Haryana: ಜಿಲೇಬಿ ಕೊಟ್ಟು ರಾಹುಲ್ರನ್ನು ಲೇವಡಿ ಮಾಡಿದ ಬಿಜೆಪಿಗರು!
Team Udayavani, Oct 8, 2024, 10:25 PM IST
“ಮಾತುರಾಮ್ ಜಂಬೋ ಜಿಲೇಬಿ’ ವಿಚಾರವಿಟ್ಟು ಬಿಜೆಪಿ ವಿರುದ್ಧ ಹರಿಹಾಯ್ದಿದ್ದ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಲು ಬಿಜೆಪಿ ಕಾರ್ಯಕರ್ತರು ಪಕ್ಷದ ಗೆಲುವಿನ ಸಿಹಿಯಾಗಿ ಅದೇ ಜಿಲೇಬಿಗಳನ್ನು ಕಾಂಗ್ರೆಸ್ ಕಚೇರಿಗೆ ತಲುಪಿಸಿದ್ದಾರೆ.
ಫಲಿತಾಂಶದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲೂ ರಾಹುಲ್ ಅವರ ಜಂಬೋ ಜಿಲೇಬಿ ಹೇಳಿಕೆಗಳನ್ನು ಲೇವಡಿ ಮಾಡಲಾಗುತ್ತಿದೆ. ಗೋಹಾನಾ ಮಾರುಕಟ್ಟೆಯಲ್ಲಿ ಮಾತುರಾಮ್ ಎಂಬವರಿಂದ ತಯಾರಿಸಲ್ಪಡುವ ಜಿಲೇಬಿಗಳ ವಿಚಾರವನ್ನು ರಾಹುಲ್ ಚುನಾವಣಾ ಪ್ರಚಾರದಲ್ಲಿ ಬಳಸಿದ್ದರು. ಈ ಜಿಲೇಬಿಗಳನ್ನು ದೇಶಾದ್ಯಂತ, ವಿದೇಶಗಳಿಗೂ ಮಾರಿದರೆ ಮುಂದೊಂದು ದಿನ ಮಾತುರಾಮ್ ಜಿಲೇಬಿ ಫ್ಯಾಕ್ಟರಿ ತೆರೆಯಬಹುದು. ಆದರೆ, ಜಿಎಸ್ಟಿ ಎಂಬ ಚಕ್ರವ್ಯೂಹದಲ್ಲಿ ಬಿಜೆಪಿ ಅವರನ್ನು ಸಿಲುಕಿಸಿದೆ ಎಂದಿದ್ದರು.
ಮೋದಿ ಕೂಡ ಇದೇ ಜಿಲೇಬಿ ಉಲ್ಲೇಖೀಸಿ, ಕಾಂಗ್ರೆಸ್ ವರ್ಷಕ್ಕೆ ಒಬ್ಬ ಪ್ರಧಾನಿಯನ್ನು ತರಲು ಯೋಜಿಸಿದೆ ಕಾಂಗ್ರೆಸ್ಗೆ ಕೇಳಿ ಪ್ರಧಾನಿ ಹುದ್ದೆ ಏನು ಮಾತುರಾಮ್ ಜಿಲೇಬಿಯಾ? ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doctor Case: ಕೋಲ್ಕತಾ ಆಸ್ಪತ್ರೆಯ 50 ಹಿರಿಯ ವೈದ್ಯರ ರಾಜೀನಾಮೆ
Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್ ಕಿಡಿ
RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ
Haryana: ಕೇವಲ 210 ದಿನ ಸಿಎಂ ಆದರೂ ನಯಾಬ್ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?
Jammu Kashmir Result: ಜಮ್ಮು-ಕಾಶ್ಮೀರದ ನೂತನ ಸಿಎಂ ಹೆಸರು ಘೋಷಿಸಿದ ಫಾರೂಕ್ ಅಬ್ದುಲ್ಲಾ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ
Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ
Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್
Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ
Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.