BBK11: ಬಿಗ್ ಬಾಸ್ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ
Team Udayavani, Oct 9, 2024, 7:24 PM IST
ಬೆಂಗಳೂರು: ಕನ್ನಡ ಬಿಗ್ ಬಾಸ್(Bigg Boss Kannada-11) ಆಟ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ʼಸ್ವರ್ಗ – ನರಕʼದ ಸ್ಪರ್ಧಿಗಳ ಎದೆಯಲ್ಲಿ ಢವ ಢವ ಎನ್ನುವಂತಹ ಪ್ರಸಂಗಗಳು ದೊಡ್ಮನೆಯಲ್ಲಿ ನಡೆಯುತ್ತಿದೆ.
ಜಗದೀಶ್, ಹಂಸಾ ಅವರ ಮಾತೇ ಈ ವಾರ ಹೆಚ್ಚು ಸದ್ದು ಮಾಡಿದೆ. ನಿನ್ನೆಯ ಸಂಚಿಕೆಯಲ್ಲಿ ಬಿಗ್ ಬಾಸ್ ಟಾಸ್ಕ್ ತಯಾರಿ ವೇಳೆ ನಿಯಮ ಉಲ್ಲಂಘನೆ ಆಗಿದೆ. ಇದರ ಪರಿಣಾಮ ಬಿಗ್ ಬಾಸ್ ಮನೆಮಂದಿಗೆ ಹಾಗೂ ಕ್ಯಾಪ್ಟನ್ಗೆ ತಕ್ಕ ಶಿಕ್ಷೆಯನ್ನು ನೀಡಿದ್ದಾರೆ.
ಇದರ ನಡುವೆ ಬಿಗ್ ಬಾಸ್ ಮನೆಮಂದಿ ಭಯ ಬೀಳುವ ಪ್ರಸಂಗ ನಡೆದಿದೆ. ಇದನ್ನು ನೋಡಿ ಸ್ಪರ್ಧಿಗಳು ಬೆಚ್ಚಿ ಬಿದ್ದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ದೆವ್ವದ ಕಾಟ ಶುರುವಾಗಿದೆ ಎಂದು ಸ್ಪರ್ಧಿಗಳು ಮಾತನಾಡಿಕೊಳ್ಳುತ್ತಿದ್ದಾರೆ.
ಆಗಿದ್ದೇನು?: ಸ್ವರ್ಗ ನಿವಾಸಿಗಳು ಒಂದು ಕಡೆ ಕೂತುಕೊಂಡು ಟಾಸ್ಕ್ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಈ ನಡುವೆ ಇದ್ದಕ್ಕಿದ್ದಂತೆ ತಟ್ಟೆಯೊಂದು ಕೆಳಗೆ ಬಿದ್ದು ಒಡೆದು ಹೋಗಿದೆ. ಇದನ್ನು ನೋಡಿದ ಸ್ಪರ್ಧಿಗಳು ಅತ್ತ ಕಡೆ ಹೋಗಿದ್ದಾರೆ. ತಟ್ಟೆಗಳು ಹೆಂಗೆ ಒಡೆದು ಹೋಗುತ್ತಿದೆ. ಈ ಮನೆಯಲ್ಲಿ ದೆವ್ವ ಇರಬಹುದೆಂದು ಸ್ಪರ್ಧಿಯೊಬ್ಬರು ಗಾಬರಿಯಿಂದ ಮಾತನಾಡಿದ್ದಾರೆ. ಐಶ್ವರ್ಯಾ ಹೆಚ್ಚು ಭಯ ಬಿದ್ದಿದ್ದು, ಈ ಮನೆಯಲ್ಲಿ ಏನೋ ನೆಗೆಟಿವ್ ಶಕ್ತಿಯಿದೆ. ನನ್ನ ತಲೆಯಲ್ಲಿ ಅದೇ ಓಡುತ್ತಿದೆ ಎಂದು ಹೇಳಿದ್ದಾರೆ.
ಇದಕ್ಕೆ ಉಗ್ರಂ ಮಂಜು ಹಾಗೂ ಇತರರು ಇಲ್ಲ ಹಾಗೇನಿಲ್ಲ. ದೆವ್ವ- ಗಿವ್ವಾ ಏನೂ ಇರಲ್ಲ ಎಂದಿದ್ದಾರೆ. ಮತ್ತೊಬ್ಬರು ನೆಗೆಟಿವ್ ಎನರ್ಜಿ ಎಲ್ಲ ಹೋಯಿತು ಅನ್ಕೊಳ್ಳಿ ಎಂದು ಐಶ್ವರ್ಯಾ ಅವರಿಗೆ ಧೈರ್ಯ ತುಂಬಿದ್ದಾರೆ. ಹೀಗೆ ಮಾತನಾಡುವಾಗಲೇ ಸ್ಪರ್ಧಿಗಳ ಮುಂದೆಯೇ ಮತ್ತೊಂದು ತಟ್ಟೆ ಒಡೆದು ಹೋಗಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ನಿಗೂಢವಾಗಿ ಒಡೀತಿವೆ ತಟ್ಟೆಗಳು; ಸದಸ್ಯರ ಎದೆಯಲ್ಲಿ ಢವಢವ!
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ ರಾತ್ರಿ 9:30
#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa pic.twitter.com/zLHcHlE2Zg— Colors Kannada (@ColorsKannada) October 9, 2024
ಇಂದು ರಾತ್ರಿ (ಅ.9ರಂದು) ಈ ಸಂಚಿಕೆ ಪ್ರಸಾರವಾಗಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್
BB18: ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ
BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ
BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?
Huli Karthik: ಜಾತಿ ನಿಂದನೆ ಆರೋಪ; ಹಾಸ್ಯ ನಟ ಹುಲಿ ಕಾರ್ತಿಕ್ ಸೇರಿ ನಾಲ್ವರ ವಿರುದ್ಧ FIR
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ
UPI: ವಹಿವಾಟು ಮಿತಿ ಏರಿಕೆಗೆ ಆರ್ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ
BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್
Mangaluru: ಆಲ್ವಿನ್ ಡಿ’ಸೋಜ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.