Hezbollah ದುರ್ಬಲ; ನಸ್ರಲ್ಲಾ ಉತ್ತರಾಧಿಕಾರಿಗಳೆಲ್ಲ ಫಿನಿಷ್: ನೆತನ್ಯಾಹು ಹೇಳಿಕೆ
ಶಾಂತಿ ಮತ್ತು ಸಮೃದ್ಧಿಯ ಹಾದಿ... ಲೆಬನಾನ್ನ ಜನರಿಗೆ ಇಸ್ರೇಲ್ ಪ್ರಧಾನಿ ವಾರ್ನಿಂಗ್ ?
Team Udayavani, Oct 9, 2024, 7:52 AM IST
ಟೆಲ್ ಅವಿವ್ : ಇಸ್ರೇಲ್ ಪಡೆಗಳು ಹೆಜ್ಬುಲ್ಲಾ ನಾಯಕತ್ವದ ಉತ್ತರಾಧಿಕಾರಿಯಾಗುತ್ತಿದ್ದ ಪ್ರಮುಖ ಉಗ್ರರನ್ನು ಈಗಾಗಲೇ ಹತ್ಯೆ ಮಾಡಿವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಘೋಷಿಸಿದ್ದಾರೆ.
ಮೊದಲೇ ರೆಕಾರ್ಡ್ ಮಾಡಿದ ವಿಡಿಯೋ ಸಂದೇಶದಲ್ಲಿ, “ನಾವು ಹೆಜ್ಬುಲ್ಲಾ ಸಾಮರ್ಥ್ಯವನ್ನು ಕುಗ್ಗಿಸಿದ್ದೇವೆ. ನಸ್ರಲ್ಲಾ ಅವರ ಉತ್ತರಾಧಿಕಾರಿ ಮತ್ತು ಉತ್ತರಾಧಿಕಾರಿಯ ಬದಲಿ ಸೇರಿದಂತೆ ಹಲವಾರು ಉಗ್ರರನ್ನು ಹೊಡೆದುರುಳಿಸಿದ್ದೇವೆ. ಉಗ್ರ ಸಂಘಟನೆ ಪ್ರಸ್ತುತ ದುರ್ಬಲವಾಗಿದೆ ” ಎಂದು ಹೇಳಿದ್ದಾರೆ. ಆದರೆ, ನೆತನ್ಯಾಹು ಅವರು ಯಾವುದೇ ನಿರ್ದಿಷ್ಟ ಹೆಸರುಗಳನ್ನು ಬಹಿರಂಗಪಡಿಸಿಲ್ಲ.
ಲೆಬನಾನ್ನ ಜನರು ಹೆಜ್ಬುಲ್ಲಾ ನಂಟಿನಿಂದ ತಮ್ಮನ್ನು ಮುಕ್ತಗೊಳಿಸಬೇಕು ಎಂದು ಎಂದು ಕೇಳಿಕೊಂಡಿದ್ದು, ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ. ಬದಲಾವಣೆಯ ಅವಕಾಶವನ್ನು ಬಳಸಿಕೊಳ್ಳಿ ಎಂದು ಒತ್ತಾಯಿಸಿದರು, ನೀವು ಈಗ ನಿಮ್ಮ ದೇಶವನ್ನು ಬದಲಾಯಿಸಬಹುದು ಮತ್ತು ಅದನ್ನು ಶಾಂತಿ ಮತ್ತು ಸಮೃದ್ಧಿಯ ಹಾದಿಗೆ ಹಿಂತಿರುಗಿಸಬಹುದು.” ಎಂದು ಹೇಳಿದ್ದಾರೆ.
ಉದ್ವಿಗ್ನತೆಯ ಮಧ್ಯೆ ನೆತನ್ಯಾಹು ಅವರು ಹೇಳಿಕೆ ನೀಡಿದ್ದಾರೆ. ಭವಿಷ್ಯದ ಮೇಲೆ ಪ್ರಭಾವ ಬೀರಲು ಲೆಬನಾನಿನ ಜನರ ಶಕ್ತಿಯನ್ನು ಒತ್ತಿಹೇಳಿದರು. ಕ್ರಮ ಕೈಗೊಳ್ಳದಿದ್ದಲ್ಲಿ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಹೆಜ್ಬುಲ್ಲಾ ವಿರುದ್ಧ ನೀವು ಕ್ರಮ ಕೈಗೊಳ್ಳದಿದ್ದರೆ ಜನನಿಬಿಡ ಪ್ರದೇಶಗಳಲ್ಲಿಯೂ ಇಸ್ರೇಲ್ ಹೋರಾಡಲು ಪ್ರಯತ್ನಿಸುವುದನ್ನು ಮುಂದುವರಿಸುತ್ತದೆ” ಎಂದು ಅಪಾಯವನ್ನು ಒತ್ತಿಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nobel: ಕೃತಕ ಬುದ್ಧಿಮತ್ತೆ ಗಾಡ್ಫಾದರ್ ಸೇರಿ ಇಬ್ಬರಿಗೆ ಭೌತಶಾಸ್ತ್ರದ ನೋಬೆಲ್ ಪ್ರಶಸ್ತಿ
Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ
Israel-Hamas War:ಹಮಾಸ್ ದಾಳಿಗೆ 1 ವರ್ಷ-ಇಸ್ರೇಲ್ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ
Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
Lebanon ಪೇಜರ್ ಸ್ಫೋ*ಟಕ್ಕೆ ಮೊಸಾದ್ 2 ವರ್ಷದ ಯೋಜನೆ ಹೇಗಿತ್ತು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !
Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ
High Court: ವಕೀಲರ ವಾಕ್ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್ ಕೌನ್ಸಿಲ್ಗೆ ಇಲ್ಲ
Arrested: ತ.ನಾಡಿನಿಂದ ಬಂದು ಲ್ಯಾಪ್ಟಾಪ್ ಕಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.