Famous Goddess Temple: ಅಭಯಪ್ರದಾಯಿನಿ ಶಕ್ತಿಮಾತೆ ಕನಕದುರ್ಗಾ ದೇವಾಲಯ

ನವರಾತ್ರಿ- ನವದೇವಿ: ಆದಿ ಶಂಕರಾಚಾರ್ಯರು ದೇಗುಲಕ್ಕೆ ಭೇಟಿ ನೀಡಿ ಶ್ರೀಚಕ್ರ ಪ್ರತಿಷ್ಠಾಪಿಸಿದ ಬಳಿಕ ಹೆಚ್ಚಿದ ಭಕ್ತರ ದಂಡು

Team Udayavani, Oct 8, 2024, 7:27 AM IST

Kanaka-Durga

ನಾಡಿನೆಲ್ಲೆಡೆ ಈಗ ನವರಾತ್ರಿಯ ಸಂಭ್ರಮ. ಈ ಹಬ್ಬವನ್ನು ದೇಶದೆಲ್ಲೆಡೆ ಅತ್ಯಂತ ವೈಭವ, ಸಡಗರಗಳಿಂದ ಆಚರಿಸಲಾಗುತ್ತಿದೆ. ದೇಶಾದ್ಯಂತ ಇರುವ ದುರ್ಗಾದೇವಿಯ ದೇವಾಲಯಗಳಲ್ಲಿ ಭಕ್ತರು ವಿಶೇಷ ಶ್ರದ್ಧಾಭಕ್ತಿಯಿಂದ ಶಕ್ತಿಮಾತೆಯ ಆರಾಧನೆಯಲ್ಲಿ ತೊಡಗಿದ್ದಾರೆ. ನವರಾತ್ರಿಯ ಈ ಸಂದರ್ಭದಲ್ಲಿ ದೇಶದ ಒಂಬತ್ತು ಪ್ರಸಿದ್ಧ ದೇವಿ ದೇವಾಲಯಗಳನ್ನು ಸಂಕ್ಷಿಪ್ತವಾಗಿ ಪರಿಚಯಿಸುವ “ನವರಾತ್ರಿ- ನವದೇವಿ’ ಲೇಖನ ಮಾಲಿಕೆಯಲ್ಲಿ ಈ ದಿನ ಆಂಧ್ರಪ್ರದೇಶದ ವಿಜಯವಾಡಾದ ಕನಕದುರ್ಗಾ ದೇವಾಲಯ.

ಆಂಧ್ರಪ್ರದೇಶದ ವಿಜಯವಾಡಾದಲ್ಲಿರುವ ಶ್ರೀ ದುರ್ಗಾ ಮಲ್ಲೇಶ್ವರ ಸ್ವಾಮಿ ವರ್ಲಾ ದೇವಸ್ಥಾನಂ, “ಕನಕದುರ್ಗಾ ದೇವಾಲಯ’ ವೆಂದು ಪ್ರಸಿದ್ಧಿಯನ್ನು ಪಡೆದಿದೆ. ಕೃಷ್ಣಾ ನದಿಯ ದಡದಲ್ಲಿರುವ ಇಂದ್ರಕೀಲಾದ್ರಿ ಬೆಟ್ಟದ ಮೇಲೆ ಕನಕದುರ್ಗಾ ದೇವಿ ಸ್ವಯಂಭೂ ಆಗಿ ನೆಲೆಯಾದಳು ಎಂಬ ಪೌರಾಣಿಕ ಐತಿಹ್ಯ ಈ ದೇಗುಲಕ್ಕಿದೆ. ಶಕ್ತಿ ಪೀಠಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಈ ದೇಗುಲದಲ್ಲಿನ ಪ್ರಧಾನ ದೇವಿಯಾದ ಕನಕದುರ್ಗಾ ಮಾತೆ ಅಭಯಪ್ರದಾಯಿನಿ ಆಗಿ, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಶಕ್ತಿಮಾತೆಯಾಗಿದ್ದಾಳೆ.

ಕಾಳಿಕಾ ಪುರಾಣ, ಸಪ್ತಶತಿ, ವೇದಗಳಲ್ಲಿ ಇಂದ್ರಕೀಲಾದ್ರಿಯಲ್ಲಿ ಕನಕದುರ್ಗಾ ದೇವಿ ನೆಲೆ ನಿಂತ ಬಗ್ಗೆ ಉಲ್ಲೇಖವಿದೆ. ತ್ರಿತೇಯ ಕಲ್ಪದಲ್ಲಿ ದೇವಿಯನ್ನು ಸ್ವಯಂಭೂ ಎಂದು ಹೇಳಲಾಗಿದೆ. ಕನಕದುರ್ಗೆಯು ಮಹಿಷಾಸುರನನ್ನು ಸಂಹರಿಸಿದಳು ಎನ್ನುವ ಕಥೆಯೂ ಇಲ್ಲಿ ಜನಜನಿತವಾಗಿದೆ. ಮಹಾಭಾರತದಲ್ಲಿಯೂ ಈ ದೇಗುಲ, ದೇವಿಯ ಬಗೆಗೆ ಉಲ್ಲೇಖವಿದೆ. ಇಲ್ಲಿನ ದೇವಿಯು ಉಗ್ರ ಸ್ವರೂಪಿಣಿಯಾಗಿರುವುದರಿಂದ ಋಷಿಮುನಿಗಳನ್ನು ಹೊರತುಪಡಿಸಿ, ಜನಸಾಮಾನ್ಯರು ಬೆಟ್ಟವನ್ನೇರಲು ಹಿಂದೇಟು ಹಾಕುತ್ತಿದ್ದರು. ಆದಿ ಶಂಕರಾಚಾರ್ಯರು ದೇಗುಲಕ್ಕೆ ಭೇಟಿ ನೀಡಿದ ವೇಳೆ ಶ್ರೀಚಕ್ರವನ್ನು ಪ್ರತಿಷ್ಠಾಪಿಸಿ, ವೈದಿಕ ವಿಧಿ ವಿಧಾನಗಳನ್ನು ಆರಂಭಿಸಿದ ಬಳಿಕವೇ ಇಲ್ಲಿಗೆ ಭಕ್ತರ ದಂಡೇ ಹರಿದುಬರತೊಡಗಿತು.

ಈ ದೇಗುಲದಲ್ಲಿ ಆಭರಣಗಳಿಂದ ಅಲಂಕರಿಸಲ್ಪಟ್ಟ, 8 ಕೈಗಳಲ್ಲಿ ವಿವಿಧ ಆಯುಧಗಳನ್ನು ಹಿಡಿದು, ಮಹಿಷಾಸುರನನ್ನು ವಧಿಸುವ ರೂಪದಲ್ಲಿ ಕನಕದುರ್ಗೆಯ 4 ಅಡಿ ಎತ್ತರದ ಪ್ರತಿಮೆಯಿದೆ. ಕನಕದುರ್ಗಾ ದೇವಿಯನ್ನು ಮಹಾಲಕ್ಷ್ಮೀ, ಲಕ್ಷ್ಮೀ ದುರ್ಗಾ ಎಂದು ಕರೆಯಲಾಗುತ್ತದೆ. ಲಕ್ಷ್ಮೀ ದೇವಿಗೆ ಮಾಡಲಾಗುವ ಪೂಜೆಯನ್ನು ಇಲ್ಲಿ ದೇವಿಗೆ ಮಾಡಲಾಗುತ್ತದೆ. ಆಷಾಢ ಮಾಸದಲ್ಲಿ ವಾರ್ಷಿಕ ಶಾಕಂಬರಿ ಹಬ್ಬವನ್ನು ತರಕಾರಿ, ಕೃಷಿ ಬೆಳೆಗಳನ್ನು ದೇವಿಗೆ ಅರ್ಪಿಸಿ ವಾರ್ಷಿಕ ಶಾಕಂಬರಿ ಹಬ್ಬವನ್ನು ಆಚರಿಸಲಾಗುತ್ತದೆ. ಶ್ರಾವಣ ಮಾಸದಲ್ಲಿ ಪ್ರತೀ ಶುಕ್ರವಾರ ವರಮಹಾಲಕ್ಷ್ಮೀ ವ್ರತವನ್ನು ಮಾಡಲಾಗುತ್ತದೆ. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಈ ವೇಳೆ ಬೆಟ್ಟವನ್ನೇರಿ ದೇವಿಯ ದರುಶನ ಪಡೆಯುತ್ತಾರೆ.

ಇನ್ನು ದಸರಾ ಅಥವಾ ನವರಾತ್ರಿಯ ವೇಳೆ ದೇಗುಲದಲ್ಲಿ ಉತ್ಸವದ ಮಾದರಿಯಲ್ಲಿ ವಿಶೇಷ ಪೂಜೆ, ಪುನಸ್ಕಾರಗಳು ನೆರವೇರುತ್ತವೆ. ಬೆಟ್ಟದ ಕೆಳಗೆ ಹರಿಯುವ ಕೃಷ್ಣಾ ನದಿಯಲ್ಲಿ ತೀರ್ಥಸ್ನಾನಗೈದು ಮೆಟ್ಟಿಲುಗಳ ಮೂಲಕ ಬೆಟ್ಟವನ್ನು ಏರಿ ಕನಕದುರ್ಗೆಯ ದರುಶನ ಪಡೆಯುತ್ತಾರೆ. 1960ರ ದಶಕದ ಅಂತ್ಯದಲ್ಲಿ ಬೆಟ್ಟವನ್ನೇರಲು ರಸ್ತೆಗಳನ್ನು ನಿರ್ಮಿಸಲಾಗಿದೆ. ಮೆಟ್ಟಿಲುಗಳನ್ನೇರಿ ದೇವಿಯ ದರುಶನ ಪಡೆದು ಪ್ರಾರ್ಥಿಸಿದರೆ ಸಂಕಷ್ಟಗಳೆಲ್ಲವೂ ನಿವಾರಣೆಯಾಗಿ, ಇಷ್ಟಾರ್ಥಸಿದ್ಧಿಯಾಗುತ್ತದೆ ಎಂಬ ನಂಬಿಕೆ ಇರುವುದರಿಂದ ಭಕ್ತರು ಮೆಟ್ಟಿಲುಗಳ ಮೂಲಕವೇ ಬೆಟ್ಟವನ್ನು ಏರಿ ದೇವರ ದರುಶನ ಪಡೆಯುತ್ತಾರೆ.

ಟಾಪ್ ನ್ಯೂಸ್

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Chagoes-2

Welcome Development: ಚಾಗೋಸ್‌ ದ್ವೀಪ ಸಮೂಹ ಮತ್ತೆ ಮಾರಿಷಸ್‌ ಪಾಲಿಗೆ

Navarathri-1

Mahanavaratri: ಜ್ಞಾನಬೋಧಕ, ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri Special: ತಾಯ್ತನ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Bengaluru: ಬಿಲ್‌ ಕೇಳಿದ್ದಕ್ಕೆ ಬಾರ್‌ ಕ್ಯಾಶಿಯರ್‌ಗೆ ಹಲ್ಲೆ

Bengaluru: ಬಿಲ್‌ ಕೇಳಿದ್ದಕ್ಕೆ ಬಾರ್‌ ಕ್ಯಾಶಿಯರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.