Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ


Team Udayavani, Oct 9, 2024, 7:35 AM IST

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕವಾಗಿ ಸುಮಾರು 55 ಲಕ್ಷಕ್ಕೂ ಮಿಕ್ಕಿ ಭಕ್ತರು ಭೋಜನ ಪ್ರಸಾದ ಸ್ವೀಕರಿಸುತ್ತಾರೆ. ಇದೀಗ ದೇಗುಲದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್‌ ಮೊಹಪಾತ್ರ ಅವರ ವಿಶೇಷ ಕಾಳಜಿಯಿಂದ ಭೋಜನ ವ್ಯವಸ್ಥೆಯಲ್ಲಿ ವಿತರಿಸುವ ಖಾದ್ಯಗಳಲ್ಲಿ ವಿನೂತನ ಬದಲಾವಣೆ ತರಲು ಉದ್ದೇಶಿಸಲಾಗಿದೆ.

ಈ ಹಿಂದೆ ವಿಶೇಷ ದಿನಗಳನ್ನು ಹೊರತು ಪಡಿಸಿ ಪ್ರತಿದಿನ ಒಂದೇ ರೀತಿಯ ಪಾಯಸವನ್ನು ವಿತರಿಸಲಾಗುತ್ತಿತ್ತು. ನೂತನ ಯೋಜನೆಯಂತೆ ಪ್ರತಿದಿನ ಬೇರೆ ಬೇರೆ ತೆರನಾದ ಪಾಯಸಗಳನ್ನು ಉಣಬಡಿಸುವ ವ್ಯವಸ್ಥೆ ಮಾಡಲಾಗಿದೆ.

ಕಡ್ಲೆ ಬೇಳೆ, ಹೆಸರು ಬೇಳೆ, ಕಡ್ಲೆ ಬೇಳೆ ಸಾಬಕ್ಕಿ, ಗೋಧಿ ಕಡಿ, ಹಾಲು ಪಾಯಸ, ಅಕ್ಕಿ ಪಾಯಸ, ಶ್ಯಾವಿಗೆ ಪಾಯಸ, ರವೆ ಪಾಯಸ ಮತ್ತು ಸಿರಿಧಾನ್ಯ ಸೇರಿದಂತೆ 10 ಬಗೆಯ ಪಾಯಸವನ್ನು ತಯಾರಿಸಿ ವಿತರಿಸಲಾಗುತ್ತದೆ. ಪ್ರಸಾದ ಭೋಜನವು ಅತ್ಯಂತ ಸ್ವಾದಿಷ್ಠ ಮತ್ತು ಪೌಷ್ಟಿಕಾಂಶಗಳಿಂದ ಇರಲು 15 ಬಗೆಯ ತರಕಾರಿಗಳನ್ನು ಪ್ರತಿದಿನ ಸಾಂಬಾರಿಗೆ ಉಪಯೋಗಿಸಲು ಚಿಂತಿಸಲಾಗಿದೆ.

ಕುಕ್ಕೆ ದೇಗುಲದಲ್ಲಿ ಪ್ರತಿನಿತ್ಯ ಬಾಳೆ ಎಲೆಯಲ್ಲಿ ಅನಾದಿ ಕಾಲದಿಂದ ಪ್ರಸಾದ ರೂಪದಲ್ಲಿ ಚಟ್ನಿ, ಪಲ್ಯ, ಅನ್ನ, ಸಾರು, ಸಾಂಬಾರು, ಪಾಯಸ, ಮಜ್ಜಿಗೆ ವಿತರಿಸಲಾಗುತ್ತದೆ. ಜಾತ್ರೆ ಮತ್ತು ಹೊಸ್ತಾರೋಗಣೆಯ ದಿನಗಳಲ್ಲಿ ಭಕ್ಷ್ಯಗಳ ಸಂಖ್ಯೆ ಹೆಚ್ಚಿರುತ್ತದೆ. ಏಕಾದಶಿ ದಿನ ಅವಲಕ್ಕಿ, ಉಪ್ಪಿಟ್ಟು ಮತ್ತು ಮಜ್ಜಿಗೆ ಮಾತ್ರವೇ ವಿತರಿಸಲಾಗುತ್ತದೆ.

ಶಿಕ್ಷಣಕ್ಕಾಗಿ ಅನ್ನದಾನ
ಶ್ರೀ ದೇಗುಲವು ತನ್ನ ಆಡಳಿತದಲ್ಲಿ ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಎರಡು ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನಿತ್ಯವೂ ಶ್ರೀ ದೇಗುಲದಿಂದ ಪ್ರಸಾದ ಭೋಜನ ವಿತರಣೆಯಾಗುತ್ತಿದೆ. ಇದರ ಜತೆ ಕ್ಷೇತ್ರದ ಸನಿಹದ ಇತರ ಶಾಲೆಗಳಿಗೂ ಭೋಜನ ವಿತರಿಸುತ್ತಿದೆ. ಈ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಭೋಜನವು ಒಂದು ಅಮೂಲ್ಯ ಪ್ರಸಾದ. ಹಿಂದಿನಿಂದಲೂ ಶ್ರೀ ದೇವರ ಅನ್ನಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಇದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್‌ ಪಾಕಶಾಲೆ ನಿರ್ಮಾಣವಾಗಿದೆ. ಮುಂದೆ ಭಕ್ತರಿಗೆ ಭೋಜನ ಪ್ರಸಾದ ಸ್ವೀಕರಿಸಲು ಉತ್ತಮ ಯೋಜನೆಯೊಂದಿಗೆ ಹೆಚ್ಚಿನ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಲಾಗುವುದು.
– ಜುಬಿನ್‌ ಮಹಪಾತ್ರ ಆಡಳಿತಾಧಿಕಾರಿ ಮತ್ತು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು

ಟಾಪ್ ನ್ಯೂಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

pramod madhwaraj

Pramod Madhwaraj;ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Subrahmanya: ಕುಮಾರ ಪರ್ವತ ಚಾರಣ ಆರಂಭಿಸಿದ ಚಾರಣಿಗರು

Subrahmanya: ಕುಮಾರ ಪರ್ವತ ಚಾರಣ ಆರಂಭಿಸಿದ ಚಾರಣಿಗರು

Puttur: ಹೊಸ ಅಡಿಕೆ ಧಾರಣೆ ಜಿಗಿತ

Puttur: ಹೊಸ ಅಡಿಕೆ ಧಾರಣೆ ಜಿಗಿತ; ಬೆಳೆಗಾರರ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

3-ankola

Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್‌ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.