Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ
ಹವಾಮಾನ ವೈಪರೀತ್ಯದಿಂದ ಕಾಫಿ ಬೆಳೆಯಲ್ಲಿ ಗಣನೀಯ ಇಳಿಕೆ, ಅ.15ರಿಂದ ಕಾಫಿ ಬೆಲೆ ದುಬಾರಿ
Team Udayavani, Oct 9, 2024, 7:50 AM IST
ಬೆಂಗಳೂರು: ಕಾಫಿ ಪ್ರಿಯರಿಗೆ ಕಹಿ ಸುದ್ದಿ. ಅ. 15ರಿಂದ ಪ್ರತೀ ಕೆ.ಜಿ. ಕಾಫಿ ಪುಡಿ ಮೇಲೆ 100 ರೂ. ದುಬಾರಿಯಾಗಲಿದೆ. ಇಂಡಿಯನ್ ಕಾಫಿ ಟ್ರೇಡ್ ಅಸೋಸಿಯೇಶನ್ ಕಾಫಿ ಬೆಲೆ ಏರಿಕೆ ಬಗ್ಗೆ ಮಾಹಿತಿ ನೀಡಿದ್ದು, ಒಂದು ವಾರದಲ್ಲಿ ಬೆಲೆ ಏರಿಕೆ ಮಾಡುವುದಾಗಿ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅಸೋಸಿಯೇಶನ್ ಅಧ್ಯಕ್ಷ ಪೆರಿಕಲ್ ಸುಂದರ್, ಶ್ರೇಷ್ಠ ಗುಣಮಟ್ಟದ ಕಾಫಿ ಬೀಜ ದೊರೆಯುತ್ತಿಲ್ಲ. ಇದರ ಜತೆಗೆ ಉತ್ಪಾದನ ನಿರ್ವಹಣೆ ವೆಚ್ಚ ಕೂಡ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಫಿ ಮಾರಾಟದ ಪ್ರತೀ ಕೆಜಿ ಮೇಲೆ 100 ರೂ. ಹೆಚ್ಚಳ ಮಾಡಲು ಅಸೋಸಿಯೇಶನ್ ನಿರ್ಧರಿಸಿದೆ. ಕಾಫಿ ಗ್ರಾಹಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.
ಹವಾಮಾನ ವೈಪರೀತ್ಯದಿಂದ ಕಾಫಿ ಬೆಳೆಯ ಗುಣಮಟ್ಟ ಹಾಗೂ ಕಾಫಿ ಬೆಳೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಪ್ರತಿ ದಿನ ಕಾಫಿ ಬೆಲೆ ಏರಿಕೆಯಾಗುತ್ತಲೇ ಇದೆ. ಕಾಫಿ ಬೆಳೆಯಲ್ಲಿ ಈಗ ಶೇ. 20ರಷ್ಟು ಕುಸಿತವಾಗಿದ್ದು, ವಿದೇಶಿ ಮಾರುಕಟ್ಟೆಯಲ್ಲಿ ಹೆಚ್ಚಿದ ಬೇಡಿಕೆಯಿಂದಾಗಿ ಸ್ಥಳೀಯ ಮಾರುಕಟ್ಟೆಗೆ ಕಾಫಿ ಪೂರೈಕೆ ಕಡಿಮೆಯಾಗಿದ್ದು ಬೆಲೆ ಏರಿಕೆ ಉಂಟಾಗಿದೆ.
ಈ ವರ್ಷದ ಆರಂಭದಿಂದಲೂ ಕಾಫಿ ಬೆಲೆ ದ್ವಿಗುಣವಾಗುತ್ತಲೇ ಸಾಗಿದೆ. ಜನವರಿ ಆರಂಭದಿಂದ ಬೆಲೆ ಹೆಚ್ಚಳವಾಗುತ್ತಲೇ ಇದೆ. ಪ್ರತಿ ಕೆ.ಜಿಗೆ 200 ರೂ. ಇದ್ದ ಒಂದು ಕೆ.ಜಿ. ರೋಬಸ್ಟಾ ತಳಿಯ ಕಾಫಿ ಬೆಲೆಯು ಪ್ರಸ್ತುತ 420 ರೂ.ಗೆ ಏರಿಕೆಯಾಗಿದೆ. ಹಾಗೇಯೆ ಅರೇಬಿಕಾ ತಳಿಯ ಕಾಫಿ ಬೆಲೆಯು 290 ರೂ.ನಿಂದ 465 ರೂ.ಗೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ
National Film Award: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ
Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!
Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶ
Internal Reservation: ಬಸವರಾಜ್ ಬೊಮ್ಮಾಯಿ ಅವಧಿಯ ಒಳಮೀಸಲಿಗೆ ಬಿಜೆಪಿ ಒತ್ತಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !
Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ
High Court: ವಕೀಲರ ವಾಕ್ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್ ಕೌನ್ಸಿಲ್ಗೆ ಇಲ್ಲ
Arrested: ತ.ನಾಡಿನಿಂದ ಬಂದು ಲ್ಯಾಪ್ಟಾಪ್ ಕಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.