Mysuru Dasara; ಗಜಪಡೆ ತೂಕ ಪರೀಕ್ಷೆ: ಅಭಿಮನ್ಯುವೇ ‘ಕ್ಯಾಪ್ಟನ್’
ಎಲ್ಲ 14 ಆನೆಗಳ ತೂಕ ಪರೀಕ್ಷೆ ಭೀಮನಿಗೆ 2ನೇ ಸ್ಥಾನ
Team Udayavani, Oct 8, 2024, 6:50 AM IST
ಮೈಸೂರು: ದಸರಾ ಗಜಪಡೆಯ ಎಲ್ಲ 14 ಆನೆಗಳಿಗೆ ಸೋಮವಾರ 2ನೇ ಹಂತದ ತೂಕ ಪರೀಕ್ಷೆ ನಡೆಯಿತು. ಕ್ಯಾಪ್ಟನ್ ಅಭಿಮನ್ಯು ಅತಿ ಹೆಚ್ಚು ತೂಕ ತೂಗಿದರೆ, ಭೀಮ ಕಳೆದ ಬಾರಿಗಿಂತ ಬರೋಬ್ಬರಿ 435 ಕೆ.ಜಿ. ತೂಕ ಹೆಚ್ಚಿಸಿಕೊಳ್ಳುವ ಮೂಲಕ 2ನೇ ಸ್ಥಾನದಲ್ಲಿದ್ದಾನೆ.
ಎಂದಿನಂತೆ ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್ ಅಭಿಮನ್ಯುವೇ ಹೆಚ್ಚು ಬಲಶಾಲಿಯಾಗಿದ್ದಾನೆ. ಆ. 21ರ ತೂಕ ಪರೀಕ್ಷೆಯಲ್ಲಿ 5,560 ಕೆ.ಜಿ., ಎರಡನೇ ಪರೀಕ್ಷೆಯಲ್ಲಿ 5,820 ಕೆ.ಜಿ. ತೂಕ ತೂಗಿದ್ದು 260 ಕೆ.ಜಿ. ಹೆಚ್ಚಿಸಿಕೊಂಡಿದ್ದಾನೆ. ಇನ್ನು ಕಿರಿಯ ಆನೆಗಳಲ್ಲಿ ಒಂದಾದ ಮತ್ತಿ ಗೋಡು ಶಿಬಿರದ ಭೀಮ ಒಂದೂವರೆ ತಿಂಗಳಲ್ಲಿ ಬರೋಬ್ಬರಿ 435 ಕೆ.ಜಿ. ತೂಕ ಹೆಚ್ಚಿಸಿ ಕೊಂಡಿದ್ದಾನೆ. ಮೊದಲ ತೂಕ ಪರೀಕ್ಷೆಯಲ್ಲಿ 4,945 ಕೆ.ಜಿ. ಇದ್ದ ಭೀಮ, ಎರಡನೇ ಪರೀಕ್ಷೆಯಲ್ಲಿ 5,380 ಕೆ.ಜಿ. ತೂಗಿದ್ದಾನೆ.
ಉಳಿದಂತೆ ಮೊದಲ ಬಾರಿ ದಸರಾದಲ್ಲಿ ಭಾಗವಹಿಸುತ್ತಿರುವ ಏಕಲವ್ಯನ ತೂಕ 4,730ರಿಂದ 5,095 ಕೆ.ಜಿ.ಗೆ ಏರಿದೆ. ಪ್ರಶಾಂತ್ 4,875ರಿಂದ 5,240ಕ್ಕೆ, ಸುಗ್ರೀವ 5,190ರಿಂದ 5,545ಕ್ಕೆ, ಲಕ್ಷ್ಮೀ 2,625ರಿಂದ 2480 ಕೆ.ಜಿ.ಗೆ ಹೆಚ್ಚಳವಾಗಿದೆ. ಗಜಪಡೆಯ ಹಿರಿಯ ಸದಸ್ಯೆ ವರಲಕ್ಷ್ಮೀ ಒಂದೂವರೆ ತಿಂಗಳಲ್ಲಿ ಕೇವಲ 60 ಕೆ.ಜಿ. ಮಾತ್ರ ಹೆಚ್ಚಾಗಿದೆ.
ಟಾಪ್ 5 ಆನೆಗಳ ತೂಕ (ಕೆ.ಜಿ.ಯಲ್ಲಿ)
ಆನೆ ಅ. 07ರಂದು ಆ. 24ರಂದು ಹೆಚ್ಚಿದ ತೂಕ
ಅಭಿಮನ್ಯು 5,820 5,560 260
ಸುಗ್ರೀವ 5,545 5,190 355
ಭೀಮ 5,380 4,945 435
ಗೋಪಿ 5,280 4,970 310
ಧನಂಜಯ 5,255 5,155 100
40.84 ಲೀ ಹಾಲು ಹಿಂಡಿದ ಹಸು!
ಮೈಸೂರು: ದಸರಾ ಉತ್ಸವ ಅಂಗವಾಗಿ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ನಗರದ ಜೆ.ಕೆ. ಮೈದಾನದಲ್ಲಿ ಆಯೋಜಸಿದ್ದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಆನೇಕಲ್ ತಾಲೂಕಿನ ಕಗ್ಗಲಿಪುರದ ರಾಮಚಂದ್ರರೆಡ್ಡಿ ಅವರ ಹಸು ಬರೋಬ್ಬರಿ 40.84 ಲೀಟರ್ ಹಾಲು ಹಿಂಡಿ ಪ್ರಥಮ ಸ್ಥಾನ ಪಡೆದುಕೊಂಡಿತು. ವಿವಿಧ ಭಾಗಗಳಿಂದ 8 ಹಸುಗಳು ಭಾಗವಹಿಸಿದ್ದು, ಬೆಳಗ್ಗೆ ಮತ್ತು ಸಂಜೆ ಎರಡು ಸಮಯದಲ್ಲಿ ಹಿಂಡಿದ ಒಟ್ಟು ಹಾಲಿನ ಪ್ರಮಾಣದಲ್ಲಿ ಹೆಚ್ಚು ಹಾಲು ನೀಡಿದ ಹಸುವಿಗೆ ಬಹುಮಾನ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್
Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ
ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು
Ballari: ಮಧ್ಯಾರಾತ್ರಿ ಆರ್ ಟಿಓ ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana: ಕೇವಲ 210 ದಿನ ಸಿಎಂ ಆದರೂ ನಯಾಬ್ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?
Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!
Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್ಬಿನ್ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ
Mumtaz Ali Case: ಪ್ರಮುಖ ಆರೋಪಿ ರೆಹಮತ್ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು
MGM, ಕುಂಜಿಬೆಟ್ಟು: ಇಂಟರ್ಲಾಕ್ ಅಳವಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.