Chikkamagaluru: ಬಂದೂಕಿನಿಂದ ಗುಂಡು ಹಾರಿಸಿ ಕೊ*ಲೆ: ಆರೋಪಿಗೆ ಜೀವಾವಧಿ

ಸಾಲ ವಾಪಾಸ್ ಕೇಳಿದ್ದಕ್ಕೆ ಮರಗೆಲಸ ವೃತ್ತಿ ಮಾಡುತ್ತಿದ್ದವನ ಹ*ತ್ಯೆ ಕೇಸ್

Team Udayavani, Oct 10, 2024, 9:06 PM IST

1-deee

ಚಿಕ್ಕಮಗಳೂರು: ಸಾಲ ವಾಪಾಸ್ ಕೇಳಿದ್ದಕ್ಕೆ ಮರಗೆಲಸ ವೃತ್ತಿ ಮಾಡುತ್ತಿದ್ದ ನಾಗೇಶ್ ಆಚಾರಿ ಎಂಬುವರನ್ನು ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ಮೃತದೇಹವನ್ನು ಹೂತು ಹಾಕಿದ್ದ ಆರೋಪಿಗಳಿಗೆ ಘನ ನ್ಯಾಯಾಲಯವು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಪ್ರಕರಣದ ಒಂದನೇ ಆರೋಪಿ ಯಾದ ಕೃಷ್ಣೇಗೌಡನಿಗೆ ಜೀವಾವಧಿ ಶಿಕ್ಷೆ ಮತ್ತು ಐವತ್ತು ಸಾವಿರ ದಂಡ, ಎರಡನೇ ಆರೋಪಿ ಬಿ.ಸಿ.ಉದಯ ಈತನಿಗೆ ಮೂರು ವರ್ಷ ಕಠಿಣ ಶಿಕ್ಷೆ ಹಾಗೂ ಮೂರು ಸಾವಿರ ರೂ. ದಂಡ ವಿಧಿಸಿ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾ ಧೀಶರಾದ ಬಿ.ಸಿ. ಭಾನುಮತಿ ಅವರು ತೀರ್ಪು ನೀಡಿದ್ದಾರೆ.ದಂಡ ಪಾವತಿಸಲು ತಪ್ಪಿದ್ದಲ್ಲಿ ಹೆಚ್ಚುವರಿ ಶಿಕ್ಷೆಯನ್ನು ವಿಧಿಸಲಾಗಿದೆ.

ಘಟನೆ ವಿವರ:

ನವೆಂಬರ್ 25 2021ರಲ್ಲಿ ನಾಗೇಶ್ ಆಚಾರಿ ಮೂಡಿಗೆರೆ ತಾಲೂಕಿನ ಬಿದಿರುತಳ ಗ್ರಾಮದ ಬಾಳೂರು ಬಿ.ಎಂ.ಕೃಷ್ಣೇಗೌಡ ಅವರ ನೂತನ ಮನೆ ನಿರ್ಮಾಣದ ಮರಗೆಲಸಕ್ಕೆ ಮೂರು ದಿನಗಳ ತೆರಳುವುದಾಗಿ ಪತ್ನಿ ಸುಮಾ ಅವರಿಗೆ ತಿಳಿಸಿ ಹೋಗಿದ್ದರು.

ನ.28ರಂದು ಕೃಷ್ಣೇಗೌಡ, ಸುಮಾ ಅವರಿಗೆ ದೂರವಾಣಿ ಕರೆ ಮಾಡಿ ಮೀನು ಹಿಡಿಯಲು ಹಳ್ಳಕ್ಕೆ ಹೋಗಿ ಬರುವಾಗ ನಾಗೇಶ್ ಆಚಾರಿ ಕಾಣಿಯಾಗಿದ್ದಾರೆ. ಎಷ್ಟೇ ಹುಡುಕಿದರು ಪತ್ತೆಯಾಗಿಲ್ಲವೆಂದು ತಿಳಿಸಿದ್ದಾನೆ.

ಸುಮಾ ಅವರು ಬಾಳೂರು ಪೊಲೀಸ್ ಠಾಣೆಯಲ್ಲಿ ನಾಗೇಶ್ ಆಚಾರಿ ಕಾಣಿಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಹಾಗೂ ಸುಮಾ ಅವರ ಸಂಬಂಧಿಕರು ಹುಡುಕಲು ಆರಂಭಿಸಿದ್ದು ಬಾಳೂರು ಮೀಸಲು ಅರಣ್ಯದಲ್ಲಿ ಮೃತದೇಹ ಪತ್ತೆಯಾಗಿತ್ತು. ಕೊಲೆ ಪ್ರಕರಣ ಸಂಬಂಧ ಆರೋಪಿಗಳಾದ ಕೃಷ್ಣೇಗೌಡ ಹಾಗೂ ಬಿ.ಸಿ.ಉದಯ ಅವರನ್ನು ಬಂಧಿಸಿ ತನಿಖೆ ಕೈಗೊಂಡು ದೋಷರೋಪಣ ಪಟ್ಟಿಯನ್ನು ಅಂದಿನ ಪೊಲೀಸ್ ವೃತ್ತ ನಿರೀಕ್ಷಕರಾದ ಜೆ.ಸಿ. ಸೋಮಶೇಖರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಾದವನ್ನು ಆಲಿಸಿದ ನ್ಯಾಯಾ ಧೀಶರು ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದ್ದಾರೆ. ಸರ್ಕಾರ ದ ಪರವಾಗಿ ಸರ್ಕಾರಿ ಅಭಿಯೋಜಕ ಎಚ್.ಎಸ್. ಲೋಹಿತಾಶ್ವಚಾರ್ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ಭಾರೀ ಮಳೆಗೆ ಧರೆ ಕುಸಿತ… ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ

Charmadi: ಭಾರೀ ಮಳೆಗೆ ಧರೆ ಕುಸಿತ… ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

12-anandpura

Anandapura: ವರುಣಾರ್ಭಟ: ಕೊಚ್ಚಿ ಹೋದ ಸೇತುವೆ: ಸಂಪರ್ಕ ಕಳೆದುಕೊಂಡ ಗ್ರಾಮಸ್ಥರು

6-sathish

Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ

2-kottigehara

Kottigehara: ಮನೆ ಬಾಗಿಲಿಗೆ ಬಂದ ಕಾಡಾನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

1-ucchil

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

1-asdsad

Arctic Open ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ಗೆ ಸೋಲು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.