Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ
Team Udayavani, Oct 9, 2024, 2:02 AM IST
ಮಂಗಳೂರು: ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನ ಕ್ಷೇತ್ರದ ಚುನಾವಣ ಫಲಿತಾಂಶವು ಬಿಜೆಪಿ ಪಕ್ಷಕ್ಕೆ ಜನತೆಯು ಮತ್ತೊಮ್ಮೆ ಆಶೀರ್ವಾದ ಮಾಡಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಸರಳ ಬಹುಮತದೊಂದಿಗೆ ಸರಕಾರ ರಚಿಸುತ್ತದೆ ಎಂದು ಬಿಂಬಿತವಾಗಿ ದ್ದರೂ. ಫಲಿತಾಂಶ ಬಂದಾಗ ಬಿಜೆಪಿಗೆ ಜನತೆಯ ಸಂಪೂರ್ಣ ಆಶೀರ್ವಾದ ಸಿಕ್ಕಿರುವುದು ನಮ್ಮ ಕಾರ್ಯಕರ್ತರಲ್ಲಿ ಸಂತಸವನ್ನು ತಂದಿದೆ.
ಕಾಂಗ್ರೆಸ್ ಪಕ್ಷವು ಅಬ್ಬರದ ಗ್ಯಾರಂಟಿಗಳನ್ನು ಹರಿಯಾಣದ ಚುನಾವಣ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಕಾಂಗ್ರೆಸ್ ದೇಶಾದ್ಯಂತ ಜನರ ವಿಶ್ವಾಸವನ್ನೇ ಕಳೆದುಕೊಂಡಿದ್ದರ ಪರಿಣಾಮವು ಈ ಫಲಿತಾಂಶದಲ್ಲಿ ಮೂಡಿಬಂದಿದೆ ಎಂದು ತಿಳಿಸಿದರು.
ಜಮ್ಮು ಕಾಶ್ಮೀರದಲ್ಲಿ ಕೂಡ ಭಾರತೀಯ ಜನತಾ ಪಕ್ಷವು ಹಿಂದಿನ ಫಲಿತಾಂಶಕ್ಕಿಂತ ಈ ಬಾರಿ ಉತ್ತಮಪಡಿಸಿಕೊಂಡಿದ್ದು ಕಂಡುಬರುತ್ತದೆ. ಹರಿಯಾಣದಲ್ಲಿ ಬಿಜೆಪಿಯು ಸತತ ಮೂರನೆ ಬಾರಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವಂತೆ ಮಾಡಿದ ಜನತೆಗೆ ಅಭಿನಂದನೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.