Tirupati; ಹೆಚ್ಚುವರಿ 250 ಟನ್ ನಂದಿನಿ ತುಪ್ಪಕ್ಕೆ ಟಿಟಿಡಿ ಬೇಡಿಕೆ!
ಲಡ್ಡು ಪ್ರಕರಣದ ಪರಿಣಾಮ ತಿರುಪತಿಗೆ ಒಟ್ಟು 600 ಟನ್ ತುಪ್ಪ ಪೂರೈಕೆ
Team Udayavani, Oct 8, 2024, 7:20 AM IST
ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರೆಕೆ ತುಪ್ಪ ಬಳಸಲಾಗಿದೆ ಎಂಬ ವಿಚಾರ ದೇಶದಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನ ಸಮಿತಿ (ಟಿಟಿಡಿ) ಇದೀಗ ಕರ್ನಾಟಕ ಹಾಲು ಒಕ್ಕೂಟಕ್ಕೆ (ಕೆಎಂಫ್) ಮತ್ತೆ ಸುಮಾರು 250 ಟನ್ ಶುದ್ಧ ಹಸುವಿನ ತುಪ್ಪ ಪೂರೈಸುವಂತೆ ಕೋರಿದೆ. ಕೆಎಂಎಫ್ ಒಪ್ಪಿಗೆ ನೀಡಿದೆ.
ಈ ಹಿಂದೆ ತಿರುಪತಿ ಲಡ್ಡು ತಯಾರಿಗೆ ಕೆಎಂಎಫ್ ತುಪ್ಪವನ್ನೇ ಬಳಸಲಾಗುತ್ತಿತ್ತು. ಒಂದೆರಡು ವರ್ಷಗಳ ಹಿಂದೆ ಬೆಲೆ ಹೆಚ್ಚಳ ನೆಪವೊಡ್ಡಿ ಕೆಲವು ಖಾಸಗಿ ಹಾಲಿನ ಡೇರಿಗಳಿಂದ ತುಪ್ಪ ಖರೀದಿಸಲು ಆರಂಭಿಸಿತ್ತು. ಕೋಟ್ಯಂತರ ಭಕ್ತರ ನಂಬಿಕೆಯ ಬುನಾದಿಯನ್ನು ಅಲುಗಾಡಿಸಿರುವ ಕಹಿ ವಿವಾದದ ಅನಂತರ ಎಚ್ಚೆತ್ತುಕೊಂಡಿರುವ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಮತ್ತೆ ಕೆಎಂಎಫ್ನಿಂದ ಹೆಚ್ಚುವರಿ ತುಪ್ಪ ಖರೀದಿಸುವ ನಿರ್ಧಾರಕ್ಕೆ ಬಂದಿದೆ.
250 ಟನ್ ನಂದಿನಿ
ತುಪ್ಪ ಪೂರೈಕೆಗೆ ಸಿದ್ಧತೆ
ತಿರುಪತಿ ದೇವಸ್ಥಾನ ಆಡಳಿತ ಮತ್ತು ಕೆಎಂಎಫ್ ತುಪ್ಪ ಪೂರೈಕೆ ಸಂಬಂಧ ಒಡಬಂಡಿಕೆ ಮಾಡಿಕೊಂಡಿವೆ. ಕಳೆದ ಸೆಪ್ಟಂಬರ್ನಿಂದಲೇ 3 ತಿಂಗಳು 350 ಟನ್ ತುಪ್ಪ ಪೂರೈಸುವ ಪ್ರಕ್ರಿಯೆ ಆರಂಭವಾಗಿದೆ. ಮತ್ತೆ ಹೆಚ್ಚುವರಿಯಾಗಿ 250 ಟನ್ ಹಸುವಿನ ತುಪ್ಪಕ್ಕೆ ಬೇಡಿಕೆ ಸಲ್ಲಿಸಿದೆ ಎಂದು ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ಹೇಳಿದ್ದಾರೆ.
7,500 ಟನ್ ದಾಸ್ತಾನು
ಕರ್ನಾಟಕ ಹಾಲು ಒಕ್ಕೂಟದಲ್ಲಿ ಸುಮಾರು 7,500 ಟನ್ ತುಪ್ಪ ದಾಸ್ತಾನು ಇದೆ. ಇದಲ್ಲದೆ 2,500 ಟನ್ ತುಪ್ಪವನ್ನು ಚಿಲ್ಲರೆ ಮತ್ತು ಇತರ ಉದ್ದೇಶಗಳಿಗಾಗಿ ಪೂರೈಸಲಾಗುತ್ತಿದೆ. ಭಕ್ತರಿಗೆ ಪ್ರಸಾದ ಮತ್ತು ಇತರ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ನಂದಿನಿ ತುಪ್ಪ ಬಳಕೆಯನ್ನು ರಾಜ್ಯ ಸರಕಾರವು ಕಡ್ಡಾಯಗೊಳಿಸಿದ ಅನಂತರ ಕೆಎಂಎಫ್ ತುಪ್ಪಕ್ಕೆ ಈಗ ರಾಜ್ಯವ್ಯಾಪಿ ಹಲವಾರು ಧಾರ್ಮಿಕ ಸಂಸ್ಥೆಗಳು ಮತ್ತು ದೇವಾಲಯಗಳಿಂದ ಬೇಡಿಕೆ ಬರುತ್ತಿದೆ ಎಂದು ಕೆಎಂಎಫ್ನ ಮಾರಾಟ ವಿಭಾಗದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೆಎಂಎಫ್ ಈಗಾಗಲೇ ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಧರ್ಮಸ್ಥಳ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಕಟೀಲು ದುರ್ಗಾ ಪರಮೇಶ್ವರೀ ದೇವಸ್ಥಾನ ಮತ್ತು ಇತರ ದೇವಸ್ಥಾನಗಳಿಗೆ ತುಪ್ಪವನ್ನು ಪೂರೈಸುತ್ತಿದೆ. ಟಿಟಿಡಿ ಪ್ರಸ್ತುತ ಕೆಎಂಎಫ್ ತುಪ್ಪವನ್ನು ಕೆಜಿಗೆ 475 ರೂ.ಗೆ ಖರೀದಿಸುತ್ತಿದೆ ಎಂದು ಹೇಳಿದ್ದಾರೆ.
ಟಿಟಿಡಿ ಹೆಚ್ಚುವರಿ ನಂದಿನಿ ತುಪ್ಪ ಖರೀದಿ ಮಾಡುವ ಸಂಬಂಧ ಬೇಡಿಕೆ ಸಲ್ಲಿಸಿದೆ. ಇತ್ತೀಚಿನ ಟೆಂಡರ್ನಂತೆ ಹೆಚ್ಚುವರಿ ತುಪ್ಪವನ್ನು ಪೂರೈಸಲಾಗುತ್ತದೆ.ಟಿಟಿಡಿಯ ಸೂಚನೆ ಬಂದಾಗ ಪೂರೈಸಲು ಸಿದ್ಧರಿದ್ದೇವೆ.
– ಎಂ.ಕೆ. ಜಗದೀಶ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ
ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು
Ballari: ಮಧ್ಯಾರಾತ್ರಿ ಆರ್ ಟಿಓ ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ
Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ
Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು
Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ
Haryana Results: ಬಿಜೆಪಿಯ ಕ್ಯಾಪ್ಟನ್ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!
Ballari: ಮಧ್ಯಾರಾತ್ರಿ ಆರ್ ಟಿಓ ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
Arrested: ಪಾಕ್ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್ಪಿನ್ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.