Udupi: ದೇವಸ್ಥಾನಕ್ಕೆ ಹೋಗಿ ಹಿಂತಿರುಗುವ ವೇಳೆ ಅಪಘಾತ… ವ್ಯಕ್ತಿ ಮೃತ್ಯು

ಅಲ್ಪ ಸ್ವಲ್ಪ ಗಾಯಗಳೊಂದಿಗೆ ಹಲವರು ಪಾರು...

Team Udayavani, Oct 9, 2024, 5:43 PM IST

1-ddd

ಉಡುಪಿ: ಇಂದ್ರಾಳಿ ದೇವಸ್ಥಾನದಲ್ಲಿ ಮಧ್ಯಾಹ್ನ ಊಟ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅದೇ ಪರಿಸರದಲ್ಲಿ ಹಿಂದಿನಿಂದ ಅತೀ ವೇಗದಲ್ಲಿ ಬಂದ ಇಕೋ ವಾಹನ ಢಿಕ್ಕಿ ಹೊಡೆದ ಕಾರಣ ಪಡುಬಿದ್ರಿ ನಿವಾಸಿ, ಮಣಿಪಾಲ ಯುನಿಟ್‌-5 ಉದ್ಯೋಗಿ ದೀಪೇಶ್‌ ದೇವಾಡಿಗ(36) ಗಂಭೀರ ಗಾಯಗೊಂಡು ಚಿಕಿತ್ಸೆ ಫ‌ಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಬುಧವಾರ ಸಾವನ್ನಪ್ಪಿದರು. ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.

ನವರಾತ್ರಿ ಹಿನ್ನೆಲೆಯಲ್ಲಿ ಕೆಲವೊಂದು ದೇವಸ್ಥಾನಗಳಿಗೆ ಇವರು ಮಧ್ಯಾಹ್ನದ ವೇಳೆ ಭೇಟಿ ನೀಡಿ ಪ್ರಸಾದ ಸ್ವೀಕರಿಸುತ್ತಿದ್ದರು. ಬುಧವಾರ ಪರ್ಕಳದ ನಿವಾಸಿ ಪ್ರವೀಣ್‌ ಅವರೊಂದಿಗೆ ದೇವಸ್ಥಾನಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ವಾಹನವನ್ನು ಕೆಳಭಾಗದಲ್ಲಿ ನಿಲ್ಲಿಸಿ ಊಟ ಮುಗಿಸಿ ನಡೆದುಕೊಂಡು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಸ್ತೆಯ ಎರಡೂ ಬದಿಯಲ್ಲಿ ದ್ವಿಚಕ್ರ ವಾಹನಗಳು ಹಾಗೂ ಜನರು ಓಡಾಟ ಮಾಡಿಕೊಂಡಿದ್ದರು. ಇವರು ಕೂಡ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಹಿಂದುಗಡೆ ನಿಂತಿದ್ದ ವಾಹನ ಏಕಾಏಕಿ ಆಗಮಿಸಿ ಢಿಕ್ಕಿ ಹೊಡೆದಿದೆ. ಇವರ ಜತೆಗಿದ್ದ ಪ್ರವೀಣ್‌ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಅವರು ಕೂಡ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ ಇತರ 4ರಿಂದ 5 ಮಂದಿಗೂ ವಾಹನ ಢಿಕ್ಕಿ ಹೊಡೆದಿದ್ದು, ಎಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪರಾಗಿದ್ದಾರೆ.

ಘಟನೆಗೆ ಕಾರಣವೇನು?
ವಾಹನ ರಸ್ತೆಯಲ್ಲಿ ನಿಂತಿದ್ದು, ಅದರೊಳಗೆ ಪ್ರಯಾಣಿಕರೂ ಇದ್ದು, ಇನ್ನೊಬ್ಬರ ಬರುವಿಕೆಗಾಗಿ ಕಾಯುತ್ತಿದ್ದರು. ಈ ವೇಳೆ ವಾಹನ ಒಮ್ಮೆಲೇ ಅತೀ ವೇಗದಿಂದ ಮುಂದಕ್ಕೆ ಬಂದಿದೆ. ಕೆಲವು ಮಂದಿ ಬ್ರೇಕ್‌ ಫೈಲ್‌ನಿಂದ ಈ ಅವಘಡ ನಡೆದಿದೆ ಎನ್ನುತ್ತಾರೆ ಕೆಲವು ಪ್ರತ್ಯೇಕ್ಷದರ್ಶಿಗಳು. ಆದರೆ ಕೆಲವೇ ತಿಂಗಳ ಹಿಂದೆ ಖರೀದಿಸಿದ್ದ ವಾಹನದಲ್ಲಿ ಬ್ರೇಕ್‌ ಫೈಲ್‌ ಆಗುವುದಾದರೂ ಹೇಗೆ ಎಂಬ ಪ್ರಶ್ನೆಯೂ ಎದ್ದಿದೆ. ಎರಡೂ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದ ಕಾರಣ ಭಯದಿಂದ ಚಾಲಕ ಬ್ರೇಕ್‌ನಲ್ಲಿದ್ದ ಕಾರು ಎಕ್ಸಲೇಟರ್‌ಗೆ ಅದುಮಿದ ಕಾರಣ ಈ ಘಟನೆ ನಡೆದಿರುವ ಸಾಧ್ಯತೆಗಳೂ ಅಧಿಕವಿದೆ ಎಂದೂ ಅಲ್ಲಿರುವವರು ಕೆಲವರು ತಿಳಿಸಿದ್ದಾರೆ.

ಉತ್ತಮ ಕ್ರೀಡಾಪಟು
ಕ್ರಿಕೆಟ್‌ ಆಟದ ಬಗ್ಗೆ ಅತೀವ ಆಸಕ್ತಿ ಹೊಂದಿದ್ದ ದೀಪೇಶ್‌ ಪಡುಬಿದ್ರಿ ಪರಿಸರ, ಮಂಗಳೂರು, ಉಡುಪಿ, ಮಣಿಪಾಲದ ಸಹಿತ ಮಣಿಪಾಲ ಸಂಸ್ಥೆ ಆಯೋಜಿಸಿದ್ದ ಹಲವಾರು ಕ್ರಿಕೆಟ್‌ ಪಂದ್ಯಾಕೂಟಗಳಲ್ಲಿ ಭಾಗವಹಿಸಿದ್ದ. ಕ್ರೀಡೆಯ ಬಗ್ಗೆ ಬಹುತೇಕ ಎಲ್ಲ ರೀತಿಯ ಮಾಹಿತಿಗಳೂ ಇವನಲ್ಲಿತ್ತು. 3 ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ. ಈ ಹಿಂದೆ ಮಣಿಪಾಲ ಸಂಸ್ಥೆಯ ಪ್ಯಾಕೇಜಿಂಗ್‌ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿದ್ದು, ಅನಂತರ 3 ತಿಂಗಳ ಹಿಂದೆ ಸ್ಟೋರ್ ವಿಭಾಗದಲ್ಲಿ ಕರ್ತವ್ಯ ಮಾಡಿಕೊಂಡಿದ್ದರು.

ಅಪಾಯಕಾರಿ ರಸ್ತೆ
ನವರಾತ್ರಿ ಪ್ರಯುಕ್ತ ಅಧಿಕ ಸಂಖ್ಯೆಯಲ್ಲಿ ಭಕ್ತರು ಈ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ಈ ರಸ್ತೆ ಏರುತಗ್ಗಿನಿಂದ ಕೂಡಿದೆ. ರಸ್ತೆಯ ಇಕ್ಕೆಲಗಳಲ್ಲಿ ಮಣ್ಣ ಎದ್ದುಹೋಗಿದ್ದು, ಹೊಂಡಗಳಂತಾಗಿದೆ. ಈ ನಡುವೆ ವಾಹನಗಳು ಮೇಲ್ಗಡೆಯೇ ಹೋಗುವ ಕಾರಣ ಪಾದಚಾರಿಗಳಿಗೆ ನಡೆದಾಡಲೂ ಸ್ಥಳವಿಲ್ಲದಂತಹ ಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ವಾಹನಗಳನ್ನು ಕೆಳಗೆ ಇರಿಸಿಕೊಂಡು ನಡೆದುಕೊಂಡು ಹೋದರಷ್ಟೇ ಇಂತಹ ಅವಘಡಗಳನ್ನು ತಪ್ಪಿಸಲು ಸಾಧ್ಯವಿದೆ. ಹಿರಿಯ ನಾಗರಿಕರು ಹಾಗೂ ವಿಐಪಿ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳನ್ನು ಕೆಲ ಭಾಗದಲ್ಲಿಯೇ ನಿಲ್ಲಿಸಿದರೆ ಇಲ್ಲಿ ಉಂಟಾಗುವ ಟ್ರಾಫಿಕ್‌ ದಟ್ಟನೆಯನ್ನು ನಿಯಂತ್ರಿಸಲು ಸಾಧ್ಯವಿದೆ ಎನ್ನುತ್ತಾರೆ ಸ್ಥಳೀಯರು.

ಟಾಪ್ ನ್ಯೂಸ್

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

road-mishap-11

Bramavara: ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ

death

Udupi: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಯುವಕ ಆತ್ಮಹ*ತ್ಯೆ

1-OP-BIG

Udupi: ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Geethanjali Silks ಉಡುಪಿ ಪುರುಷರ ಬಟ್ಟೆಗಳ ವಿಶಾಲ ವಿಭಾಗ ಉದ್ಘಾಟನೆ

Geethanjali Silks ಉಡುಪಿ ಪುರುಷರ ಬಟ್ಟೆಗಳ ವಿಶಾಲ ವಿಭಾಗ ಉದ್ಘಾಟನೆ

5-geethanjai-silks

Geethanjali Silks: ಪುರುಷರ ಬಟ್ಟೆಗಳ ವಿಶಾಲ ವಿಭಾಗ ಗ್ರಾಹಕರಿಂದಲೇ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

fraudd

Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ

accident

Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್‌ ದೀಪದ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.