Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!
ಕೋಮು ಬಣ್ಣ ಪಡೆದುಕೊಂಡ ಪ್ರಕರಣ.. ಮೂವರು ಆರೋಪಿಗಳ ಬಂಧನ..ವ್ಯಾಪಕ ಆಕ್ರೋಶ
Team Udayavani, Oct 7, 2024, 6:01 PM IST
ವಡೋದರಾ: ಗುಜರಾತ್ನ ವಡೋದರಾದಲ್ಲಿ 16 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಕೃತ್ಯ ನಡೆದ 48 ಗಂಟೆಗಳ ಒಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿಗೆ 1,100 ಸಿಸಿಟಿವಿ ಕೆಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ಮೂಲತಃ ಉತ್ತರ ಪ್ರದೇಶಕ್ಕೆ ಸೇರಿದವರಾಗಿದ್ದು, ಹತ್ತು ವರ್ಷಗಳಿಂದ ವಡೋದರಾದಲ್ಲಿ ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಮುನ್ನಾ ವಂಝಾರ (27), ಮುಮ್ತಾಜ್ ವಂಝಾರ (36) ಮತ್ತು ಶಾರುಖ್ ವಂಝಾರ (36) ಎಂದು ಗುರುತಿಸಲಾಗಿದೆ.
ಮೂವರೂ ವಡೋದರಾ ನಗರದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ನರಸಿಂಹ ಕೋಮಾರ್ ಸುದ್ದಿಗಾರರಿಗೆ ತಿಳಿಸಿದರು.
ನವರಾತ್ರಿಯ ಸಂಭ್ರಮದ ರಾತ್ರಿ ನಗರದ ಹೊರವಲಯದಲ್ಲಿ ಗರ್ಬಾ ಆಚರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಿದ್ದ ವೇಳೆ ಹದಿಹರೆಯದ ಹುಡುಗಿ ನಿರ್ಜನ ಪ್ರದೇಶದಲ್ಲಿ ಆಕೆಯ ಸ್ನೇಹಿತನೊಂದಿಗೆ ಹೋಗುತ್ತಿದ್ದಳು. ಈ ವೇಳೆ ಮೂವರು ತಡೆದು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಎರಡು ಬೈಕ್ ಗಳಲ್ಲಿ ಬಂದ ಐವರು ಹುಡುಗಿ ಮತ್ತು ಆಕೆಯ ಸ್ನೇಹಿತನನ್ನು ತಡೆದಿದ್ದು ಅವರಲ್ಲಿ ಇಬ್ಬರು ಸ್ಥಳದಿಂದ ತೆರಳಿದ್ದರು. ಮೂವರು ಅಪರಾಧ ಎಸಗಿದ್ದ, ಸಂತ್ರಸ್ತೆಯ ಮೊಬೈಲ್ ಫೋನ್ ಅನ್ನು ಕಸಿದುಕೊಂಡು ವಿಚಾರ ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದು, ಶೋಧ ಆರಂಭಿಸಿದ್ದರು. ಈ ಘಟನೆಯು ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದು, ಕೋಮು ವಿಚಾರವಾಗಿಯೂ ತಿರುಗಿದೆ. ನವರಾತ್ರಿ ಹಬ್ಬವನ್ನು ಆಚರಿಸಲು ರಾತ್ರಿ ವೇಳೆ ಹೊರಗೆ ಹೋಗುವ ಜನರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನೂ ಹುಟ್ಟುಹಾಕಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..
UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ
Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ
AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..
Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್
Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!
Bajpe: ವಿಷ ಸೇವನೆ; ವಿದ್ಯಾರ್ಥಿನಿ ಸಾ*ವು
Kundapura: ಸ್ಕೂಟಿ ಸ್ಕಿಡ್; ತಂದೆ-ಮಗನಿಗೆ ಗಾಯ
Vijayapura: ಮಿಸ್ಟರ್ ಯತ್ನಾಳ್, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.