Haryana: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ… ಸಂಖ್ಯಾ ಬಲ 50ಕ್ಕೆ ಏರಿಕೆ
Team Udayavani, Oct 9, 2024, 4:49 PM IST
ಹರ್ಯಾಣ: ವಿಧಾನ ಸಭಾ ಚುನಾವಣೆಯಲ್ಲಿ ಹರ್ಯಾಣದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಇಬ್ಬರು ಪಕ್ಷೇತರ ಶಾಸಕರು ಬುಧವಾರ(ಅ.9) ಬಿಜೆಪಿ ಸೇರ್ಪಡೆಗೊಂಡಿದ್ದು ಇದರಿಂದ ಬಿಜೆಪಿಯ ಸಂಖ್ಯಾ ಬಲ 50ಕ್ಕೆ ಏರಿಕೆಯಾಗಿದೆ.
ಅದರಂತೆ ಇಂದು (ಬುಧವಾರ) ಪಕ್ಷೇತರ ಶಾಸಕರಾದ ರಾಜೇಶ್ ಜೂನ್ ಮತ್ತು ದೇವೇಂದ್ರ ಕಾಡ್ಯಾನ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇಷ್ಟು ಮಾತ್ರವಲ್ಲದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಹಿಸ್ಸಾರ್ ಕ್ಷೇತ್ರದಲ್ಲಿ ಶಾಸಕಿ ಹಾಗೂ ದೇಶದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಕೂಡ ಬಿಜೆಪಿಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.
ದೇವೇಂದ್ರ ಕಾಡ್ಯಾನ್ ಈ ಹಿಂದೆ ಬಿಜೆಪಿಯಲ್ಲಿದ್ದು ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಜಯ ಗಳಿಸಿದ್ದಾರೆ, ಈ ಕುರಿತು ಹೇಳಿಕೆ ನೀಡಿರುವ ಕಾಡ್ಯಾನ್, ಗನ್ನೂರ್ ಕ್ಷೇತ್ರದ ಜನತೆಗೆ ನಾನು ಚಿರಋಣಿಯಾಗಿದ್ದೇನೆ ಅಲ್ಲದೆ ನನ್ನನು ನಂಬಿದ ಕ್ಷೇತ್ರದ ಜನತೆಗೆ ನಾನು ಸಹಾಯ ಮಾಡಲೇ ಬೇಕು ಹಾಗಾಗಿ ನಾನು ಬಿಜೆಪಿಗೆ ಸೇರುತಿದ್ದೇನೆ ಎಂದು ಹೇಳಿದ್ದಾರೆ.
#WATCH | Delhi: Independent MLAs Rajesh Joon and Devender Kadyan extend their support to BJP in Haryana.
BJP is set to form the government in the state for the 3rd time. pic.twitter.com/JcCKch0rLZ
— ANI (@ANI) October 9, 2024
ರಾಜೇಶ್ ಜೂನ್ ಅವರಿಗೆ ಬಹದ್ದೂರ್ ಗಢದಿಂದ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಬಿಜೆಪಿ ಅಭ್ಯರ್ಥಿ ರಾಜೇಶ್ ಕೌಶಿಕ್ ಅವರನ್ನು 41,999 ಮತಗಳಿಂದ ಸೋಲಿಸಿದ್ದು ಇದೀಗ ಅವರು ಬಿಜೆಪಿ ಜೊತೆ ಕೈಜೋಡಿಸಿದ್ದಾರೆ.
ಸಾವಿತ್ರಿ ಜಿಂದಾಲ್ ಸೇರಿದಂತೆ ಹರಿಯಾಣದ ಮೂವರು ಪಕ್ಷೇತರ ಶಾಸಕರು ಬಿಜೆಪಿಯನ್ನು ಬೆಂಬಲಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಹರಿಯಾಣ ಬಿಜೆಪಿ ಮುಖ್ಯಸ್ಥ ಮೋಹನ್ ಲಾಲ್ ಬಡೋಲಿ ಹೇಳಿದ್ದಾರೆ.
#WATCH | Delhi: Independent MLA from Haryana’s Ganaur Assembly seat, Devender Kadyan extends support to BJP
He says, “I am supporting the BJP government. All the 36 fraternities of Ganaur have voted for me and their aspirations can be fulfilled only by joining the government. We… pic.twitter.com/sDO0s3HonZ
— ANI (@ANI) October 9, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ratan Tata: ರತನ್ ಟಾಟಾ ಅರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ
Delhi;ಕಾಂಗ್ರೆಸ್ ನೊಂದಿಗೆ ಮೈತ್ರಿ?: 2 ರಾಜ್ಯಗಳ ಫಲಿತಾಂಶದ ಬಳಿಕ ಆಪ್ ಹೇಳಿದ್ದೇನು?
Prayagraj: ಕುಂಭಮೇಳದಲ್ಲಿ ಮಳಿಗೆಗೆ ಸನಾತನೇತರರಿಗೆ ಅವಕಾಶ ಇಲ್ಲ: ಅಖಾರ ಪರಿಷತ್
Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ
Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.