Karnataka 2nd PUC; ಗ್ರಾಮೀಣ ಭಾಗದಲ್ಲಿ ಒಂದೇ ಕಾಲೇಜಿದ್ದರೆ ಅಲ್ಲೇ ಪ್ರಾಯೋಗಿಕ ಪರೀಕ್ಷೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರಿಷ್ಕೃತ ಸುತ್ತೋಲೆ

Team Udayavani, Oct 8, 2024, 6:40 AM IST

Exam 3

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಏಕೈಕ ಪದವಿಪೂರ್ವ ಕಾಲೇಜು ಇದ್ದರೆ ಅಲ್ಲಿಯ ವಿದ್ಯಾರ್ಥಿಗಳಿಗೆ ಅಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಹೇಳಿದೆ.

ಈ ಬಾರಿ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಯಾದೃಚ್ಛೀಕರಿಸಿ (ರ್‍ಯಾಂಡಮ್‌) ನಡೆಸುವ ಮತ್ತು ವಿದ್ಯಾರ್ಥಿಗಳಿಗೆ ತಾವು ಓದುತ್ತಿರುವ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಈ ಹಿಂದೆ ಹೊರಡಿ ಸಿದ್ದ ಸುತ್ತೋಲೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಎಸ್‌ಇಎಬಿಯು ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. ಅದರಂತೆ ಗ್ರಾಮೀಣ ಭಾಗದಲ್ಲಿ ಒಂದೇ ಪಿಯು ಕಾಲೇಜು ಇದ್ದರೆ ಅದರ ವಿದ್ಯಾರ್ಥಿಗಳಿಗೆ ತಮ್ಮದೇ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಆದರೆ ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿರುವ ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳ ವಿದ್ಯಾರ್ಥಿಗಳನ್ನು ಅಲ್ಲಿಗೆ ಸಮೀಪದ ಪರೀಕ್ಷಾ ಕೇಂದ್ರಗಳಿಗೆ ಸಂಯೋಜನೆ ಮಾಡುವಂತೆ ಸೂಚನೆ ನೀಡಲಾಗಿದೆ.

ಉಳಿದಂತೆ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ಅಲ್ಲಿರುವ ಮೂಲಸೌಕರ್ಯ ಸಾಮರ್ಥ್ಯದ ಮೇಲೆ ಹಂಚಿಕೆ ಮಾಡಬೇಕು ಮತ್ತು ಆ ಕೇಂದ್ರದ ಎಲ್ಲ ವಿದ್ಯಾರ್ಥಿಗಳು ಬೇರೆ ಕಾಲೇಜಿನವರಾಗಿರುತ್ತಾರೆ ಎಂದು ಕೆಎಸ್‌ಇಎಬಿ ಮತ್ತೂಮ್ಮೆ ಸ್ಪಷ್ಟ ಪಡಿಸಿದೆ.

ಸಮೀಪದ ಕಾಲೇಜಿಗೆ ಸಂಯೋಜನೆ
ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಗೆ ಸಂಯೋಜನೆಯಾಗಿರುವ ಕಾಲೇಜುಗಳ ವಿದ್ಯಾರ್ಥಿಗಳು ಈಗಾಗಲೇ ತಮ್ಮದಲ್ಲದ ಪ್ರಯೋಗಾಲಯದಲ್ಲಿ ಪ್ರಾಯೋಗಿಕ ಪರೀಕ್ಷೆಗಳನ್ನು ಈ ಹಿಂದಿನಿಂದಲೂ ಉತ್ತರಿಸುತ್ತ ಬಂದಿದ್ದಾರೆ. ಆದ್ದರಿಂದ ಪ್ರಾಯೋಗಿಕ ಕೇಂದ್ರವಿರುವ ಕಾಲೇಜಿನ ವಿದ್ಯಾರ್ಥಿಗಳನ್ನು ಸಮೀಪದ ಕಾಲೇಜಿಗೆ ಸಂಯೋಜಿಸಬೇಕು. ಇದರಿಂದ ಹೊಸ ಪರೀಕ್ಷಾ ಕೇಂದ್ರದಲ್ಲಿ ಎಲ್ಲ ವಿದ್ಯಾರ್ಥಿಗಳು ಏಕರೂಪದ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ಆಗುತ್ತದೆ ಎಂದು ಸೂಚನೆ ನೀಡಲಾಗಿದೆ.

ಸಂಯೋಜಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಅವರ ಕಾಲೇಜಿನ ಉಪನ್ಯಾಸಕರು ಆಂತರಿಕ ಪರೀಕ್ಷಕರಾಗಿರುತ್ತಾರೆ. ಆದ್ದರಿಂದ ಹೊಸ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆತಂಕ ಉಂಟಾಗದಂತೆ ಉಪನ್ಯಾಸಕರು ಗಮನ ಹರಿಸಬೇಕು.

ಪ್ರಾಯೋಗಿಕ ಪರೀಕ್ಷಾ ಕೇಂದ್ರವಾಗಿರುವ ಕಾಲೇಜುಗಳಲ್ಲಿ ಪ್ರಯೋಗಾಲಯಗಳನ್ನು ಸುಸಜ್ಜಿತವಾಗಿಡಬೇಕು. ಈ ಸಂಬಂಧ ಈಗಿನಿಂದಲೇ ಪ್ರಾಂಶುಪಾಲರು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಲಾಗಿದ್ದು, ಪ್ರಯೋಗದ ಉಪಕರಣಗಳು ಮತ್ತು ಮೂಲ ಸೌಕರ್ಯ ಒದಗಿಸುವ ಸಂಪೂರ್ಣ ಜವಾಬ್ದಾರಿಯನ್ನು ಪ್ರಾಂಶುಪಾಲರ ಹೆಗಲಿಗೆ ಹೊರಿಸಲಾಗಿದೆ. ಪ್ರಾಯೋಗಿಕ ಪರೀಕ್ಷೆಗೆ ವಿದ್ಯಾರ್ಥಿಯು ಉತ್ತರಿಸುವ ಪ್ರತೀ ವಿಷಯಕ್ಕೆ 9.60 ರೂ. ವೆಚ್ಚವನ್ನು ಮಂಡಳಿ ವತಿಯಿಂದ ಭರಿಸಲಾಗುತ್ತದೆ. ಆದ್ದರಿಂದ ಪ್ರಯೋಗಾಲಯಗಳಿಗೆ ಬೇಕಾಗುವ ಪರಿಕರಗಳನ್ನು ಈ ಮೊತ್ತದಿಂದ ಖರೀದಿಸಬಹುದು ಎಂದು ಕೆಎಸ್‌ಇಎಬಿ ಸೂಚನೆ ನೀಡಿದೆ.

ಉಪನ್ಯಾಸಕರ ಕಡ್ಡಾಯ ನೋಂದಣಿ
ಪ್ರತೀ ಉಪನ್ಯಾಸಕರು ಗರಿಷ್ಠ 4 ದಿನ ಮಾತ್ರ ಆಂತರಿಕ ಪರೀಕ್ಷಕರಾಗಿ ಕಾರ್ಯ ನಿರ್ವಹಿಸಲು ಅವಕಾಶವಿರುತ್ತದೆ. ಈಗಾಗಲೇ ಉಪನ್ಯಾಸಕರ ನೋಂದಣಿಗೆ ಪಿಯು ಎಕ್ಸಾಂ ಪೋರ್ಟಲ್‌ನಲ್ಲಿ ಲಾಗಿನ್‌ ಚಾಲ್ತಿಯಲ್ಲಿದ್ದು, ಉಪನ್ಯಾಸಕರು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗದ ಉಪನ್ಯಾಸಕರು ಪ್ರಾಯೋಗಿಕ ಪರೀಕ್ಷೆಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿಲ್ಲ ಎಂದು ಮಂಡಳಿಯ ಅಧ್ಯಕ್ಷರು ತಮ್ಮ ಪರಿಷ್ಕೃತ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

4

Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ

Bangladesh Cricket: Another senior player announced his farewell in the midst of the India series

Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ

Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

PDO misappropriation of lakhs of rupees: File a complaint

Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

4

Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.