Sullia: ಹುಲಿಗಳಿಗೆ ಸಡ್ಡು ಹೊಡೆವ ಸಿಂಹಗಳು!; ನವರಾತ್ರಿ ಆರಂಭದಿಂದ ಕೊನೆವರೆಗೆ ಮಾತ್ರ ಸೇವೆ

ಗ್ರಾಮೀಣ ಭಾಗದಲ್ಲಿ ಹುಲಿಗಳಿಗಿಂತಲೂ ಶಾರ್ದೂಲ ಕುಣಿತದ್ದೇ ಪಾರಮ್ಯ; ಹೆಚ್ಚುತ್ತಿವೆ ತಂಡಗಳು

Team Udayavani, Oct 7, 2024, 12:49 PM IST

1

ಸುಳ್ಯ: ನವರಾತ್ರಿ ಸಂದರ್ಭದಲ್ಲಿ ಕರಾವಳಿ, ತುಳುನಾಡು ಭಾಗದಲ್ಲಿ ಹುಲಿ ವೇಷ ಕುಣಿತವೇ ಎಲ್ಲರ ಗಮನ ಸೆಳೆಯುತ್ತದೆ. ಆದರೆ ಸುಳ್ಯ, ಕಡಬ ಭಾಗದಲ್ಲಿ ಹುಲಿಗಳಿಗಿಂತ ಸಿಂಹಗಳ ಅಬ್ಬರವೇ ಹೆಚ್ಚು!

ದೇವಿಯನ್ನು ಸಿಂಹವಾಸಿನಿ ಎಂದೇ ಕರೆಯುತ್ತೇವೆ. ನವರಾತ್ರಿ ವೇಳೆ ಸಿಂಹಗಳು ಸಂಭ್ರಮಿಸುತ್ತವೆ ಎಂಬ ಕಾರಣಕ್ಕೆ ಶಾರ್ದೂಲ ಕುಣಿತ ಸೇವೆ ಹಿಂದಿನಿಂದಲೂ ಪ್ರಸಿದ್ಧ. ಇದು ಈಗಲೂ ಮುಂದುವರಿದಿದೆ. ಅಚ್ಚರಿ ಎಂದರೆ ಹುಲಿ ಕುಣಿತ ಎಲ್ಲೆಡೆ ವ್ಯಾಪಕತೆಯನ್ನು ಪಡೆಯುತ್ತಿರುವ ನಡುವೆ ಸಿಂಹ ನೃತ್ಯದ ತಂಡಗಳೂ ಹೆಚ್ಚುತ್ತಿವೆ.

ಸಿಂಹದ ಬಣ್ಣದ ಅಂಗಿ ಮತ್ತು ಪ್ಯಾಂಟ್‌ ಧರಿಸಿ, ಬಾಲ ಸಿಕ್ಕಿಸಿ, ತಲೆಗೆ ಸಿಂಹದಂತಹ ಮುಖವಾಡ ಧರಿಸಿ ಕುಣಿಯುವ ಶಾರ್ದೂಲ ನೃತ್ಯ ಹಿಂದೆ ದೇವರ ಸೇವೆಯ ಅವಿಭಾಜ್ಯ ಅಂಗವಾಗಿತ್ತು. ಶಾರ್ದೂಲ ಟೀಮ್‌ಗಳೇ ಇದ್ದವು. ಸಿಂಹದೊಂದಿಗೆ ಕೈಯಲ್ಲಿ ಕೋವಿ ಹಿಡಿದ ಬೇಟೆಗಾರ. ಸಿಂಹ ಮತ್ತು ಬೇಟೆಗಾರನ ಜುಗಲ್ಬಂದಿ ಭಾರಿ ಮನರಂಜನೆ ನೀಡುತ್ತದೆ. ಕೆಲವು ಕಡೆಗಳಲ್ಲಿ ಬೇಟೆಗಾರನ ಬದಲು ಜೋಕರ್‌ ವೇಷ ಧರಿಸಿದ ವ್ಯಕ್ತಿಯನ್ನೂ ಕಾಣಬಹುದಾಗಿದೆ.

ಇತ್ತೀಚೆಗೆ ಹಳದಿ ಸಿಂಹದ ಜತೆಗೆ ಬಿಳಿ ಸಿಂಹ, ಕಪ್ಪು ಸಿಂಹಗಳೂ ಇವೆ. ಕೆಲವರು ಇದೇ ಮಾದರಿಯಲ್ಲಿ ಕರಡಿ ವೇಷ ಹಾಕುತ್ತಾರೆ. ಗ್ರಾಮೀಣ ಭಾಗದಲ್ಲಿ ದಿರಸಿನ ಹುಲಿಗಳೂ ಇವೆ. ಇದಕ್ಕೆ ಬೊಂಬೆ ಮತ್ತು ಮತ್ತಿತರ ವೇಷ ಧರಿಸಿ ಸಾಥ್‌ ಸಿಗುತ್ತದೆ. ಕುಣಿತಕ್ಕೆ ತಾಸೆ, ಡೋಲು ನುಡಿಸುವವರು ಹಿಮ್ಮೇಳದಲ್ಲಿರುತ್ತಾರೆ.

ತಂಡಗಳ ಸಂಖ್ಯೆ ಹೆಚ್ಚಳ

  • ಕೆಲವು ವರ್ಷಗಳ ಹಿಂದೆ ಗ್ರಾಮೀಣ ಭಾಗದಲ್ಲಿ ನವರಾತ್ರಿ ಸಂದರ್ಭದಲ್ಲಿ ಊರಿನಲ್ಲಿ ಒಂದು ಶಾರ್ದೂಲ ತಿರುಗಾಡುತ್ತಿದ್ದರೆ ಈಗ 4-5 ಶಾರ್ದೂಲ ತಂಡಗಳು ಭೇಟಿ ನೀಡುತ್ತಿದೆ. ಪೇಟೆಗಳಲ್ಲಿ ಸುಮಾರು 20-30 ತಂಡಗಳನ್ನು ಕಾಣಬಹುದಾಗಿದೆ.
  • ಶಾರ್ದೂಲಕ್ಕೆ ಹುಲಿ ವೇಷಕ್ಕಿಂತ ಕಡಿಮೆ ಶ್ರಮ, ಕಡಿಮೆ ಖರ್ಚು. ತಂಡದಲ್ಲಿ ಕಡಿಮೆ ಸಂಖ್ಯೆಯಲ್ಲಿ ಜನ ಸಾಕು.
  • ಯಕ್ಷಗಾನದಲ್ಲಿ ಸಿಂಹ ಮತ್ತು ಮಹಿಷಾಸುರನ ನಡುವೆ ಯುದ್ಧ ನಡೆಯುವ ಮಾದರಿಯಲ್ಲಿ ಕೆಲವು ತಂಡಗಳು ಪ್ರದರ್ಶನ ನೀಡುವುದು ಉಂಟು.
  • ಇತ್ತೀಚೆಗೆ ಹುಲಿ ಕುಣಿತದ ಹಾಗೆ ಸಿಂಹಗಳೂ ಕಸರತ್ತು ಪ್ರದರ್ಶನಕ್ಕೆ ಆರಂಭಿಸಿವೆ.

ಕೆಲವು ವರ್ಷಗಳಿಂದ ನವರಾತ್ರಿ ಸಂದರ್ಭದಲ್ಲಿ ಸಿಂಹ ವೇಷ ಧರಿಸಿ ಕುಣಿಯುವ ತಂಡಗಳ ಸಂಖ್ಯೆ ಹೆಚ್ಚುತ್ತಿದೆ. ಈ ಮೊದಲು ಒಂದೆರಡು ತಂಡಗಳು ಮಾತ್ರವೇ ಮನೆ ಮನೆಗೆ ಭೇಟಿ ನೀಡಿ ಕುಣಿಯುತ್ತಿದ್ದರೆ ಇಂದು ತಂಡಗಳ ಸಂಖೆಯ 10-20ಕ್ಕೂ ಅಧಿಕ ಏರಿಕೆಗೊಂಡಿದೆ. ನವರಾತ್ರಿ ಸಂದರ್ಭದಲ್ಲಿ ಸಿಂಹ ವೇಷ ಧರಿಸಿ ಕುಣಿಯುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.
-ಎ.ಕೇಪು ಅಜಿಲ, ಸುಳ್ಯ, ವಿದ್ವಾಂಸರು, ಅರೆಭಾಷೆ-ತುಳು ಸಾಹಿತಿ, ಜಾನಪದ ಕಲಾವಿದರು, ದೆ„ವ ನರ್ತಕರು ಸುಳ್ಯ

ಶಾರ್ದೂಲ ನವರಾತ್ರಿಗೆ ಸೀಮಿತ
ಹುಲಿ ವೇಷವನ್ನು ನವರಾತ್ರಿ, ಕೃಷ್ಣ ಜನ್ಮಾಷ್ಟಮಿ ಸೇರಿ ಹಲವು ಸಂದರ್ಭಗಳಲ್ಲಿ ಕಾಣಬಹುದು. ಆದರೆ, ಶಾರ್ದೂಲ ವೇಷ ನವರಾತ್ರಿಯ ಒಂಬತ್ತು ದಿನಗಳು ಮಾತ್ರ. ನವರಾತ್ರಿಯ ಮೊದಲ ದಿನ ಶಾರ್ದೂಲ ವೇಷ ತಂಡ ಕುಣಿತ ಆರಂಭಿಸಿದರೆ, 9ನೇ ದಿನ ದೇವಿ ಕ್ಷೇತ್ರದಲ್ಲಿ ಸೇವೆ ನೀಡುವಲ್ಲಿಗೆ ಕುಣಿತ ಆ ವರ್ಷಕ್ಕೆ ಅಂತ್ಯವಾಗುತ್ತದೆ. ಇದರಲ್ಲೂ ಹರಕೆ ಸಮರ್ಪಿಸಲು ವೇಷ ಧರಿಸಿ ಕುಣಿಯುವುದು ಇದೆ.

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

2(1)

Puttur ಪಿಲಿಗೊಬ್ಬು: ಅಬ್ಬರಿಸಿದ ಪಿಲಿ; ಒಂದೆಡೆ ಖಾದ್ಯಗಳ ಘಮ; ಇನ್ನೊಂದೆಡೆ ಹುಲಿಗಳ ಗರ್ಜನೆ

Crime-2-Sulya

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shine shetty’s just married movie teaser out

Just Married: ಟೀಸರ್‌ನಲ್ಲಿ ʼಜಸ್ಟ್‌ ಮ್ಯಾರೀಡ್‌ʼ; ನಿರ್ಮಾಣದತ್ತ ಅಜನೀಶ್‌ ಲೋಕನಾಥ್‌

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.