ಹಣ ಕಟ್ಟಿಸಿಕೊಂಡು ಬಳಿಕ ಲಾಭವನ್ನು ಸೇರಿಸಿ ಹೆಚ್ಚಿನ ಹಣ ವಾಪಾಸ್ ಹಾಕಿದ್ದಾರೆ. ಬಳಿಕ ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂದು ಆಮಿಷವೊಡ್ಡಿದ್ದಾರೆ. ಅದನ್ನು ನಂಬಿದ ಚರಣ್ ಕುಮಾರ್, ದುಷ್ಕರ್ಮಿಗಳ ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತ-ಹಂತವಾಗಿ 2.58 ಲಕ್ಷ ರೂ.ವರ್ಗಾಯಿಸಿದ್ದಾರೆ. ಬಳಿಕ ದುಷ್ಕರ್ಮಿ ಗಳು ಯಾವುದೇ ಹಣ ನೀಡದೆ ವಂಚಿಸಿದ್ದು, ಸಂಪರ್ಕಕ್ಕೆ ಸಿಕ್ಕಿಲ್ಲ. ಅದರಿಂದ ಎಚ್ಚೆತ್ತ ಚರಣ್ಕುಮಾರ್ ವಂಚನೆಗೊ ಳಗಾಗಿದ್ದೇನೆ ಎಂದು ತಿಳಿದು, ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತಾಂತ್ರಿಕ ಕಾರ್ಯಾಚರಣೆ ಮೂಲಕ ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ. ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.