Vitla: ಹೊಳೆಗೆ ಬಿದ್ದ ವೃದ್ಧರೊಬ್ಬರ ರಕ್ಷಿಸಿದ ಯುವಕರು; ಶ್ಲಾಘನೆ
Team Udayavani, Oct 8, 2024, 12:46 AM IST
ವಿಟ್ಲ: ವಿಟ್ಲ ಪರಿಸರದಲ್ಲಿ ರವಿವಾರ ಭಾರೀ ಮಳೆಗೆ ಚರಂಡಿ, ತೋಡು, ಹೊಳೆಗಳು ಉಕ್ಕಿ ಹರಿದಿದ್ದು, ಈ ಸಂದರ್ಭ ಆಯತಪ್ಪಿ ಹೊಳೆಗೆ ಬಿದ್ದ ವೃದ್ಧ ವ್ಯಕ್ತಿಯೊಬ್ಬರ ಯುವಕರಿಬ್ಬರು ರಕ್ಷಿಸಿದ್ದಾರೆ.
ವಿಟ್ಲಕಸಬಾ ಗ್ರಾಮದ ಸುರುಂಬಡ್ಕದಲ್ಲಿ ಒಕ್ಕೆತ್ತೂರು ಹೊಳೆಯ ಕಿಂಡಿ ಅಣೆಕಟ್ಟು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 70ರ ಹರೆಯದ ಉಮ್ಮರ್ ಆಯತಪ್ಪಿ ಹೊಳೆಗೆ ಬಿದ್ದಿದ್ದರು. ಕೂಡಲೇ ಅಲ್ಲೇ ಇದ್ದ ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಎಚ್. ಹಾಗೂ ಸುರೇಶ್ ಸಿ.ಎಚ್. ತಮ್ಮ ಜೀವವನ್ನು ಲೆಕ್ಕಿಸದೆ ಪ್ರವಾಹಕ್ಕೆ ಧುಮುಕಿ ಉಮ್ಮರ್ ಅವರನ್ನು ದಡಕ್ಕೆ ಎಳೆದು ತಂದು ಅಪಾಯದಿಂದ ಪಾರು ಮಾಡಿದ್ದಾರೆ.
ಜತೆಗಿದ್ದ ಸ್ಥಳೀಯರು ಕಾರ್ಯಾಚರಣೆಗೆ ಸಹಕರಿಸಿದರು. ಯುವಕರ ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.