Just Married: ಟೀಸರ್‌ನಲ್ಲಿ ʼಜಸ್ಟ್‌ ಮ್ಯಾರೀಡ್‌ʼ; ನಿರ್ಮಾಣದತ್ತ ಅಜನೀಶ್‌ ಲೋಕನಾಥ್‌


Team Udayavani, Oct 7, 2024, 4:33 PM IST

Shine shetty’s just married movie teaser out

ಸಂಗೀತ ನಿರ್ದೇಶನದಲ್ಲಿ ಬಿಝಿಯಾಗಿರುವ ಅಜನೀಶ್‌ ಲೋಕನಾಥ್‌ ಈಗ ಸದ್ದಿಲ್ಲದೇ ಸಿನಿಮಾವೊಂದನ್ನು ನಿರ್ಮಿಸಿದ್ದಾರೆ. ಇವರಿಗೆ ಸಿ.ಆರ್‌.ಬಾಬಿ ಅವರು ಸಾಥ್‌ ನೀಡುವ ಜೊತೆಗೆ ಸಿನಿಮಾದ ನಿರ್ದೇಶನದ ಹೊಣೆ ಕೂಡಾ ಹೊತ್ತಿದ್ದಾರೆ. ಆ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌’ ಎಂದು ಟೈಟಲ್‌ ಇಡಲಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ.

ನಿರ್ದೇಶಕರಾದ ಉಪೇಂದ್ರ, ನಿಥಿಲನ್‌ ಹಾಗೂ ಅಜಯ್‌ ಭೂಪತಿ ಜೊತೆಯಾಗಿ ಟೀಸರ್‌ ಬಿಡುಗಡೆ ಮಾಡಿ ತಂಡಕ್ಕೆ ಶುಭಕೋರಿದರು. ಚಿತ್ರದಲ್ಲಿ ಶೈನ್‌ ಶೆಟ್ಟಿ ಹಾಗೂ ಅಂಕಿತಾಅಮರ್‌ ನಾಯಕ-ನಾಯಕಿಯಾಗಿ ನಟಿಸಿದ್ದಾರೆ.

ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕಿ ಸಿ.ಆರ್‌.ಬಾಬಿ, “ಸಿನಿಮಾ ನಿರ್ದೇಶನ ನನ್ನ ಬಹು ವರ್ಷಗಳ ಕನಸು. ನನ್ನ ಮೊದಲ ನಿರ್ದೇಶನದ ಚಿತ್ರವನ್ನು ಅಜನೀಶ್‌ ನಿರ್ಮಾಣ ಮಾಡಿದ್ದಾರೆ. ಇನ್ನು ದಕ್ಷಿಣ ಭಾರತದ ಈ ಮೂವರು ಜನಪ್ರಿಯ ನಿರ್ದೇಶಕರು ನಮ್ಮ ಚಿತ್ರದ ಟೀಸರ್‌ ಬಿಡುಗಡೆ ಮಾಡಿಕೊಟ್ಟಿದ್ದು ತುಂಬಾ ಖುಷಿಯಾಗಿದೆ. ಟೀಸರ್‌ ಚೆನ್ನಾಗಿ ಬಂದಿದೆ ಎಂದರೆ ನನ್ನ ತಂಡದ ಸಹಕಾರವೇ ಕಾರಣ ಅವರೆಲ್ಲರಗೂ ಧನ್ಯವಾದ. ಸದ್ಯದಲ್ಲೇ ಜಸ್ಟ್‌ ಮ್ಯಾರೀಡ್‌ ನಿಮ್ಮ ಮುಂದೆ ಬರಲಿದೆ’ ಎಂದರು.

“ನನ್ನ ಮೊದಲ ಗುರು ನನ್ನ ತಂದೆ ಲೋಕನಾಥ್‌ ಅವರು. ಚಿತ್ರರಂಗದ ನನ್ನ ಗುರುಗಳು ಎಂದರೆ ಕೆ.ಕಲ್ಯಾಣ್‌ ಹಾಗೂ ಸಿ.ಆರ್‌.ಬಾಬಿ. ಅವರಿಬ್ಬರಿಗೂ ಧನ್ಯವಾದ ಹೇಳುತ್ತೇನೆ. ಬಾಬಿ ಅವರು ಉತ್ತಮ ಕಥೆ ಮಾಡಿಕೊಂಡಿದ್ದಾರೆ. ಅವರೆ ನಿರ್ದೇಶನ ಕೂಡ ಮಾಡಿದ್ದಾರೆ. ಈಗ ಟೀಸರ್‌ ಬಿಡುಗಡೆಯಾಗಿ, ಚಿತ್ರ ರಿಲೀಸ್‌ ಹಂತಕ್ಕೆ ತಲುಪಿದೆ’ ಎನ್ನುವುದು ಅಜನೀಶ್‌ ಲೋಕನಾಥ್‌ ಮಾತು.

ಚಿತ್ರದಲ್ಲಿ ಶೈನ್‌ ಶೆಟ್ಟಿ ನಾಯಕರಾಗಿ ನಟಿಸಿದ್ದಾರೆ. “ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು ಸಂತೋಷವಾಗಿದೆ. ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಬಾಬಿ ಹಾಗೂ ಅಜನೀಶ್‌ ಅವರು ಈ ಚಿತ್ರದ ಮೂಲಕ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟಿ ಅಂಕಿತಾಅಮರ್‌ ಅವರು ಉತ್ತಮ ಕಲಾವಿದೆ. ಅವರ ಕನ್ನಡ ಹಾಗೂ ನಟನೆ ಎರಡು ಚೆಂದ’ ಎಂದರು ಶೈನ್‌.

“ನಾನು ಅಜನೀಶ್‌ ಅವರ ಹಾಡುಗಳಿಗೆ ಅಭಿಮಾನಿ. ಒಂದು ದಿನ ಅವರೆ ಕರೆ ಮಾಡಿ, ನೀವೇ ನಮ್ಮ ಚಿತ್ರದ ನಾಯಕಿ ಎಂದರು. ಇದಕ್ಕಿಂತ ಭಾಗ್ಯ ಬೇಕೇ. ಸಿ.ಆರ್‌. ಬಾಬಿ ಅವರು ನಿರ್ದೇಶಕಿಯಾಗಿ ಮೊದಲ ಚಿತ್ರವನ್ನೇ ಎಲ್ಲರೂ ಮೆಚ್ಚುವ ಹಾಗೆ ನಿರ್ದೇಶಿಸಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಸಹನ ನನ್ನ ಪಾತ್ರದ ಹೆಸರು’ ಎಂದರು ನಾಯಕಿ ಅಂಕಿತಾ ಅಮರ್‌.

ಟಾಪ್ ನ್ಯೂಸ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

mutalik (2)

Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್

1-wqewqewq

BBK11; ನೀನೇನು ದೊಡ್ಡ ಡಾನ್ ಆ..!!;ಕ್ಯಾಪ್ಟನ್ ಹಂಸಾಗೆ ತಲೆನೋವಾದ ಜಗದೀಶ್

1-caa

Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yash shetty’s jungle mangal kannada movie

Jangal Mangal Movie: ಜಂಗಲ್‌ನಲ್ಲಿ ಮಂಗಲ್‌ ಲವ್‌ ಸ್ಟೋರಿ

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

fraudd

Bramavara: ಟಾಟಾ ಪ್ಲೇ ಅಳವಡಿಕೆ ನೆಪದಲ್ಲಿ ವಂಚನೆ

1

Udupi: ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.