Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

ರಾಜಸ್ಥಾನಕ್ಕೆ ಹೋಗಿ ಆರೋಪಿ ಬಂಧಿಸಿದ ಪೊಲೀಸರು

Team Udayavani, Oct 9, 2024, 11:08 AM IST

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

ಬೆಂಗಳೂರು: ಪಾಲಿಶ್‌ ಹಾಗೂ ಹರಳುಗಳನ್ನು ಕೂರಿಸುವ ನೆಪದಲ್ಲಿ ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಒಂದೂವರೆ ಕೆ.ಜಿ.ಚಿನ್ನಾಭರಣಗಳನ್ನು ಕೊಂಡೊಯ್ದು ಪರಾರಿಯಾಗಿದ್ದ ಅಕ್ಕಸಾಲಿಗನನ್ನು ಹಲಸೂರುಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಅಂಕುರ್‌ ಕುಮಾರ್‌ ಡಂಗರವಾಲ್‌ (32) ಬಂಧಿತ. ಆರೋಪಿಯಿಂದ 38 ಲಕ್ಷ ರೂ. ಮೌಲ್ಯದ 384 ಗ್ರಾಂ ಚಿನ್ನದ ಗಟ್ಟಿ ಹಾಗೂ 10.99 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆರೋಪಿ ಸುಮಾರು ಐದಾರು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ನಗರತ್‌ಪೇಟೆ ಯಲ್ಲೇ ವಾಸವಾಗಿದ್ದು, ಅಕ್ಕಸಾಲಿಗನಾಗಿ ಕೆಲಸ ಮಾಡಿಕೊಂಡಿದ್ದ. ಪರಿಚಯಸ್ಥ ಜ್ಯುವೆಲ್ಲರಿ ಅಂಗಡಿಗಳಿಂದ ಚಿನ್ನಾಭರಣಗಳನ್ನು ತಂದು ಪಾಲಿಶ್‌ ಹಾಗೂ ಹರಳುಗಳನ್ನು ಕೂರಿಸಿ ವಾಪಸ್‌ ಕೊಡುತ್ತಿದ್ದ. ಈ ಮಧ್ಯೆ ನಗರತ್‌ಪೇಟೆಯ ಚಿನ್ನಾಭರಣ ಅಂಗಡಿ ಮಾಲಿಕರೊಬ್ಬರಿಂದ ಮೇ ತಿಂಗಳಿನಲ್ಲಿ ಸುಮಾರು 1 ಕೋಟಿ ರೂ. ಮೌಲ್ಯದ 1 ಕೆ.ಜಿ. 277ಗ್ರಾಂ ಚಿನ್ನಾ ಭರಣಗಳನ್ನು ಒಂದು ತಿಂಗಳಲ್ಲೇ ಪಾಲಿಶ್‌ ಮತು ಹರಳುಗಳನ್ನು ಕೂರಿಸಿ ಕೊಡುವುದಾಗಿ ಹೇಳಿ ತೆಗೆದುಕೊಂಡು ಹೋಗಿದ್ದು, ಆಗಸ್ಟ್‌ ಆದರೂ ವಾಪಸ್‌ ನೀಡಿಲ್ಲ. ಅದರಿಂದ ಅನುಮಾನಗೊಂಡ ಮಾಲಿಕರು, ಆರೋ ಪಿಗೆ ಕರೆ ಮಾಡಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕೂಡಲೇ ಪೊಲೀಸ್‌ ಠಾಣೆಗೆ ದೂರು ನೀಡಿ ದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀ ಸರು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ದಾಗ ಆರೋಪಿ ರಾಜ ಸ್ಥಾನ ಬಿಲ್ವಾರ್‌ ಜಿಲ್ಲೆಯ ಕಲಿ ಯಾಸ್‌ ಗ್ರಾಮದ ತನ್ನ ಮನೆಯಲ್ಲಿರುವುದು ಖಾತ್ರಿ ಯಾಗಿ, ಅಲ್ಲಿಗೆ ಹೋಗಿ ಬಂಧಿಸಲಾಗಿದೆ ಎಂದರು.

ಜ್ಯುವೆಲ್ಲರಿ ಅಂಗಡಿಗಳಿಗೆ ಮಾರಾಟ: ದೋಚಿದ್ದ ಒಂದೂವರೆ ಕೆ.ಜಿ. ಚಿನ್ನಾಭರಣಗಳನ್ನು ಆರೋಪಿ ಕರಗಿಸಿ ಚಿನ್ನದ ಗಟ್ಟಿಗಳನ್ನಾಗಿ ಮಾರ್ಪಡಿಸಿ ಬೆಂಗಳೂರಿನ ವಿವಿಧ ಜ್ಯುವೆಲ್ಲರಿ ಅಂಗಡಿಗಳಿಗೆ ಮಾರಾಟ ಮಾಡಿ, ಹಣ ಪಡೆಯದೆ ರಸೀದಿ ಪಡೆದುಕೊಂಡು ರಾಜಸ್ಥಾನಕ್ಕೆ ಪರಾರಿಯಾಗಿದ್ದ. ಸದ್ಯ ಈ ಜ್ಯುವೆಲ್ಲರಿ ಅಂಗಡಿಗಳಿಂದ 384 ಗ್ರಾಂ ಚಿನ್ನಾಭರಣ ಮತ್ತು ಕೆಲ ಜ್ಯುವೆಲ್ಲರಿ ಮಾಲಿಕರಿಂದ 10.99 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

ಚಿನ್ನ ಮಾರಾಟ ಮಾಡಿ ಪ್ರೇಯಸಿ ಜತೆಗೆ ಸುತ್ತಾಟ: ಆರೋಪಿ ಅಂಕುರ್‌ ಕುಮಾರ್‌ ಡಂಗರವಾಲ್‌, ನಗರದ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಅಸ್ಸಾಂ ಮೂಲದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಇನ್ನು ದೋಚಿದ್ದ ಚಿನ್ನಾಭರಣ ಕರಗಿಸಿ ಅವುಗಳನ್ನು ಕೆಲ ಜ್ಯೂವೆಲ್ಲರಿ ಮಾಲಿಕರಿಗೆ ಮಾರಾಟ ಮಾಡಿ ಲಕ್ಷಾಂತರ ರೂ. ಪಡೆದುಕೊಂಡಿದ್ದ ಆರೋಪಿ, ಪ್ರೇಯಸಿ ಜತೆ ಮುಂಬೈ, ಗೋವಾ, ರಾಜಸ್ಥಾನ ಸೇರಿ ದೇಶದ ಕೆಲ ಪ್ರವಾಸಿ ತಾಣಗಳಿಗೆ ವಿಮಾನದಲ್ಲೇ ಪ್ರಯಾಣಿಸಿ ಮೋಜು-ಮಸ್ತಿ ಮಾಡಿದ್ದಾನೆ. ತಿಂಗಳು ಗಟ್ಟಲೇ ಆಕೆ ಜತೆ ವಿವಿಧ ರಾಜ್ಯಗಳನ್ನು ಸುತ್ತಾಡಿ ಹಣ ಪೋಲು ಮಾಡಿದ್ದಾನೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

 

ಟಾಪ್ ನ್ಯೂಸ್

PM Modi

Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

arrest-lady

Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

6-sathish

Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Theft: ಪಿಜಿಗಳ ಗುರಿಯಾಗಿಸಿ ಲ್ಯಾಪ್‌ಟಾಪ್‌, ಫೋನ್‌ ಕಳ್ಳತನ

Theft: ಪಿಜಿಗಳ ಗುರಿಯಾಗಿಸಿ ಲ್ಯಾಪ್‌ಟಾಪ್‌, ಫೋನ್‌ ಕಳ್ಳತನ

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Bengaluru: ಬಿಲ್‌ ಕೇಳಿದ್ದಕ್ಕೆ ಬಾರ್‌ ಕ್ಯಾಶಿಯರ್‌ಗೆ ಹಲ್ಲೆ

Bengaluru: ಬಿಲ್‌ ಕೇಳಿದ್ದಕ್ಕೆ ಬಾರ್‌ ಕ್ಯಾಶಿಯರ್‌ಗೆ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

PM Modi

Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ

9-gadag

Gadag: 14 ರಂದು ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ 6ನೇ ಪುಣ್ಯಸ್ಮರಣೆ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

8-kalburgi

Kalaburagi: ಕೀಟನಾಶಕ ಸಿಂಪಡಣೆ ಮಾಡುವಾಗ ನಿರ್ಲಕ್ಷ್ಯ ವಹಿಸಿದರೆ ಕಣ್ಣಿಗೆ ಅಪಾಯ:ಡಾ.ರಾಜಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.