Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ
Team Udayavani, Oct 9, 2024, 1:12 PM IST
ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಯಾಗಿ 6 ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ. ಸರ್ಕಾರ ಬಿಳುತ್ತದೆ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದು ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ. 5 ವರ್ಷ ಈ ಸರ್ಕಾರ ಗಟ್ಟಿಯಾಗಿರಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಅ. 9ರ ಬುಧವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರ ಬಿಳುತ್ತದೆ. ಮುಖ್ಯಮಂತ್ರಿ ಬದಲಾವಣೆಯಾಗುತ್ತದೆ ಎಂಬ ಕುರಿತು ಚರ್ಚೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಸಿ, ಯಾರು ಹೇಳಿದ್ದು ನಿಮಗೆ, ವಿಪಕ್ಷಗಳು ಡೇ ಓನ್ ನಿಂದ ಹೇಳುತ್ತಿದೆ. ಈಗ 18 ತಿಂಗಳು ಕಳೆದಿದೆ. ವಿರೋಧ ಪಕ್ಷದವರು ಹೇಳುತ್ತಾರೆಂದು ಸರ್ಕಾರ ಬೀಳುವುದಿಲ್ಲ ಎಂದರು.
ಜಾತಿ ಗಣತಿ ವರದಿ ಪರ ವಿರೋಧ ಸಂಬಂಧ ಮಾತನಾಡಿದ ಅವರು, ವರದಿ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಬೇಕು. ಸದನಕ್ಕೆ ಬರಬೇಕು. ಅದರಲ್ಲಿ ಏನಿದೆ ಎಂದು ನೋಡೋಣ ಎಂದು ಹೇಳಿದರು.
ಕೋಳಿವಾಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಮೂಡಾ ಹಗರಣಕ್ಕೂ ಹರಿಯಾಣ ಚುನಾವಣೆಗೂ ಏನು ಸಂಬಂಧ, ಮೂಡಾ ನಮ್ಮ ರಾಜ್ಯಕ್ಕೆ ಸೀಮಿತವಾಗಿರುವ ವಿಚಾರ. ಅದರ ಪಾಡಿಗೆ ಅದು ತನಿಖೆ ನಡೆಯುತ್ತಿದೆ ಎಂದರು.
ಜಮ್ಮು ಕಾಶ್ಮೀರ ಮತ್ತು ಹರಿಯಾಣ ಚುನಾವಣೆ ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ, ರಾಜ್ಯದಲ್ಲಿ ಚುನಾವಣೆಗೆ ಇನ್ನೂ ಮೂರುವರೆ ವರ್ಷ ಇದೆ. ಆಗ ಯಾವ ವಿಚಾರಗಳು ಮುನ್ನೆಲೆಯಲ್ಲಿ ಇರುತ್ತೋ ನೋಡೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case:ದರ್ಶನ್ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ
Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ
Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ
Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ
National Film Award: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ
Udupi: ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೊಟೇಲ್ ಉದ್ಘಾಟನೆ
Udupi: ಕಾರಿನ ಬ್ರೇಕ್ ಫೇಲ್ ಆಗಿ ಅವಘಡ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
Sagara: ನಗರಸಭೆ ಸಾಮಾನ್ಯ ಸಭೆ; ಲಲಿತಮ್ಮರ ತಡೆಯಾಜ್ಞೆ ವಿರುದ್ಧ ಸದಸ್ಯರ ತೀವ್ರ ಆಕ್ರೋಶ
Mumtaz Ali Case: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.