Bengaluru: 70 ಕೋಟಿ ರೂ. ಆಸ್ತಿ ಕಬಳಿಕೆಗೆ ಯತ್ನ ಪ್ರಕರಣ; ಐವರು ಆರೋಪಿಗಳ ಸೆರೆ


Team Udayavani, Oct 10, 2024, 10:54 AM IST

1

ಬೆಂಗಳೂರು: ನಕಲಿ ದಾಖಲೆಗಳನ್ನು ತಯಾರಿಸಿ ಸುಮಾರು 70 ಕೋಟಿ ರೂ. ಮೌಲ್ಯದ ಆಸ್ತಿಗೆ ಪರಿಹಾರ ಪಡೆಯಲು ಯತ್ನಿಸಿದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಲ್ಲಘಟ್ಟ ನಿವಾಸಿಗಳಾದ ಶ್ರೀನಿವಾಸ್‌ (32), ನಾಗರಾಜ್‌ (34), ರವಿಕುಮಾರ್‌ (32), ಭರತ್‌ (31) ಹಾಗೂ ಸ್ವಾಮಿ (30) ಬಂಧಿತರು. ಆರೋಪಿಗಳು ಬಿಡಿಎ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜತೆ ಸೇರಿ ಚಲ್ಲಘಟ್ಟದಲ್ಲಿರುವ ಸುಮಾರು 70 ಕೋಟಿ ರೂ. ಮೌಲ್ಯದ ಆಸ್ತಿಗೆ ಪರಿಹಾರ ಪಡೆಯಲು ಯತ್ನಿಸಿದ್ದರು.

ಈ ಸಂಬಂಧ ಬಿಡಿಎನ ವಿಚಕ್ಷಣ ದಳದ ಡಿವೈಎಸ್ಪಿ ಮಲ್ಲೇಶ್‌ ಎಂಬುವರು ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳ ಪೈಕಿ ನಾಗರಾಜ್‌ನನ್ನು ಪೊಲೀಸ್‌ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಇದೇ ಪ್ರಕರಣದಲ್ಲಿ ಬಿಡಿಎ ಭೂಸ್ವಾಧೀನ ಅಧಿಕಾರಿ ಸುಧಾ, ಬೆಂಗಳೂರು ದಕ್ಷಿಣ ವಿಭಾಗದ ಉಪ ವಿಭಾಗಾ ಧಿಕಾರಿ ಶಿವಣ್ಣ, ಬಿಡಿಎ ಸರ್ವೇಯರ್‌ ರವಿಪ್ರಕಾಶ್‌, ಕೆ.ಜಿ.ರಸ್ತೆ ಕಚೇರಿಯ ವಿಶೇಷ ತಹಶೀಲ್ದಾರ್‌, ಕಂದಾಯ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಇತರೆ ಅಧಿಕಾರಿಗಳು, ಸಿಬ್ಬಂದಿ ವಿರುದ್ಧವೂ ಎಫ್ಐಆರ್‌ ದಾಖಲಾಗಿದೆ.

ಸರ್ಕಾರಿ ಅಧಿಕಾರಿಗಳು ಸೇರಿದಂತೆ 19 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದರು. ಎಲ್ಲ ಆರೋಪಿಗಳು ಚಲ್ಲಘಟ್ಟದ ಸರ್ವೇ ನಂ 13 ಹಾಗೂ 58ರಲ್ಲಿನ 6 ಎಕರೆಗೆ ನಕಲಿ ದಾಖಲೆ ಸೃಷ್ಟಿಸಿದ್ದರು. ಜಮೀನಿನ ಮೂಲ ಮಾಲಿಕ ಮೂಡ್ಲಪ್ಪ ಅವರಿಗೂ ಆರೋಪಿಗಳಿಗೂ ಯಾವುದೇ ಸಂಬಂಧ ಇಲ್ಲದಿದ್ದರೂ ಅಧಿಕಾರಿಗಳ ಜತೆ ಶಾಮೀಲಾಗಿ ಕಂದಾಯ ಇಲಾಖೆಯಿಂದ ನಕಲಿ ದಾಖಲೆ ಪಡೆದುಕೊಳ್ಳಲಾಗಿತ್ತು. ನಕಲಿ ದಾಖಲೆಗಳನ್ನು ಬಿಡಿಎಗೆ ಸಲ್ಲಿಸಿ, ಆಸ್ತಿಯ ಮಾಲೀಕರು ತಾವೇ ಎಂದು ಹೇಳಿಕೊಂಡು 70 ಕೋಟಿ ರೂ. ಮೌಲ್ಯದ ಆಸ್ತಿಗೆ ಪರಿಹಾರ ಕೋರಿದ್ದರು. ಈ ಹಿನ್ನೆಲೆಯಲ್ಲಿ ಗೋವಿಂದರಾಜು ಎಂಬವರು ಬಿಡಿಎ ವಿಚಕ್ಷಣ ದಳಕ್ಕೆ ದೂರು ನೀಡಿದ್ದರು. ಬಳಿಕ ಪ್ರಾಥಮಿಕ ತನಿಖೆ ನಡೆಸಿದಾಗ ವಂಚನೆ ಗೊತ್ತಾಗಿ, ಡಿವೈಎಸ್ಪಿ ಮಲ್ಲೇಶ್‌ ದೂರು ನೀಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.