Manjeshwara: ಚುನಾವಣ ತಕರಾರು; ಕೆ. ಸುರೇಂದ್ರನ್ ಸಹಿತ 6 ಮಂದಿ ದೋಷಮುಕ್ತ
ನಗದು, ಮೊಬೈಲ್ ನೀಡಿ ನಾಮಪತ್ರ ವಾಪಸ್ ತೆಗೆಸಿದ್ದರೆಂಬ ಆರೋಪದ ಪ್ರಕರಣ
Team Udayavani, Oct 8, 2024, 7:20 AM IST
ಕಾಸರಗೋಡು: 2021ರಂದು ನಡೆದಿದ್ದ ಮಂಜೇಶ್ವರ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ನಗದು ಮತ್ತು ಮೊಬೈಲ್ ನೀಡಿ ನಾಮಪತ್ರ ವಾಪಸ್ ತೆಗೆಸಿದ್ದಾರೆಂಬ ಆರೋಪದ ಪ್ರಕರಣದಲ್ಲಿ ಬಿಜೆಪಿ ಕೇರಳ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಸಹಿತ 6 ಮಂದಿಯನ್ನು ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಬಿಜೆಪಿ ನೇತಾರರಾದ ಬಾಲಕೃಷ್ಣ ಶೆಟ್ಟಿ, ಕೆ. ಮಣಿಕಂಠ ರೈ, ಸುನಿಲ್ ನಾಯ್ಕ, ವೈ. ಸುರೇಶ್, ಲೋಕೇಶ್ ನೋಂಡಾ ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಕೆ. ಸುಂದರ ಅವರನ್ನು ಅಪಹರಿಸಿ, ಬೆದರಿಸಿ ನಾಮಪತ್ರ ಹಿಂದೆಗಿಸಿಕೊಂಡಿದ್ದಾಗಿಯೂ, ಇದಕ್ಕಾಗಿ 2.50 ಲ. ರೂ., ಮೊಬೈಲ್ ಫೋನ್ ಲಂಚ ನೀಡಿದ್ದಾಗಿ ಎಡರಂಗದ ಅಭ್ಯರ್ಥಿ ವಿ.ವಿ. ರಮೇಶನ್ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಅನಂತರ ಈ ಪ್ರಕರಣದ ತನಿಖೆಯನ್ನು ಜಿಲ್ಲಾ ಕ್ರೈಂಬ್ರಾಂಚ್ಗೆ ಹಸ್ತಾಂತರಿಸಲಾಗಿತ್ತು. ಜಿಲ್ಲಾ ಕ್ರೈಂಬ್ರಾಂಚ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ತಮ್ಮ ವಿರುದ್ಧ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣ ವಾಸ್ತವ ರಹಿತವಾದುದಾಗಿದ್ದು, ಆದ್ದರಿಂದ ಈ ಪ್ರಕರಣವನ್ನು ರದ್ದುಪಡಿಸಬೇಕೆಂದು ಕೆ.ಸುರೇಂದ್ರನ್ ಸಹಿತ ಇತರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana Results: ಬಿಜೆಪಿಯ ಕ್ಯಾಪ್ಟನ್ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!
Ballari: ಮಧ್ಯಾರಾತ್ರಿ ಆರ್ ಟಿಓ ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
Arrested: ಪಾಕ್ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್ಪಿನ್ ಸೆರೆ
Bengaluru: ಬಿಲ್ ಕೇಳಿದ್ದಕ್ಕೆ ಬಾರ್ ಕ್ಯಾಶಿಯರ್ಗೆ ಹಲ್ಲೆ
Bengaluru: ಆರ್.ಆರ್.ನಗರದ ಹೇರೋಹಳ್ಳಿ ಮುಖ್ಯ ರಸ್ತೆಯಲ್ಲೇ ಕೊಳವೆ ಬಾವಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.