Bigg Boss Tamil 8: ಬಿಗ್ ಬಾಸ್ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ
Team Udayavani, Oct 8, 2024, 1:22 PM IST
ಚೆನ್ನೈ: ಬಿಗ್ ಬಾಸ್ ತಮಿಳು-8 (Bigg Boss Tamil-8) ಆರಂಭವಾಗಿದೆ. ವಿಜಯ್ ಸೇತುಪತಿ (Vijay Sethupathi) ಅವರು ಹೊಸ ಬಿಗ್ ಬಾಸ್ ಹೋಸ್ಟ್ ಆಗಿ ಕಾಣಿಸಿಕೊಂಡಿರುವ ತಮಿಳು ಬಿಗ್ ಬಾಸ್ನಲ್ಲಿ ಈ ಬಾರಿ ಸಾಕಷ್ಟು ಟ್ವಿಸ್ಟ್ ಗಳನ್ನು ನೀಡಲಾಗಿದೆ.
ತಮಿಳು ಬಿಗ್ ಬಾಸ್ ಮನೆಗೆ 18 ಮಂದಿ ಎಂಟ್ರಿ ಕೊಟ್ಟಿದ್ದಾರೆ. ಇದರಲ್ಲಿ ನಟ, ನಟಿ, ನಿರ್ಮಾಪಕ, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರದ ಸೆಲೆಬ್ರಿಟಿಗಳಿದ್ದಾರೆ. ದೊಡ್ಮನೆಯೊಳಗೆ ಹೋಗಿ 24 ಗಂಟೆಯಲ್ಲೇ ಓರ್ವ ಸ್ಪರ್ಧಿ ಎಲಿಮಿನೇಷನ್ ಆಗಿದ್ದು, ಪ್ರೇಕ್ಷಕರು ಶಾಕ್ ಆಗುವಂತೆ ಮಾಡಿದೆ.
ಬಿಗ್ಬಾಸ್ ಮನೆಯೊಳಗೆ ಸ್ಪರ್ಧಿಗಳಿಗೆ 24 ಗಂಟೆಯೊಳಗೆಯೇ ಎಲಿಮಿನೇಷನ್ ಶಾಕ್ ನೀಡಲಾಗಿದೆ. ಈ ಕೂಡಲೇ ಒಬ್ಬ ಸ್ಪರ್ಧಿ ಮನೆಯಿಂದ ಹೊರಗೆ ಹೋಗಲಿದ್ದಾರೆ ಎನ್ನುವ ಪ್ರೋಮೊವನ್ನು ತೋರಿಸಲಾಗಿದೆ.
ಸಚನಾ ನಮಿದಾಸ್ (Sachana Namidass) ನಿಮ್ಮ ಬಿಗ್ ಬಾಸ್ ಜರ್ನಿ ಇಲ್ಲಿಗೆ ಮುಕ್ತಾಯವಾಗಿದೆ ಎಂದು ಪ್ರೋಮೊದಲ್ಲಿ ತೋರಿಸಲಾಗಿದೆ. ಇದನ್ನು ಕೇಳಿ ಮನೆಯಲ್ಲಿನ ಎಲ್ಲರೂ ಒಮ್ಮೆ ಭಾವುಕರಾಗಿದ್ದಾರೆ. ಕಣ್ಣೀರಿಟ್ಟು ಸಚನಾ ಬಿಗ್ ಬಾಸ್ ಮನೆಯಿಂದ ಆಚೆ ಹೋಗುವುದನ್ನು ತೋರಿಸಲಾಗಿದೆ.
#Day1 #Promo3 of #BiggBossTamil
Bigg Boss Tamil Season 8 – இன்று இரவு 9:30 மணிக்கு நம்ம விஜய் டிவில.. #BiggBossTamilSeason8 #VJStheBBhost #VijaySethupathi @mynanduonline #AalumPudhusuAattamumPudhusu #BiggBossTamil #BBT #BBTamilSeason8 #பிக்பாஸ் #Disneyplushotstartamil pic.twitter.com/1ZTIHrhmDT
— Vijay Television (@vijaytelevision) October 7, 2024
ಇದನ್ನು ನೋಡಿದ ಪ್ರೇಕ್ಷಕರು ಏನಾದರೂ ಒಂದು ಟ್ವಿಸ್ಟ್ ಇರಲೇಬೇಕೆಂದು ಊಹಿಸಿದ್ದಾರೆ. ಪೂರ್ತಿ ಸಂಚಿಕೆ ನೋಡಲು ಕಾಯುತ್ತಿದ್ದಾರೆ.
ವಿಜಯ್ ಸೇತುಪತಿ ಅವರ ʼಮಹಾರಾಜʼ ಸಿನಿಮಾದಲ್ಲಿ ಮಗಳ ಪಾತ್ರದಲ್ಲಿ ಸಚನಾ ನಮಿದಾಸ್ ನಟಿಸಿ ಇತ್ತೀಚೆಗೆ ಜನಪ್ರಿಯರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vettaiyan: ರಿಲೀಸ್ಗೂ ಮುನ್ನ ʼಗೋಟ್ʼ ದಾಖಲೆ ಮೀರಿಸಿದ ರಜಿನಿಕಾಂತ್ ʼವೆಟ್ಟೈಯನ್ʼ
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.