Udupi: ಕಾರು ಢಿಕ್ಕಿಯಾಗಿ ಬೈಕ್ ಸವಾರ ವಿದ್ಯಾರ್ಥಿ ಮೃತ್ಯು
Team Udayavani, Oct 8, 2024, 1:47 PM IST
ಉಡುಪಿ: ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅ.7ರ ಸೋಮವಾರ ರಾತ್ರಿ ಎಂಜಿಎಂ ಕಾಲೇಜು ಎದುರು ನಡೆದಿದೆ.
ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್ ನಾಯ್ಕ(19) ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ ತಿರುವು ಪಡೆದು ಮಣಿಪಾಲ ಕಡೆಗೆ ಹೋಗುತ್ತಿದ್ದ ಬೈಕಿಗೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇದರಿಂದ ವೀರಜ್ ಬೈಕ್ ಸಮೇತ ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮಗಾರಿ ಅವಾಂತರಕ್ಕೆ ವಿದ್ಯಾರ್ಥಿ ಬಲಿ!
ಇಂದ್ರಾಳಿಯಲ್ಲಿ ಗರ್ಡರ್ ನಿರ್ಮಾಣದ ಹಿನ್ನೆಲೆಯಲ್ಲಿ ಎಂಜಿಎಂನಿಂದ ಮಣಿಪಾಲಕ್ಕೆ ಹೋಗುವ ರಸ್ತೆಯನ್ನು ಏಕಮುಖ ಸಂಚಾರ ಮಾಡಿ ಹಲವು ವರ್ಷಗಳೇ ಕಳೆದಿವೆ. ದಿನಂಪ್ರತಿ ಇಲ್ಲಿ ಟ್ರಾಫಿಕ್ ದಟ್ಟನೆ ಕಂಡುಬರುತ್ತಿದೆ. ಅಲ್ಲದೆ ಈಗಾಗಲೇ ಹಲವಾರು ಅಪಘಾತಗಳು ನಡೆದಿವೆ. ಏಕಮುಖ ರಸ್ತೆಯ ನಡುವೆ ಇರಿಸಿದ್ದ ಕೋನ್ಗಳೂ ಈಗ ಮಾಯವಾಗಿದ್ದು, ವಾಹನಗಳು ಎರ್ರಾಬಿರ್ರಿಯಾಗಿ ಸಂಚರಿಸುತ್ತಿವೆ. ಈ ಹಿಂದೆಯೂ ರಸ್ತೆಯ ನಡುವೆ ಕೋನ್ಗಳ ಬದಲಿಗೆ ಕಲ್ಲುಗಳನ್ನು ಇರಿಸಲಾಗಿತ್ತು. ಈ ಬಗ್ಗೆ ಪತ್ರಿಕೆ ವರದಿ ಪ್ರಕಟಿಸಿದ್ದ ಅನಂತರ ಕೋನ್ಗಳನ್ನು ಅಳವಡಿಸಲಾಗಿತ್ತು. ಆದರೆ ಈಗ ಮತ್ತೆ ಸ್ಥಿತಿ ಅದೇ ರೀತಿಯಾಗಿದೆ. ಸೋಮವಾರ ರಾತ್ರಿಯೂ ಅದೇ ರೀತಿಯಾಗಿದೆ. ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಚಾಲಕ ಲೇಝರ್ ಎಸ್. ವಾಲ್ಟ$Õನ್ ಅವರು ಅತೀ ವೇಗದಿಂದ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಬಲ ಬದಿಗೆ ಬಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ನಾಡಹಬ್ಬದಂತೆ ಕಂಗೊಳಿಸುವ ಉಚ್ಚಿಲ ದಸರಾ: ಪೇಜಾವರ ಶ್ರೀ
Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್ಬಿನ್ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ
MGM, ಕುಂಜಿಬೆಟ್ಟು: ಇಂಟರ್ಲಾಕ್ ಅಳವಡಿಕೆ
Malpe: ಬಾಳೆಗಿಡಕ್ಕೆ ಬಾಣ ಪ್ರಯೋಗ!; ಕ್ಷತ್ರಿಯ ಶಿವಾಜಿ ಮರಾಠ ವಂಶಸ್ಥರ 45 ಕುಟುಂಬಗಳ ಆಚರಣೆ
Geethanjali Silks: ಅ.9ರಂದು ಪುರುಷರ ಬಟ್ಟೆಗಳ ವಿಶಾಲ ವಿಭಾಗ ಗ್ರಾಹಕರಿಂದಲೇ ಉದ್ಘಾಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.