Bhuvanam Gaganam Movie: ಹೃದಯವೇ ಚೂರು ನಿಲ್ಲು…
ಹಾಡಲ್ಲಿ ಭುವನಂ ಗಗನಂ..
Team Udayavani, Oct 8, 2024, 2:38 PM IST
ಪ್ರಮೋದ್, ಪೃಥ್ವಿ ಅಂಬರ್ ಪ್ರಮುಖ ಭೂಮಿಕೆಯಲ್ಲಿರುವ ಭುವನಂ ಗಗನಂ ಸಿನಿಮಾ ಬಿಡುಗಡೆಗೆ ಅಣಿಯಾಗಿದೆ. ಅದಕ್ಕೂ ಮುನ್ನ ಹಾಡುಗಳು ಮತ್ತು ಟೀಸರ್ನಿಂದಲೇ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.
ಕ್ಲಾಸ್ ಕಥೆಗಳ ಮೂಲಕ ಗಮನಸೆಳೆದ ಪೃಥ್ವಿ ಅಂಬರ್ ಹಾಗೂ ಮಾಸ್ ಸಿನಿಮಾಗಳ ಮೂಲಕ ಸೈ ಎನಿಸಿಕೊಂಡ ಪ್ರಮೋದ್, ಮೊದಲ ಬಾರಿ ಒಟ್ಟಿಗೆ ತೆರೆಹಂಚಿಕೊಂಡಿರುವ ಈ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗಷ್ಟೇ ಅನಾವರಣಗೊಂಡಿತ್ತು. ಇದೀಗ ಮತ್ತೂಂದು ಹಾಡು ಬಿಡುಗಡೆಯಾಗಿದೆ.
ಸಂಜಿತ್ ಹೆಗ್ಡೆ ಹಾಗೂ ಪೃಥ್ವಿ ಭಟ್ ಕಂಠಸಿರಿಯಲಿ ಮೂಡಿಬಂದಿರುವ “ಹೃದಯವೇ ಚೂರು ನಿಲ್ಲು’ ಎಂಬ ಹಾಡು ಆನಂದ್ ಆಡಿಯೋ ಯೂಟ್ಯೂಬ್ನಲ್ಲಿ ಹರಿಬಿಟ್ಟಿದೆ ಚಿತ್ರತಂಡ.
ಗುಮ್ಮಿನೇನಿ ವಿಜಯ್ ಸಂಗೀತ ಸಂಯೋಜನೆಯಿರುವ ಈ ಹಾಡಿಗೆ ಅನಿರುದ್ಧ ಶಾಸ್ತ್ರಿ ಸಾಹಿತ್ಯ ಬರೆದಿದ್ದಾರೆ. ಪೃಥ್ವಿ ಅಂಬರ್ ಹಾಗೂ ಪೊನ್ನು ಅಶ್ವಥಿ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
ಗಿರೀಶ್ ಮೂಲಿಮನಿ ಭುವನಂ ಗಗನಂ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು, ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಇವರು ರಾಜರು ಎಂಬ ಚಿತ್ರ ಮಾಡಿದ್ದರು. ಇದೀಗ ಭುವನಂ ಗಗನಂ ಮೂಲಕ ಮತ್ತೂಂದು ಹೊಸಬಗೆಯ ಕಥೆಯನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. ಎಸ್ವಿಸಿ ಫಿಲಂಸ್ ಪ್ರೊಡಕ್ಷನ್ಸ್ನಡಿ ನಿರ್ಮಾಪಕ ಎಂ.ಮುನೇಗೌಡ ಭುವನಂ ಗಗನಂ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಭುವನಂ ಗಗನಂ ಸಿನಿಮಾ ಲವ್, ರೊಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ನಲ್ಲಿ ನಡೆಯುವ ಕಥೆಯಾಗಿದೆ ಎಂಬುದು ಚಿತ್ರತಂಡದ ಮಾತು.
ಪ್ರಮೋದ್ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿ ಜೋಡಿಯಾಗಿ ಅಶ್ವಥಿ ನಟಿಸಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ
ಕ್ಯಾಮೆರಾ,ಸುನೀಲ್ ಕಶ್ಯಪ್ ಸಂಕಲನ ಈ ಸಿನಿಮಾಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.