Davangere: ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಬಂಧನ
ಯಾರೋ ಅಪರಿಚಿತರು ಪ್ರಜ್ಞೆ ತಪ್ಪಿಸಿ ನಗದು, ಚಿನ್ನಾಭರಣ ಕದ್ದೊಯ್ದಿದ್ದಾರೆ
Team Udayavani, Oct 8, 2024, 8:34 PM IST
ದಾವಣಗೆರೆ: ತನ್ನ ಮನೆಯಲ್ಲೇ ಕಳ್ಳತನ ಮಾಡಿ ಯಾರೋ ಅಪರಿಚಿತರು ಪ್ರಜ್ಞೆ ತಪ್ಪಿಸಿ ನಗದು, ಚಿನ್ನಾಭರಣ ಕದ್ದೊಯ್ದಿದ್ದಾರೆ ಎಂದು ಕಳ್ಳತನದ ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಹಾಗೂ ಕಳ್ಳತನಕ್ಕೆ ಸಹಕರಿಸಿದ್ದವನನ್ನು ಬಂಧಿಸಿರುವ ಚನ್ನಗಿರಿ ಪೊಲೀಸರು 1.27 ಲಕ್ಷ ನಗದು, 10.77 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಕಳ್ಳತನದ ಕಥೆ ಸೃಷ್ಟಿಸಿದ್ದ ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದ ತಸ್ಮೀಯಖಾನಂ(26), ಹಾಗೂ ಅವರ ಕುಟುಂಬದ ನಿಕಟವರ್ತಿ ಬೆಂಗಳೂರಿನ ರಾಜಾಜಿನಗರ ನಿವಾಸಿ ಮುಜೀಬುಲ್ಲಾ ಶೇಖ್ ಅಲಿಯಾಸ್ ಜಾಕೀರ್(42) ಬಂಧಿತರು.
ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಅಗರಬನ್ನಿಹಟ್ಟಿ ಗ್ರಾಮದ ಅಮಾನುಲ್ಲಾ ಎಂಬವರ ಮಗಳು ತಸ್ಮೀಯ ಖಾನಂ ಸೆ.30 ರಂದು ತಾನು ಮನೆಯಲ್ಲಿ ಒಬ್ಬಳೇ ಇದ್ದ ಸಮಯದಲ್ಲಿ ಯಾರೋ ಒಬ್ಬ ವ್ಯಕ್ತಿ ಮನೆಯೊಳಗೆ ಬಂದು ಮುಖಕ್ಕೆ ಬಾಯಿಂದ ಊದಿ, ನಂತರ ನೀರಿನಂತ ದ್ರವ ಚಿಮುಕಿಸಿದ್ದರಿಂದ ಪ್ರಜ್ಞೆ ತಪ್ಪಿದಂತಾಗಿದ್ದು, ಕುಟುಂಬದವರು ಬಂದು ಎಬ್ಬಿಸಿದ ನಂತರ ನೋಡಿದಾಗ ಮನೆಯ ಬೀರುವಿನ ಬೀಗ ಮುರಿದು 17 ತೊಲ ಬಂಗಾರದ ಒಡವೆ ಮತ್ತು 1.20 ಲಕ್ಷ ಕಳವು ಮಾಡಿಕೊಂಡು ಹೋಗಿರುವುದಾಗಿ ಚನ್ನಗಿರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಕಳ್ಳತನ ನಡೆದ ದಿನವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಆರೋಪಿಗಳ ಪತ್ತೆಗೆ ಸೂಕ್ತ ನಿರ್ದೇಶನ ನೀಡಿದ್ದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ. ಸಂತೋಷ್ ಮತ್ತು ಜಿ. ಮಂಜುನಾಥ್, ಚನ್ನಗಿರಿ ಪೊಲೀಸ್ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗಿಸ್ ಮಾರ್ಗದರ್ಶನ, ನಿರೀಕ್ಷಕ ಬಾಲಚಂದ್ರ ನಾಯ್ಕ ನೇತೃತ್ವದಲ್ಲಿನ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ, ತನಿಖೆ ನಡೆಸಿದಾಗ ಕಳ್ಳತನದ ದೂರು ನೀಡಿದ್ದಂತ ಸ್ವತಃ ತಸ್ಮೀಯ ಖಾನಂ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿತು.
ಹೆಚ್ಚಿನ ವಿಚಾರಣೆ ನಡೆಸಿದಾಗ ಮುಜೀಬುಲ್ಲಾ ಶೇಖ್ ಅಲಿಯಾಸ್ ಜಾಕೀರ್ ಜೊತೆ ಸೇರಿಕೊಂಡು ಕಳ್ಳತನ ಮಾಡಿದ್ದು, ಯಾರಿಗೂ ಗೊತ್ತಾಗಬಾರದು ಎನ್ನುವ ಕಾರಣಕ್ಕೆ ಸುಳ್ಳು ಕತೆ ಸೃಷ್ಟಿಸಿರುವುದು ವಿಚಾರಣೆ ವೇಳೆ ತಿಳಿಸಿದ್ದಾರೆ.
ಮುಜೀಬುಲ್ಲಾ ಮನೆಯಲ್ಲಿಟ್ಟಿದ್ದ 9.5 ಲಕ್ಷ ಬೆಲೆ ಬಾಳುವ 155 ಗ್ರಾಂ ತೂಕದ ಬಂಗಾರದ ಆಭರಣ, 1.27 ನಗದು ವಶಪಡಿಸಿಕೊಳ್ಳಲಾಗಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆ ನಡೆದ 5 ದಿನಗಳಲ್ಲಿ ಆರೋಪಿತರನ್ನು ಬಂಧಿಸಿ ಕಳವಾಗಿದ್ದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ತಂಡಕ್ಕೆ ಬಹುಮಾನ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು
Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್
Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ
Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು
PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್ ಟಾಪರ್
Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.