Rafael Nadal; ವೃತ್ತಿಪರ ಟೆನ್ನಿಸ್ ಗೆ ವಿದಾಯ ಹೇಳಿದ ದಿಗ್ಗಜ ರಾಫೆಲ್ ನಡಾಲ್
Team Udayavani, Oct 10, 2024, 3:39 PM IST
ಪ್ಯಾರಿಸ್: ಸಾರ್ವಕಾಲಿಕ ಶ್ರೇಷ್ಠ ಟೆನಿಸ್ ಆಟಗಾರರಲ್ಲಿ ಒಬ್ಬರಾದ ರಾಫೆಲ್ ನಡಾಲ್ (Rafael Nadal) ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ.
22 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್ ರಾಫೆಲ್ ನಡಾಲ್ ಅವರು ಸಾರ್ವಕಾಲಿಕ ಅತ್ಯಂತ ಪ್ರೀತಿಯ ಕ್ರೀಡಾಪಟುಗಳಲ್ಲಿ ಒಬ್ಬರಾಗಿ ಟೆನ್ನಿಸ್ ಆಟಕ್ಕೆ ವಿದಾಯ ಹೇಳಿದರು.
ನವೆಂಬರ್ ನಲ್ಲಿ ನಡೆಯಲಿರುವ ಡೇವಿಸ್ ಕಪ್ (Davis cup) ಕೂಟದಲ್ಲಿ ವೃತ್ತಿಪರ ಟೆನಿಸ್ ಆಟಗಾರನಾಗಿ ನಡಾಲ್ ಅವರು ಕೊನೆಯ ಪ್ರವಾಸವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ವಿಡಿಯೋ ಮೂಲಕ ನಿವೃತ್ತಿ ಸುದ್ದಿ ಪ್ರಕಟಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನ ನಂತರ ಅವರು ಡೇವಿಸ್ ಕಪ್ ಮೂಲಕ ಅಂಕಣದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ. 2004 ರಲ್ಲಿ, ಯುವ ನಡಾಲ್ ಸ್ಪೇನ್ ಗೆ ಡೇವಿಸ್ ಕಪ್ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಅನುಭವವನ್ನು ಅವರು ತಮ್ಮ ನಿವೃತ್ತಿ ಘೋಷಣೆಯಲ್ಲಿ ಪ್ರೀತಿಯಿಂದ ಉಲ್ಲೇಖಿಸಿದ್ದಾರೆ.
ಫ್ರೆಂಚ್ ಓಪನ್ ನಲ್ಲಿ ಪ್ರಭುತ್ವ ಸಾಧಿಸಿದ್ದ ಸ್ಪೇನ್ ಆಟಗಾರ ನಡಾಲ್ ಅವರು ಗೆದ್ದ 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳಲ್ಲಿ 14 ಪ್ರಶಸ್ತಿಯನ್ನು ಆವೆ ಮಣ್ಣಿನ ಫ್ರೆಂಚ್ ಅಂಗಳದಲ್ಲಿ ಗೆದ್ದುಕೊಂಡಿದ್ದಾರೆ. ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ಆಟಗಾರರಲ್ಲಿ ನಡಾಲ್ ಎರಡನೇ ಸ್ಥಾನದಲ್ಲಿದ್ದಾರೆ.
ನಡಾಲ್ ಅವರು 36 ಮಾಸ್ಟರ್ಸ್ ಪ್ರಶಸ್ತಿಗಳು ಮತ್ತು ಒಲಂಪಿಕ್ ಚಿನ್ನದ ಪದಕ ಸೇರಿದಂತೆ ಒಟ್ಟು 92 ಎಟಿಪಿ ಸಿಂಗಲ್ಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ನಡಾಲ್ ಅವರು ಸಿಂಗಲ್ಸ್ ನಲ್ಲಿ ವೃತ್ತಿಜೀವನದ ಗೋಲ್ಡನ್ ಸ್ಲಾಮ್ ಅನ್ನು ಪೂರ್ಣಗೊಳಿಸಿದ ಮೂವರು ಪುರುಷ ಆಟಗಾರರಲಲಿ ಒಬ್ಬರು ಎಂಬ ಅನನ್ಯ ದಾಖಲೆಯನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ENGvsPAK: ಟೆಸ್ಟ್ ಇತಿಹಾಸದಲ್ಲೇ ಮೊದಲು…. ದಾಖಲೆಯ ಜೊತೆಯಾಟವಾಡಿದ ರೂಟ್-ಬ್ರೂಕ್
Women’s T20 World Cup: ಸ್ಮತಿ, ಹರ್ಮನ್ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು
T20 Cricket: ಬಾಂಗ್ಲಾದೇಶಕ್ಕೆ 86 ರನ್ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ
Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್ ತಿರುಗೇಟು… ರೂಟ್, ಬ್ರೂಕ್ ಅಜೇಯ
Women’s T20 World Cup: ಲಂಕಾ ಎದುರಾಳಿ: ಭಾರತಕ್ಕೆ ಬೇಕಿದೆ “ರನ್ ರೇಟ್ ಗೆಲುವು’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ
Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್
Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್!
Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ
Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.