Satish Jarakiholi ಸುತ್ತ ರಾಜಕೀಯ ಗಿರಕಿ: ಮಹದೇವಪ್ಪ ,ಪರಂ, ಖರ್ಗೆ ಬಳಿಕ ವಿಜಯೇಂದ್ರ ಭೇಟಿ!
Team Udayavani, Oct 8, 2024, 6:30 AM IST
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣವು ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿಯನ್ನು ಸುತ್ತಿಕೊಂಡಾಗಿನಿಂದಲೂ ರಾಜಕೀಯ ಬೆಳವಣಿಗೆಗಳು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸುತ್ತ ಗಿರಕಿ ಹೊಡೆಯುತ್ತಿವೆ.
ದಲಿತ ಸಿಎಂ ಕೂಗು, ಡಿಸಿಎಂ ಹುದ್ದೆ ಸೃಷ್ಟಿ, ಸಚಿವರ ದಿಲ್ಲಿ ಭೇಟಿ, ವಿರೋಧಿ ಬಣದ ನಾಯಕರ ಭೇಟಿ, ದಲಿತ ಸಚಿವರ ಸಭೆ, ವಿಪಕ್ಷ ನಾಯಕರ ಭೇಟಿಯಲ್ಲೂ “ಸಾಹುಕಾರ್’ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಸಿಎಂ ಬಣದಲ್ಲಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಕೇಂದ್ರವಾಗಿಯೇ ನಡೆಯುತ್ತಿರುವ ಈ ಬೆಳವಣಿಗೆಗಳು ಕುತೂಹಲ ಮೂಡಿಸಿವೆ.
ಮುಡಾ ಪ್ರಕರಣದಲ್ಲಿ ಕೋರ್ಟ್ ತೀರ್ಪಿನ ಅನಂತರ ಕಾಕತಾಳೀಯ ಎಂಬಂತೆ ಸತೀಶ್ ಜತೆಗೆ ಇತರ ರಾಜಕೀಯ ನಾಯಕರ ಭೇಟಿ ಮತ್ತು ಚರ್ಚೆಗಳು ಗರಿಗೆದರಿವೆ. ಈ ಎಲ್ಲ ರಹಸ್ಯ ಭೇಟಿಗಳಿಗೆ ನೀಡುವ ಕಾರಣ ಮಾತ್ರ “ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕಾಗಿ’ ಎಂಬುದಾಗಿರುತ್ತದೆ. ಆದರೆ ತೆರೆಮರೆಯಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ತಂತ್ರಗಳಿಗೆ ಪ್ರತಿತಂತ್ರ ಹೆಣೆಯುವುದೇ ಆಗಿರುತ್ತದೆ ಎಂದು ಮೂಲಗಳು ತಿಳಿಸಿವೆ.
ವಾರದಿಂದ ಈಚೆಗೆ ಭೇಟಿಗಳು ಚುರುಕುಗೊಂಡಿವೆ. ಮೊದಲು ಗೃಹ ಸಚಿವ ಡಾ| ಪರಮೇಶ್ವರ್ ಅವರು ಸತೀಶ್ ಜಾರಕಿಹೊಳಿ ಭೇಟಿ ಮಾಡಿದರು. ಮರುದಿನವೇ ಸಚಿವರಾದ ಎಚ್.ಸಿ. ಮಹದೇವಪ್ಪ, ಡಾ| ಪರಮೇಶ್ವರ ಮತ್ತು ಜಾರಕಿಹೊಳಿ ಪುನಃ ಸೇರಿದ್ದರು. ಅನಂತರ ಜಾರಕಿಹೊಳಿ ದಿಲ್ಲಿಗೆ ದೌಡಾಯಿಸಿ ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. ಅಲ್ಲಿಂದ ಬರುತ್ತಿದ್ದಂತೆ ತುಮಕೂರಿಗೆ ತೆರಳಿದ ಜಾರಕಿಹೊಳಿ ಅಲ್ಲಿ ಮತ್ತೆ ಡಾ| ಪರಮೇಶ್ವರ ಜತೆಗೆ ಮಾತುಕತೆ ನಡೆಸಿದರು. ಈ ನಡುವೆ ಸೋಮವಾರ ಡಿ.ಕೆ. ಸುರೇಶ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.
ಸಿಎಂ ಕುರ್ಚಿ: ಇನ್ನೂ ಬಸ್ ಬಂದಿಲ್ಲ: ಸೋಮವಾರದ ಭೇಟಿಯ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ ಜಾರಕಿಹೊಳಿ, “ಸಿಎಂ ಕುರ್ಚಿಯ ಮಾತುಗಳು ಒಂದು ವರ್ಷದಿಂದ ಕೇಳಿಬರುತ್ತಲೇ ಇವೆ. ಆದರೆ ಇನ್ನೂ ಬಸ್ ಬಂದಿಲ್ಲ. 224 ಜನರಿಗೂ ಸಿಎಂ ಆಗುವ ಆಸೆ ಇರುತ್ತದೆ. ಸಚಿವನಾದರೆ ಮೊದಲ ಮೆಟ್ಟಿಲು ಏರಿದಂತಾಗುತ್ತದೆ. ಸೀನಿಯರ್ ಆದಮೇಲೆ ಡಿಸಿಎಂ ಆಗಬಹುದು. ಅನಂತರ ಸಿಎಂ, ಆಮೇಲೆ ಕೇಂದ್ರ ಸಚಿವ ಸ್ಥಾನ ಇರುತ್ತದೆ. ಈಗ ಆ ಸನ್ನಿವೇಶ ಇಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದರು.
ಹಲವು ನಾಯಕರ ಭೇಟಿಗೆ ರಾಜಕೀಯ ಬೆರೆಸಬೇಕಿಲ್ಲ. ಅಭಿವೃದ್ಧಿ ಕಾರ್ಯಗಳಿಗಾಗಿ ಭೇಟಿ ಆಗಿರುತ್ತಾರೆ. ವಿಜಯೇಂದ್ರ ಭೇಟಿ ಮಾಡಿ ಶಿಕಾರಿಪುರ ರಸ್ತೆ ಕುರಿತು ಮಾತುಕತೆ ನಡೆಸಿದರು. ಬೇರೆ ಅರ್ಥ ಕಲ್ಪಿಸುವ ಆವಶ್ಯಕತೆ ಇಲ್ಲ. ಪರಮೇಶ್ವರ್ ಅವರನ್ನು ರವಿವಾರ ತುಮಕೂರಿನಲ್ಲೂ ಭೇಟಿಯಾಗಿದ್ದೆ. ಅದಕ್ಕೂ ಮುನ್ನ ಎಚ್.ಸಿ. ಮಹದೇವಪ್ಪ ಮನೆಯಲ್ಲೂ ಕೂಡಿದ್ದೆವು ಎಂದು ಸ್ಪಷ್ಟಪಡಿಸಿದರು.
ಪದೇ ಪದೆ ದಲಿತ ಸಚಿವರ ಭೇಟಿಯ ಬಗ್ಗೆ ಹೈಕಮಾಂಡ್ಗೆ ಮಾಹಿತಿ ಹೋಗುತ್ತದೆಯೇ ಎಂದು ಕೇಳಿದಾಗ, ನಾವೇನೂ ಪಕ್ಷದ ವಿರುದ್ಧವಾಗಿ ನಡೆದುಕೊಳ್ಳುತ್ತಿಲ್ಲ. ಒಂದು ವೇಳೆ ಹಾಗಾಗಿದ್ದರೆ ಭಯಪಡಬೇಕು. ನಾವ್ಯಾಕೆ ಭಯ ಪಡಬೇಕು ಎಂದು ಕೇಳಿದರು.
ಸಚಿವ ಸತೀಶ್ ಜಾರಕಿಹೊಳಿ ಜತೆಗೆ ಕ್ಷೇತ್ರದ ವಿಷಯ ಮಾತನಾಡಿದ್ದೇನೆಯೇ ವಿನಾ ರಾಜಕೀಯವಾಗಿ ಯಾವ ಚರ್ಚೆಯನ್ನೂ ಮಾಡಿಲ್ಲ.
– ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್
Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ
ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು
Ballari: ಮಧ್ಯಾರಾತ್ರಿ ಆರ್ ಟಿಓ ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ
Haryana: ಕೇವಲ 210 ದಿನ ಸಿಎಂ ಆದರೂ ನಯಾಬ್ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?
Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!
Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್ಬಿನ್ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ
Mumtaz Ali Case: ಪ್ರಮುಖ ಆರೋಪಿ ರೆಹಮತ್ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.