Udupi: ವನ್ಯಜೀವಿ, ಪರಿಸರ ಪ್ರೀತಿಗೆ ಕಾರಂತರೇ ಪ್ರೇರಣೆ
ಶಿವರಾಮ ಕಾರಂತ ಜಯಂತಿ ಕಾರ್ಯಕ್ರಮದಲ್ಲಿ ಡಾ| ಉಲ್ಲಾಸ್ ಕಾರಂತ್
Team Udayavani, Oct 11, 2024, 3:14 PM IST
ಉಡುಪಿ: ಕಲೆ, ಸಾಹಿತ್ಯದ ಜತೆ ವನ್ಯಜೀವಿ ಮತ್ತು ಪರಿಸರದ ಬಗ್ಗೆ ಅಪರಿಮಿತ ಕಾಳಜಿಯನ್ನು ಡಾ| ಶಿವರಾಮ ಕಾರಂತರು ಹೊಂದಿದ್ದು, ವನ್ಯಜೀವಿ ಕ್ಷೇತ್ರದಲ್ಲಿ ಕೆಲಸ ಮಾಡಲು ಅವರೇ ಮೊದಲ ಪ್ರೇರಣೆ ಎಂದು ವನ್ಯಜೀವಿ ಸಂರಕ್ಷಣೆ ವಿಜ್ಞಾನಿ ಡಾ| ಉಲ್ಲಾಸ್ ಕಾರಂತ್ ಅಭಿಪ್ರಾಯಪಟ್ಟರು.
ಕುಂಜಿಬೆಟ್ಟು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಮಾಹೆ, ಯಕ್ಷಗಾನ ಕೇಂದ್ರ ಇಂದ್ರಾಳಿ ವತಿಯಿಂದ ಗುರುವಾರ ಜರಗಿದ ಡಾ| ಕೆ. ಶಿವರಾಮ ಕಾರಂತರ 122ನೇ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಎಂಜಿನಿಯರಿಂಗ್ ಶಿಕ್ಷಣ ಪಡೆದಿದ್ದರೂ ತಂದೆಯ ಪ್ರೇರಣೆ ಮತ್ತು ಪರಿಸರದ ಜತೆಗಿನ ಒಡನಾಟವು ಪ್ರವಾಸ ನಿಸರ್ಗ ಪ್ರೇಮವನ್ನು ಬೆಳೆಸಿತು ಎಂದು ಹೇಳಿದರು.
ಮಾಹೆ ಸಹ ಕುಲಪತಿ ಡಾ| ಎಚ್ ಎಸ್. ಬಲ್ಲಾಳ್ ಮಾತನಾಡಿ, ಶಿವರಾಮ ಕಾರಂತರು ಯಕ್ಷಗಾನವನ್ನು ಬಹಳಷ್ಟು ಬೆಳೆಸಲು ಕಾರಣೀಭೂತರಾಗಿದ್ದವರು. ಅವರ ವ್ಯಕ್ತಿತ್ವ,ಜೀವಶೈಲಿ ಎಲ್ಲರಿಗೂ ಮಾದರಿ ಎಂದರು.
ಸಾಹಿತಿ ಎ.ಎಸ್.ಎನ್. ಹೆಬ್ಟಾರ್ ಮಾತನಾಡಿ, ಶಿವರಾಮ ಕಾರಂತರ, ಜ್ಞಾನ ವೃಕ್ಷದ ಕೆಳಗೆ ಹಲವರು ಶಿಕ್ಷಣ ಪಡೆದಿದ್ದಾರೆ. ಜನರಿಂದ ಸಾರ್ವತ್ರಿಕ ಗೌರವ ಪಡೆದ ವ್ಯಕ್ತಿತ್ವ, ನಡೆದಾಡುವ ದಂತಕಥೆಯಾಗಿದ್ದರು ಎಂದರು.
ಮಾಹೆ ಕುಲಪತಿ ಲೆ| ಜ| ಡಾ| ಎಂ. ಡಿ. ವೆಂಕಟೇಶ್ ಮಾತನಾಡಿ, ಸಾಹಿತ್ಯ ಲೋಕಕ್ಕೆ ಕಾರಂತರು ನೀಡಿದ ಕಾಣಿಕೆ ಅಮೂಲ್ಯ ಎಂದರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ ಉಪಸ್ಥಿತರಿದ್ದರು.
ಕೇಂದ್ರದ ವತಿಯಿಂದ ಉಲ್ಲಾಸ್ ಕಾರಂತರನ್ನು ಸಮ್ಮಾನಿಸಲಾಯಿತು. ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ| ಜಗದೀಶ್ ಶೆಟ್ಟಿ ವಂದಿಸಿ, ಪ್ರಾಧ್ಯಾಪಕ ರಾಘವೇಂದ್ರ ತುಂಗ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ
Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ
Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ
Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.