Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

ಮೇಘಸ್ಫೋಟ ಮಳೆಗೆ ಕೊಚ್ಚಿ ಹೋದ ಸೇತುವೆ

Team Udayavani, Oct 9, 2024, 7:40 AM IST

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

ಕಾರ್ಕಳ/ಹೆಬ್ರಿ: ರವಿವಾರ ಹೆಬ್ರಿ ಭಾಗದಲ್ಲಿ ಸಂಭವಿಸಿದ ಮೇಘಸ್ಫೋಟ ಮಳೆಯಿಂದಾಗಿ ಉಂಟಾದ ಪ್ರವಾಹಕ್ಕೆ ಮತ್ತಾವು ಭಾಗಕ್ಕೆ ತೆರಳುವ ಮರದ ಸೇತುವೆ ಕೊಚ್ಚಿಕೊಂಡು ಹೋಗಿದೆ. ಸ್ಥಳೀಯ ನಿವಾಸಿಗರು ಸೇರಿ ಮಳೆಗಾಲದ ಆರಂಭದಲ್ಲಿ ನಿರ್ಮಿಸಿದ ತಾತ್ಕಾಲಿಕ ಸೇತುವೆ ನೆರೆ ಪಾಲಾದುದರಿಂದ ಎರಡು ಭಾಗಕ್ಕೆ ಓಡಾಟ ಸಾಧ್ಯವಾಗದ ಸಂಕಷ್ಟಕ್ಕೆ ಸಿಲುಕಿ ಓಡಾಟಕ್ಕೆ ತೊಂದರೆಯಾಗುತ್ತಿರುವುದನ್ನು ಮನಗಂಡ ಅಲ್ಲಿನ ಮೂಲನಿವಾಸಿಗಳೆಲ್ಲ ಸೇರಿ ಮತ್ತೆ ಮರದ ಸೇತುವೆ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಘಟನೆ ನಡೆದ ಮರುದಿನ ಬೆಳಗ್ಗೆ ಕಾಡಿನಿಂದ ಹಗ್ಗ ತಂದು, ಇನ್ನಿತರ ಸಾಮಗ್ರಿ ಸಂಗ್ರಹಿಸಿ ಸಿದ್ಧಪಡಿಸಿಕೊಂಡು ಅಡಿಕೆ ಮರ ಬಳಸಿ ಹಿಂದಿನ ಮಾದರಿಯಲ್ಲಿ ಮರದ ಸೇತುವೆ ನಿರ್ಮಿಸಿಕೊಂಡಿದ್ದಾರೆ.

ಸೇತುವೆ ಕೊಚ್ಚಿ ಹೋದ ಅರ್ಧ ದಿನದಲ್ಲಿ ಹೊಸದಾದ ತಾತ್ಕಾಲಿಕ ಸೇತುವೆ ಮರು ಸ್ಥಾಪನೆಗೊಂಡಿದೆ. ಹಳಿ ತಪ್ಪಿದ ಇಲ್ಲಿನ ಜನರ ಬದುಕು ಅರೆ ಕ್ಷಣದಲ್ಲಿ ಮರು ಜೋಡಣೆಯಾಗಿ ಹೊರ ಜಗತ್ತಿನ ಜತೆಗೆ ಸಂಪರ್ಕಕ್ಕೆ ತೆರೆದುಕೊಂಡಿದೆ.

ಮತ್ತಾವಿನಲ್ಲಿ 10 ರಿಂದ 13 ಕುಟುಂಬಗಳು ಮಲೆಕುಡಿಯ ಮೂಲ ನಿವಾಸಿಗಳು ವಾಸವಾಗಿವೆ. ಮತ್ತಾವಿಗೆ ತೆರಳಬೇಕಿದ್ದರೆ ಸೇತುವೆ ದಾಟಬೇಕು. ದಶಕಗಳಿಂದಲೂ ತಾತ್ಕಾಲಿಕ ಸೇತುವೆಯೇ ಬಳಕೆಯಲ್ಲಿದೆ. ಪ್ರತಿ ವರ್ಷ ಮಳೆ ಬಂದಾಗ ಸ್ಥಳೀಯ ನಿವಾಸಿಗಳೆಲ್ಲರೂ ಸೇರಿ ತಾತ್ಕಾಲಿಕ ಮರದ ಸೇತುವೆ ನಿರ್ಮಿಸಿಕೊಂಡು ಓಡಾಟ ನಡೆಸುತ್ತಿರುತ್ತಾರೆ. ಇಲ್ಲಿ ವೃದ್ಧರು, ಮಹಿಳೆಯರು, ಮಕ್ಕಳು ಸೇರಿ 50ರಿಂದ 60ರಷ್ಟು ಮಂದಿ ಇದೇ ಅಪಾಯಕಾರಿ ಸೇತುವೆ ಬಳಸಿ ನಿತ್ಯ ಶಾಲೆಗೆ, ಕಂಪೆನಿ ಕೆಲಸಕ್ಕೆ ತೆರಳುತ್ತಿದ್ದಾರೆ.

ಅಪರೂಪಕ್ಕೊಮ್ಮೆ ಸಂತೆಗೆ
ಮರದ ಸೇತುವೆ ಕೈಕೊಟ್ಟರೆ ದೈನಂದಿನ ದಿನಸಿ ಸಾಮಾಗ್ರಿಗಾಗಿ 5ಕಿ. ಮೀ ಕಾಲ್ನಡಿಗೆಯಲ್ಲಿ ನಡೆದುಕೊಂಡು ಹೋಗಿ ಬರಬೇಕು.ಆಸ್ಪತ್ರೆ ಕಾಣಬೇಕಾದರೆ 20 ಕಿಮೀ ದೂರದ ಹೆಬ್ರಿ ಹೋಗಬೇಕು ದೊಡ್ಡ ಮಟ್ಟಿನ ಆಸ್ಪತ್ರೆಗೋಸ್ಕರ 50 ಕಿಮೀ ದೂರದ ಉಡುಪಿಗೆ ತಲುಪಬೇಕು. ಇಲ್ಲಿನ ಗರ್ಭಿಣಿ ಸ್ತ್ರೀಯರು, ವಯೋವೃದ್ಧರನ್ನು ಮಣ್ಣಿನ ರಸ್ತೆಯಲ್ಲಿ ಹೊತ್ತುಕೊಂಡು ಅರ್ಧ ದಾರಿವರೆಗೆ ಕರೆತಂದು ಅಲ್ಲಿಂದ ಆಟೋ ಮೂಲಕ ಸಾಗಬೇಕು. ಹೆಬ್ರಿ ಸಂತೆಗೆಅಪರೂಪಕ್ಕೊಮ್ಮೆ ಬಂದು ತಿಂಗಳಿಗಾಗುವಷ್ಟು ದಿನಸಿ ಕೊಂಡೊಯ್ಯುತ್ತಾರೆ.

ಹಣ ಬಿಡುಗಡೆಯೆಂಬ ಕಟ್ಟುಕಥೆೆ
ಸೇತುವೆಯಿಲ್ಲದೆ ಯಾವೊಂದು ಕೆಲಗಳು ಇಲ್ಲಿಯವರಿಂದ ಸಾಧ್ಯವಾಗುವುದಿಲ್ಲ. ದಿನಸಿ, ಬೆಳೆದ ಫ‌ಸಲುಗಳನ್ನೆಲ್ಲ ಹೊತ್ತೆ ಸಾಗಿಸಬೇಕು. ಮಕ್ಕಳನ್ನು ಬೆಳಗ್ಗೆ 7 ಗಂಟೆಗೆ ಸೇತುವೆ ಹತ್ತಿರ ಕರೆದೊಯ್ಯು ನಿತ್ಯ ಶಾಲೆಗೆ ಬಿಡುವುದು, ಸಂಜೆ ಮತ್ತೆ ಕರೆ ತರುವುದು ನಮ್ಮ ನಿತ್ಯದ ಕೆಲಸವಾಗಿದೆ. ನಮ್ಮ ಆಯುಷ್ಯ ಇದರಲ್ಲೆ ಅರ್ಧ ಮುಗಿದು ಹೋಗುತ್ತಿದೆ. ಚುನಾವಣೆ ಬಹಿಷ್ಕಾರ, ಮನವಿ ಎಲ್ಲವೂ ಮಾಡಿ ಆಯಿತು. ಸೇತುವೆ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿದೆ ಎಂದು ಹೇಳುತ್ತಾರೆ. ಹಿಂದಿನಿಂದಲೂ ಅದನ್ನೆ ಹೇಳುತ್ತಾ ಬಂದಿದ್ದಾರೆ. ರಸ್ತೆ ವಿಸ್ತರಣೆಗೆ ಅಭಯಾರಣ್ಯ ಅಡ್ಡಿ ಎನ್ನುತ್ತಾ ನಮ್ಮನ್ನು ಸತಾಯಿಸುತ್ತಿದ್ದಾರೆ. ಇನ್ನು ಅಂಚೆ ಪತ್ರಗಳು ಬಂದಲ್ಲಿ ಅದು ಮರದಲ್ಲೆ ನೇತುಹಾಕಿದ ಬಾಕ್ಸ್‌ಗಳಲ್ಲೆ ಮಳೆಗಾಳಿಗೆ ಬಿದ್ದಿರುತ್ತವೆ ಎನ್ನುತ್ತಾರೆ ಅಲ್ಲಿನ ನಿವಾಸಿಗಳು. ಇತ್ತೀಚೆಗಷ್ಟೆ ಮತ್ತೂಮ್ಮೆ ಅಂದಾಜು ಪಟ್ಟಿಸಿ ಸಿದ್ಧಪಡಿಸಲು ಅಧಿಕಾರಿಗಳು ಬಂದು ಹೋಗಿದ್ದಾರೆ ಎಂದರು ಗ್ರಾ.ಪಂ ಸದಸ್ಯರೊಬ್ಬರು.

ನನಸಾಗದ ಕನಸು
ಹರಿಯುವ ಹೊಳೆಗೆ ಶಾಶ್ವತ ಸೇತುವೆ ಬೇಕೆನ್ನುವ ಕನಸು ಇನ್ನೂ ನನಸಾಗಿಲ್ಲ. ಮಳೆಗಾಲದಲ್ಲಿ ಕಬ್ಬಿನಾಲೆ ಗ್ರಾಮದ ಮಲೆಕುಡಿಯ ಜನರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಮತ್ತಾವು ನದಿಗೆ ಸೇತುವೆ ನಿರ್ಮಾಣದ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ಹಲವಾರು ಬಾರಿ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಸಮಸ್ಯೆ ಬಗೆಹರಿಸಿ ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ತಿಳಿಸಿದ್ದಾರೆ.

ಮಕ್ಕಳಿಗೆ ವಿಶೇಷ ತರಗತಿ ತಪ್ಪಿಸದಿರಲು ನಿರ್ಮಾಣ
ನಮ್ಮಲ್ಲಿಂದ ಶಾಲೆಗೆ ಹೋಗುವ ಮಕ್ಕಳಿದ್ದಾರೆ. ಮೊನ್ನೆ ಸುರಿದ ಮಳೆಗೆ ನೆರೆ ಬಂದು ಮರದ ಸೇತುವೆ ಕೊಚ್ಚಿ ಹೋಗಿತ್ತು. ಮಕ್ಕಳಿಗೆ ದಸರಾ ರಜೆ ಇದ್ದರೂ ಎಸ್ಸೆಸೆಲ್ಸಿ ಮಕ್ಕಳಿಗೆ ವಿಶೇಷ ತರಬೇತಿ ಇರುತ್ತದೆ. ಮಕ್ಕಳಿಗೆ ಮರುದಿನ ಸೋಮವಾರ ಶಾಲೆಗೆ ಹೋಗಲೇ ಬೇಕಿತ್ತು. ಅದಕ್ಕೆ ತುರ್ತಾಗಿ ನಮ್ಮ ಇಲ್ಲಿನ ಮನೆಯವರೆಲ್ಲ ಸೇರಿ ತುರ್ತಾಗಿ ಮರದ ಸೇತುವೆ ನಿರ್ಮಿಸಿಕೊಂಡಿದ್ದೇವೆ. ಶಾಶ್ವತವಾಗಿ ಸೇತುವೆ ನಿರ್ಮಾಣವಾದರೆ ನಮ್ಮ ಸಮಸ್ಯೆಗೆ ಮುಕ್ತಿ ಸಿಗುತಿತ್ತು.
-ವಸಂತಿ, ಮೂಲನಿವಾಸಿ ಮಹಿಳೆ ಮತ್ತಾವು

ಟಾಪ್ ನ್ಯೂಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

pramod madhwaraj

Pramod Madhwaraj;ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Udupi: ಗಮನ ಬೆರೆಡೆ ಸೆಳೆದು ಲಕ್ಷಾಂತರ ರೂ. ವಂಚನೆ

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ

Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್‌ಇ ಶಾಲೆ ಪ್ರಾರಂಭ

Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್‌ಇ ಶಾಲೆ ಪ್ರಾರಂಭ

Kaup: ಶ್ರೀ ಹೊಸ ಮಾರಿಗುಡಿ: ಮಹಾಚಂಡಿಕಾಯಾಗ, ದರ್ಶನ ಸೇವೆ ಸಂಪನ್ನ

Kaup: ಶ್ರೀ ಹೊಸ ಮಾರಿಗುಡಿ: ಮಹಾಚಂಡಿಕಾಯಾಗ, ದರ್ಶನ ಸೇವೆ ಸಂಪನ್ನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

3-ankola

Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್‌ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.