Bengaluru: ಆರ್.ಆರ್.ನಗರದ ಹೇರೋಹಳ್ಳಿ ಮುಖ್ಯ ರಸ್ತೆಯಲ್ಲೇ ಕೊಳವೆ ಬಾವಿ!
Team Udayavani, Oct 8, 2024, 11:22 AM IST
ಬೆಂಗಳೂರು: ಸಾರ್ವಜನಿಕರು ಓಡಾಡುವ ಮುಖ್ಯರಸ್ತೆ ಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಿದ ಘಟನೆ ಬಿಬಿಎಂಪಿ ವ್ಯಾಪ್ತಿಯ ಆರ್.ಆರ್.ನಗರದಲ್ಲಿ ನಡೆದಿದೆ.
ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪಾಲಿಕೆಯ ವಲಯ ಅಧಿಕಾರಿಗಳು, ಕೊಳವೆ ಬಾವಿ ಕೊರೆಸಿದವರ ಹಾಗೂ ಬೋರ್ವೆಲ್ ಕೊರೆಯುವ ವಾಹನದ ಮೇಲೆ ಕಾನೂನ ಕ್ರಮ ಕೈಗೊಳ್ಳಲು ಮಾಗಡಿ ಮುಖ್ಯ ರಸ್ತೆಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಆರ್.ಆರ್.ನಗರ ವಲಯದಲ್ಲಿ ರಸ್ತೆಯ ಮಧ್ಯೆ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಿರುವ ಮಾಹಿತಿ ಇದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಿಸಲಾಗಿದೆ. ತಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಹೇರೋಹಳ್ಳಿ ವಾರ್ಡ್ನಲ್ಲಿ ಘಟನೆ: ಪಾಲಿಕೆಯ ಹೇರೋ ಹಳ್ಳಿ ವಾರ್ಡ್ನ ವೀರಭದ್ರೇಶ್ವರ ನಗರದ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಅ.4ರಂದು ಬಿಬಿಎಂಪಿ ಅನುಮತಿ ಪಡೆ ಯ ದೆ ಅನಧಿಕೃತವಾಗಿ ಕೊಳವೆ ಬಾವಿ ಕೊರೆಯಲಾಗಿದೆ. ಈ ಸಂಬಂಧ ಪಾಲಿಕೆಗೆ ದೂರು ಬಂದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಡಾಂಬರು ರಸ್ತೆ ಹಾಳು ಮಾಡಿದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಆರ್.ಆರ್.ನಗರ ಪಾಲಿಕೆ ವಲಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್ ಕಿಡಿ
Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು
Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು
Gadag: ಆರ್ಸಿ ಬ್ರಿಗೇಡ್ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್ ಸಮಾವೇಶ: ಈಶ್ವರಪ್ಪ
Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.