Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ


Team Udayavani, Oct 11, 2024, 2:23 AM IST

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ಹುಬ್ಬಳ್ಳಿ: ರಾಜ್ಯದ ವಿವಿಧೆಡೆ ಚಿತ್ತಾ ಮಳೆ ಅಬ್ಬರ ಜೋರಾಗಿದ್ದು ಭಾರೀ ಅವಾಂತರ ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈಜಾಡುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ.

ಮಲಪ್ರಭಾ ನದಿಯಿಂದ ಅಪಾರ ಪ್ರಮಾಣದ ನೀರು ಹೊರ ಬಿಡಲಾಗುತ್ತಿದ್ದು, ತೀರ ಪ್ರದೇಶದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ಅಫ‌ಜಲ್ಪುರ ತಾಲೂಕಿನ ಬನ್ನಟ್ಟಿ ಗ್ರಾಮದ ಬಳಿ ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದಾಗ ನೀರಿಗೆ ಇಳಿದಿದ್ದ ಭೂಮಿಕಾ ದೊಡಮನಿ ಬನ್ನಟ್ಟಿ (8), ಶ್ರಾವಣಿ ನಾಟೀಕಾರ ಚಿಂಚೋಳಿ (11) ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ಶ್ರಾವಣಿಯ ಮೃತದೇಹ ಪತ್ತೆಯಾಗಿದ್ದು, ಭೂಮಿಕಾಗೆ ಶೋಧ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿ, ಜಾಂಬೋಟಿ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ಜಲಾಶಯಕ್ಕೆ 5000 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರು ಹೊರ ಬಿಡಲಾಗುತ್ತಿದೆ.

ಚಿಕ್ಕಮಗಳೂರಿನಲ್ಲಿ ಮಳೆಗೆ ಈರುಳ್ಳಿ, ಟೊಮೆಟೋ ಬೆಳೆಗೆ ಹಾನಿಯಾಗಿದೆ. ಹಾವೇರಿ, ಗದಗ ಜಿಲ್ಲೆಯಲ್ಲಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರೈತರು ಬೆಳೆ ರಕ್ಷಿಸಿಕೊಳ್ಳಲು ಪರದಾಡುತ್ತಿದ್ದಾರೆ. ಯಲ್ಲಾಪುರ ತಾಲೂಕಿನ ಕಳಚೆಯಲ್ಲಿ ರಸ್ತೆ, ಸಣ್ಣ ಸೇತುವೆ ಕೊಚ್ಚಿ ಹೋಗಿದೆ. ಶಿವಮೊಗ್ಗ ಜಿಲ್ಲೆ ಆನಂದಪುರ ತಾಲೂಕಿನ ಕರಡಿಮನೆ ಸೇತುವೆ ಕೊಚ್ಚಿ ಹೋಗಿ ಸಂಚಾರ ಬಂದ್‌ ಆಗಿದೆ.

ಟಾಪ್ ನ್ಯೂಸ್

Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು

Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು

1-wewqewqe

Women’s T20 World Cup;ಇಂದು ಆಸ್ಟ್ರೇಲಿಯಕ್ಕೆ ಪಾಕ್‌ ಸವಾಲು

Shindhe

Maharashtra ಪರಿಶಿಷ್ಟ ಜಾತಿ ಆಯೋಗಕ್ಕೆ ಸಂವಿಧಾನಿಕ ಮಾನ್ಯತೆ ಅಧ್ಯಾದೇಶ

1-ktr

Telangana Minister ಸುರೇಖಾ ವಿರುದ್ಧ ಕೆಟಿಆರ್‌ ಮಾನಹಾನಿ ಕೇಸು

Ranking: ಜಾಗತಿಕ ವಿ.ವಿಗಳ ರ್‍ಯಾಂಕಿಂಗ್‌ ಪ್ರಕಟ: ದೇಶದಲ್ಲಿ ಬೆಂಗಳೂರಿನ ಐಐಎಸ್‌ಸಿ ಅಗ್ರ

Ranking: ಜಾಗತಿಕ ವಿ.ವಿಗಳ ರ್‍ಯಾಂಕಿಂಗ್‌ ಪ್ರಕಟ: ದೇಶದಲ್ಲಿ ಬೆಂಗಳೂರಿನ ಐಐಎಸ್‌ಸಿ ಅಗ್ರ

1-dog-a

Ratan Tata; ಶ*ವಪೆಟ್ಟಿಗೆ ಬಿಟ್ಟು ಕದಲದ ‘ಗೋವಾ’: ಒಡೆಯನ ಸಾವಿಗೆ ಶ್ವಾನದ ಕಂಬನಿ!

Exam 3

PU ಪ್ರಾಯೋಗಿಕ ಪರೀಕ್ಷೆ ದಿನಕ್ಕೊಂದು ಆದೇಶದ ಗೊಂದಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

Hubli: ಎಡೆಬಿಡದೆ ಸುರಿದ ಮಳೆ; ಕೆರೆಯಂತಾದ ರಸ್ತೆಗಳು

Hubli: ಎಡೆಬಿಡದೆ ಸುರಿದ ಮಳೆ; ಕೆರೆಯಂತಾದ ರಸ್ತೆಗಳು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Mysuru: ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ

Mysuru: ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ

arrest-lady

Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kalla

Sullia: ಸಂಪಾಜೆಯಲ್ಲಿ ಎರಡು ಮನೆಗಳಲ್ಲಿ ಕಳವು ಪ್ರಕರಣ

Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು

Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು

1-wewqewqe

Women’s T20 World Cup;ಇಂದು ಆಸ್ಟ್ರೇಲಿಯಕ್ಕೆ ಪಾಕ್‌ ಸವಾಲು

Shindhe

Maharashtra ಪರಿಶಿಷ್ಟ ಜಾತಿ ಆಯೋಗಕ್ಕೆ ಸಂವಿಧಾನಿಕ ಮಾನ್ಯತೆ ಅಧ್ಯಾದೇಶ

1-ktr

Telangana Minister ಸುರೇಖಾ ವಿರುದ್ಧ ಕೆಟಿಆರ್‌ ಮಾನಹಾನಿ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.