Bantwal: ಪಾಣೆಮಂಗಳೂರು ಶಾಲಾ ಶಾರದೋತ್ಸವಕ್ಕೆ ಶತಮಾನ

1923ರಲ್ಲಿ ಮಾರಿ ಬೊಳ್ಳದ ಬೆನ್ನಿಗೆ ಉದಯಿಸಿದ ಶಾಲೆ; 1980ರಲ್ಲೇ ಟ್ಯಾಬ್ಲೋ ಸಹಿತ ಶೋಭಾಯಾತ್ರೆ ನಡೆಯುತ್ತಿತ್ತು!

Team Udayavani, Oct 12, 2024, 7:00 AM IST

10(2)

ಶತಮಾನೋತ್ಸವದ ಶಾರದೆ ವಿಗ್ರಹದ ಅಲಂಕಾರ.

ಬಂಟ್ವಾಳ: ಜೀವನದಿ ನೇತ್ರಾವತಿಯಲ್ಲಿ ಕಂಡುಬಂದ 1923ರ ಮಾರಿ ಬೊಳ್ಳದ ಬೆನ್ನಿಗೆ ಉದಯಗೊಂಡ ಶಾಲೆಯೊಂದರ ಜತೆ ಜತೆಗೆ ಆರಂಭಗೊಂಡ ಶ್ರೀ ಶಾರದ ಪೂಜಾ ಮಹೋತ್ಸವವು ಪ್ರಸ್ತುತ ಶತಮಾನೋತ್ಸವ ಸಂಭ್ರಮದಲ್ಲಿದೆ. 1923-24ರ ಅವಧಿಯಲ್ಲಿ ಮಾರಿ ಬೊಳ್ಳ, ಶಾಲೆ ಮತ್ತು ಉತ್ಸವ ಆರಂಭದ ಮೂರು ಘಟನೆಗಳು ಕೂಡ ಒಟ್ಟೊಟ್ಟಿಗೆ ಶತಮಾನವನ್ನು ಕಾಣುತ್ತಿದೆ.

ಪಾಣೆಮಂಗಳೂರು ಶ್ರೀ ವಿಠಲ ಸ್ವಾಮಿ ಅನುದಾನಿತ ಶಾಲೆಯಲ್ಲಿ ನಡೆಯುವ ಈ ಉತ್ಸವವು ಪ್ರಾರಂಭದ 2-3 ವರ್ಷಗಳಲ್ಲಿ ಕೇವಲ ದೇವರ ಪೋಟೆಗೆ ಪೂಜೆಯ ಮೂಲಕ ನಡೆದಿದ್ದು, 4ನೇ ವರ್ಷದಿಂದ ದಿ| ಪಿ.ವಾಸುದೇವ ಭಟ್‌ ಅವರಿಂದ ವಿಗ್ರಹ ರೂಪಕ್ಕೆ ಪರಿವರ್ತನೆಯಾಯಿತು.

ಮಾರಿ ಬೊಳ್ಳಕ್ಕೆ ಕೊಚ್ಚಿ ಹೋದ ಸಂಸ್ಥೆ
ಬಾಸೆಲ್‌ ಮಿಶನ್‌ ಸಂಸ್ಥೆಯವರು ಪಾಣೆಮಂಗಳೂರಿನಲ್ಲಿ ಸ್ಥಳೀಯ ಮಕ್ಕಳ ವಿದ್ಯಾಭ್ಯಾಸಕ್ಕೆ ಚಿಕ್ಕ ಶಾಲೆಯನ್ನು ತೆರೆದಿದ್ದರು. 1923ರಲ್ಲಿ ಬಂದಭೀಕರ ಪ್ರವಾಹದಿಂದ ಪಾಣೆಮಂಗಳೂರೇ ಮುಳುಗಿದ್ದು. ಆಗ ಶಾಲೆಯೂ ನೆಲಸಮವಾಗಿತ್ತು. ಬಳಿಕ ಊರು ಸಹಜ ಸ್ಥಿತಿಗೆ ಬಂದರೂ ಮಕ್ಕಳಿಗೆ ಶಿಕ್ಷಣ ಇಲ್ಲವಾಯಿತು. ಆಗ ಊರಿನ ಮುಖಂಡರೆಲ್ಲ ಸೇರಿ ನಂದಾವರ ವಾಸುದೇವರಾಯರ ಸಹಕಾರದಿಂದ ಊರ ಮಧ್ಯಭಾಗದಲ್ಲಿ ಶ್ರೀ ವೀರ ವಿಠ್ಠಲ ಸ್ವಾಮಿ ಕಿರಿಯ ಪ್ರಾಥಮಿಕ ಶಾಲೆಯನ್ನು 1924ರ ಸೆ. 1ರಂದು ಪ್ರಾರಂಭಿಸಿದ್ದರು. ಪ್ರಾರಂಭದಲ್ಲಿ 55 ವಿದ್ಯಾರ್ಥಿಗಳಿಂದ ಆರಂಭಗೊಂಡ ಶಾಲೆಗೆ ರಾಜಾಶ್ರಯವೂ ದೊರೆತು ಮರ್ದೋಳಿಯ ರಾಜಮನೆತನದ ರಾಮಕೃಷ್ಣ ರಾವ್‌ ಸ್ಥಳದಾನವನ್ನೂ ಮಾಡಿದ್ದರು.

ದಶಕಗಳ ಹಿಂದಿನ ಶಾರದೆಯ ಕಪ್ಪು-ಬಿಳುಪಿನ ಚಿತ್ರ.
ದಶಕಗಳ ಹಿಂದಿನ ಶೋಭಾಯಾತ್ರೆಯ ಟ್ಯಾಬ್ಲೋ.

ಟ್ಯಾಬ್ಲೋ ನೋಡಲು ಭಾರೀ ಜನ
ಶಾಲೆ ಆರಂಭಗೊಂಡ ಮರುವರ್ಷ 1925ರಲ್ಲಿ ಶ್ರೀ ಶಾರದಾ ಪೂಜೆ ಶುರುವಾಗಿದೆ. 1928ರಲ್ಲಿ ವಿಗ್ರಹಕ್ಕೆ ಪೂಜೆ ಆರಂಭಗೊಂಡಿತು. ಭಜನೆ, ನಾಟಕ, ನೃತ್ಯ ಇತ್ಯಾದಿ ಮನೋರಂಜನಾ ಕಾರ್ಯಕ್ರಮಗಳೂ ಇದ್ದವು. ಶಾಲೆಗೆ ಕಳೆದ ವರ್ಷ 100 ತುಂಬಿದ್ದರೆ, ಉತ್ಸವಕ್ಕೆ ಈ ವರ್ಷ ನೂರು ತುಂಬಿದೆ. ಉತ್ಸವದಲ್ಲಿ 1980-85ರ ಕಾಲ ಘಟ್ಟದಲ್ಲಿ ಮೆಲ್ಕಾರಿನ ಉದಯ ಯುವಕ ಮಂಡಲದಿಂದ ಟ್ಯಾಬ್ಲೋಗಳು ನಡೆಯುತ್ತಿದ್ದು, ಅಂದಿನ ಕಾಲದಲ್ಲಿ ಅದನ್ನು ನೋಡುವುದಕ್ಕಾಗಿಯೇ ಸಹಸ್ರಾರು ಮಂದಿ ಸೇರುತ್ತಿದ್ದರು.

1928ರ ಬಳಿಕ ಮಣ್ಣಿನ ಮೂರ್ತಿ
ಶಾಲೆಯ ಶ್ರೀ ಶಾರದಾ ಪೂಜಾ ಮಹೋತ್ಸವದಲ್ಲಿ ಪ್ರಾರಂಭದ ಮೂರು ವರ್ಷ ಫೋಟೊಗೆ ಪೂಜೆ ನಡೆದಿದ್ದು, 1928ರ ಬಳಿಕ ಸಣ್ಣ ಮಣ್ಣಿನ ಮೂರ್ತಿಯ ಮೂಲಕ ಪೂಜೆ ಆರಂಭಗೊಂಡಿತ್ತು. ಬಳಿಕ ಕಳೆದ ಒಂದಷ್ಟು ವರ್ಷಗಳಿಂದ ದೊಡ್ಡ ವಿಗ್ರಹವನ್ನಿಟ್ಟು ಉತ್ಸವ ನಡೆಯುತ್ತಿದೆ.
ವಿನೋದ್‌ ಎನ್‌. ಮುಖ್ಯಶಿಕ್ಷಕರು, ಶ್ರೀ ವಿಠಲ ಸ್ವಾಮಿ ಶಾಲೆ

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

6-mysore-story

Mysore Dasara: ನಮ್ಮ ಒಡೆಯರ್‌ ಊರು…

IPL 2025: Will Pant leave Delhi Capitals?; Rishabh’s tweet sparked curiosity

IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತೊರೆಯುತ್ತಾರಾ ಪಂತ್;‌ ಕುತೂಹಲ ಕೆರಳಿಸಿದ ರಿಷಭ್ ಟ್ವೀಟ್‌

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Gadag: ಕುಂಭ ಹೊತ್ತು 3 ಕಿ.ಮೀ. ಪಾದಯಾತ್ರೆ ನಡೆಸಿದ ರಂಭಾಪುರಿ ಜಗದ್ಗುರುಗಳು

Gadag: ಕುಂಭ ಹೊತ್ತು 3 ಕಿ.ಮೀ. ಪಾದಯಾತ್ರೆ ನಡೆಸಿದ ರಂಭಾಪುರಿ ಜಗದ್ಗುರುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Subramanya: ಮನೆ ಮನೆಗೆ ಕೇರ್ಪಡ ದೇವಳದ ಹುಲಿ

11

Kadaba: ಮನೆಗಳಲ್ಲಿ ಮಕ್ಕಳಿಂದಲೇ ಶಾರದಾ ಪೂಜೆ

sullia

Sullia: ಬಣ್ಣದ ಮಾಲಿಂಗರ ಮಹಿರಾವಣನ ಯಕ್ಷ ಪ್ರತಿಮೆ ಅನಾವರಣ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಖಾತೆಗೆ ಸಂಬಳ ಜಮೆ

Puttur: ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಖಾತೆಗೆ ಸಂಬಳ ಜಮೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-uv-fusion

Women: ಹೆಣ್ಣು ಹೊರೆಯಲ್ಲ ಶಕ್ತಿ

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

6-mysore-story

Mysore Dasara: ನಮ್ಮ ಒಡೆಯರ್‌ ಊರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.