Formal Welcome: 54 ದಿನಗಳ ಬಳಿಕ ಮುಖ್ಯಮಂತ್ರಿ- ರಾಜ್ಯಪಾಲರು ಮುಖಾಮುಖಿ
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಆತಿಥ್ಯಕ್ಕೆ ಭೇಟಿ
Team Udayavani, Oct 10, 2024, 5:17 AM IST
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದ ವಿಷಯಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿರುವ ಕಾರಣಕ್ಕೆ ರಾಜ್ಯಪಾಲರು ಮತ್ತು ರಾಜಭವನದಿಂದ ಅಂತರ ಕಾಯ್ದುಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 54 ದಿನಗಳ ಬಳಿಕ ಬುಧವಾರ ರಾಜಭವನಕ್ಕೆ ಭೇಟಿ ಕೊಟ್ಟು, ರಾಜ್ಯಪಾಲರಿಗೆ ಹಸ್ತಲಾಘವ ನೀಡಿದ್ದಾರೆ.
ಮುಖ್ಯಮಂತ್ರಿಯವರು ಕೊನೆಯ ಬಾರಿಗೆ ರಾಜಭವನಕ್ಕೆ ಭೇಟಿ ನೀಡಿದ್ದು ಆ. 15ರಂದು ಸ್ವಾತಂತ್ರೋತ್ಸವದ ಅಂಗವಾಗಿ ರಾಜ್ಯಪಾಲರು ಹಮ್ಮಿಕೊಳ್ಳುವ ಉಪಾಹಾರ ಕೂಟದಲ್ಲಿ ಪಾಲ್ಗೊಳ್ಳಲು. ಅದಾದ ಬಳಿಕ ಬುಧವಾರ ಅ.9ರಂದು ಭೇಟಿ ಕೊಟ್ಟಿದ್ದಾರೆ.
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ನೇತೃತ್ವದ ನಿಯೋಗ ಬೆಂಗಳೂರು ಪ್ರವಾಸದ ಹಿನ್ನೆಲೆಯಲ್ಲಿ ಬುಧವಾರ ರಾಜ ಭವನಕ್ಕೆ ಆಗಮಿಸಿದ ಪ್ರಯುಕ್ತ ಅವರಿಗೆ ರಾಜ್ಯ ಆತಿಥ್ಯ ಶಿಷ್ಟಾಚಾರದಂತೆ ಔಪಚಾರಿಕ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಅದರಲ್ಲಿ ಭಾಗವಹಿಸಲು ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿದ್ದರು. ಅಲ್ಲಿ ರಾಜ್ಯಪಾಲರನ್ನು ಮುಖಾಮುಖಿಯಾಗಿ ನಗುಮುಖದೊಂದಿಗೆ ಹಸ್ತಲಾಘವ ಮಾಡಿದರು. ರಾಜ್ಯಪಾಲರು ಕೂಡ ಅದೇ ನಗುವಿನೊಂದಿಗೆ ಪ್ರತಿಕ್ರಿಯೆ ನೀಡಿದರು. ಬಳಿಕ ರಾಜ್ಯಪಾಲರೊಂದಿಗೆ ಸಿಎಂ ವೇದಿಕೆಯನ್ನೂ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ
Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್ ಬಹಿರಂಗ: ಸಂತ್ರಸ್ತೆ
Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
Find On Investigation: ವಾಲ್ಮೀಕಿ ಹಗರಣ ಸೂತ್ರಧಾರ ಮಾಜಿ ಸಚಿವ ಬಿ.ನಾಗೇಂದ್ರ: ಇ.ಡಿ.
Congress Politics: ಡಿನ್ನರ್ ಮೀಟಿಂಗ್ಗೆ ಮಹತ್ವ ಬೇಡ: ಸಚಿವ ಡಾ.ಎಚ್.ಸಿ.ಮಹದೇವಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ
Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ
Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್ರೂಂನ “ತ್ರಿಶಕ್ತಿ’ ನಾಯಕರು!
Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಮೈತ್ರಿಕೂಟದಲ್ಲಿ ತಲ್ಲಣ
Women’s T20 World Cup: ಸ್ಮತಿ, ಹರ್ಮನ್ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.