Technology Assistance: ಮರುಸಿಂಚನ, ಗಣಿತ ಗಣಕಕ್ಕೆ ಎಐ ನೆರವು: ಸಚಿವ ಮಧು
6-10ನೇ ತರಗತಿ ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿ
Team Udayavani, Oct 10, 2024, 6:22 AM IST
ಬೆಂಗಳೂರು: ಸರಕಾರ ಜಾರಿಗೊಳಿಸಲು ಮುಂದಾಗಿರುವ “ಮರುಸಿಂಚನ’ ಹಾಗೂ “ಗಣಿತ ಕಣಕ’ ಕಾರ್ಯಕ್ರಮಗಳಿಗೆ ಜೆ-ಪಾಲ್ ಸೌತ್ ಏಷಿಯಾ ಸಂಸ್ಥೆ ಅಭಿವೃದ್ಧಿಪಡಿಸುವ ಕೃತಕ ಬುದ್ಧಿಮತ್ತೆ ಸಹಿತ ಎಲ್ಲ ರೀತಿಯ ತಂತ್ರಜ್ಞಾನದ ನೆರವನ್ನೂ ಪಡೆದುಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಾಲಾ ಶಿಕ್ಷಣದಲ್ಲಿ ಗುಣಮಟ್ಟದ ಬದಲಾವಣೆಗಾಗಿ “ಮರುಸಿಂಚನ’ ಹಾಗೂ “ಗಣಿತ ಗಣಕ’ ಕಾರ್ಯಕ್ರಮಗಳಿಗೆ ಸಂಬಂಧಿಸಿ ಜೆ-ಪಾಲ್ ಸೌತ್ ಏಷಿಯಾ ಸಂಸ್ಥೆಯೊಂದಿಗೆ ಬುಧವಾರ ವಿಧಾನಸೌಧದಲ್ಲಿ ಒಡಂಬಡಿಕೆ ಮಾಡಿಕೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. 6-10ನೇ ತರಗತಿ ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿ ಗಳ ಮೂಲಕ ಅವರ ಬುದ್ಧಿಮತ್ತೆಯನ್ನು ಹೆಚ್ಚಿಸುವುದು ಇದರ ಭಾಗವಾಗಿರಲಿದ್ದು, ವಿದ್ಯಾರ್ಥಿಗಳ ಕೈಗೆ ಸುಲಭವಾಗಿ ಸಿಗುವ ಮೊಬೈಲ್ನ ದುರುಪಯೋಗ ಆಗುವ ಬದಲು ಅದನ್ನೇ ಬಳಸಿಕೊಂಡು ಮರುಸಿಂಚನ ಕಾರ್ಯಕ್ರಮ ಮಾಡುವುದು ಇದರ ಉದ್ದೇಶ.
ವಿದ್ಯಾರ್ಥಿ ತಾನಿರುವ ತರಗತಿಯ ವಿಷಯ ಅಥವಾ ಪಾಠಗಳನ್ನು ಅರ್ಥ ಮಾಡಿಕೊಳ್ಳುತ್ತಿಲ್ಲವೆಂದರೆ, ಹಿಂದಿನ ತರಗತಿಯಲ್ಲಿ ತಪ್ಪಿದ ಕಲಿಕೆಯನ್ನು ಆ ಮಗುವಿಗೆ ತಿಳಿಸಲಾಗುತ್ತದೆ. ಇದರಿಂದ ಮಕ್ಕಳಲ್ಲಿರುವ ಗೊಂದಲ ಬಗೆಹರಿಸಿ ಮುಂದುವರಿಯಲು ಅನುಕೂಲ ಆಗಲಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಲಿದೆ. 9 ಸಾವಿರ ಶಾಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದರು.
ಸೊರಬ, ರಾಯಚೂರಲ್ಲಿ ಪ್ರಾಯೋಗಿಕ ಅನುಷ್ಠಾನ
ಗಣಿತ ಗಣಕ ಕಾರ್ಯಕ್ರಮವು ಸೊರಬ ಮತ್ತು ರಾಯ ಚೂರಿನಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳ್ಳು ತ್ತಿದ್ದು, ಶಾಲಾ ಶಿಕ್ಷಕರು 3-5ನೇ ತರಗತಿ ಮಕ್ಕಳ ಪೋಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಗಣಿತ ಪಾಠ ಮಾಡಲಿ ದ್ದಾರೆ. ಅವರೊಂದಿಗೆ ಹೇಗೆ ಮಾತನಾಡಬೇಕು? ಪೋಷಕರನ್ನು ಕಲಿಕೆಯಲ್ಲಿ ಒಳಗೊಳ್ಳುವುದು ಹೇಗೆ ಎಂಬಿತ್ಯಾದಿ ತರಬೇತಿಯನ್ನು ಶಿಕ್ಷಕರಿಗೆ ಈ ಸಂಸ್ಥೆ ನೀಡಲಿದೆ ಎಂದು ಮಾಹಿತಿ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಸಮಗ್ರ ಶಿಕ್ಷಣ ಯೋಜನಾ ನಿರ್ದೇಶಕ ಕೆ.ಎನ್.ರಮೇಶ್, ಜೆ-ಪಾಲ್ ಸೌತ್ ಏಷಿಯಾ ಸಂಸ್ಥೆಯ ಸಿಇಒ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ
Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್ ಬಹಿರಂಗ: ಸಂತ್ರಸ್ತೆ
Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
Find On Investigation: ವಾಲ್ಮೀಕಿ ಹಗರಣ ಸೂತ್ರಧಾರ ಮಾಜಿ ಸಚಿವ ಬಿ.ನಾಗೇಂದ್ರ: ಇ.ಡಿ.
Congress Politics: ಡಿನ್ನರ್ ಮೀಟಿಂಗ್ಗೆ ಮಹತ್ವ ಬೇಡ: ಸಚಿವ ಡಾ.ಎಚ್.ಸಿ.ಮಹದೇವಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ratan Tata: ಕಳಚಿದ ಕೈಗಾರಿಕೆ ಕ್ಷೇತ್ರದ ಬೃಹತ್ ಕೊಂಡಿ: ಶಾಸಕ ಮೇಟಿ
Navratri Special: ಪ್ರೀತಿ ಒಂದೇ ಸಾಕು ಒಳಗಿನ ಭೋರ್ಗರೆವ ಯೋಚನೆಗಳ ತಣಿಸಲು
Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ
Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ
Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್ರೂಂನ “ತ್ರಿಶಕ್ತಿ’ ನಾಯಕರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.