Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ
ನಾಳೆ ಮಧ್ಯಾಹ್ನ 1.41ರಿಂದ 2.10 ವರೆಗೆ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ
Team Udayavani, Oct 11, 2024, 4:32 PM IST
ಮೈಸೂರು: ಜಗದ್ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಅಂತಿಮ ಘಟ್ಟವಾದ ವಿಜಯದಶಮಿಯಂದು ಲಕ್ಷಾಂತರ ಮಂದಿಯ ಹರ್ಷೋದ್ಘಾರದೊಂದಿಗೆ ವಿಜೃಂಭಣೆಯಿಂದ ಜರುಗುವ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.
ಅ.12ರಂದು ಶನಿವಾರ ಮಧ್ಯಾಹ್ನ 1.41ರಿಂದ 2.10 ವರಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವರು. ಬಳಿಕ ಗಜಪಡೆಯ ಧನಂಜಯ ನಿಶಾನೆ ಆನೆಯಾಗಿ ದಸರಾ ಮೆರವಣಿಗೆಯನ್ನು ಮುನ್ನಡೆಸಲಿದ್ದಾನೆ.
ನಂತರ ಸಂಜೆ 4ರಿಂದ 4.30 ಗಂಟೆವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ವಿಜಯ ದಶಮಿ (ಜಂಬೂಸವಾರಿ) ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೇರಿ ಗಣ್ಯರು ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.
ಕಳೆದ 9 ದಿನಗಳಿಂದ ವಿವಿಧ ಕಾರ್ಯಕ್ರಮಗಳ ಮೂಲಕ ದೇಶ ವಿದೇಶದ ಲಕ್ಷಾಂತರ ಮಂದಿಯನ್ನು ಆಕರ್ಷಿಸಿದ್ದ ನಾಡಹಬ್ಬಕ್ಕೆ ಜಂಬೂಸವಾರಿ ಮತ್ತು ಪಂಜಿನ ಕವಾಯತಿನೊಂದಿಗೆ ಶನಿವಾರ ವಿಧ್ಯುಕ್ತ ತೆರೆ ಬೀಳಲಿದೆ. ಜಂಬೂ ಸವಾರಿ ವೀಕ್ಷಿಸಲು ದೇಶ ವಿದೇಶದ ಲಕ್ಷಾಂತರ ಪ್ರವಾಸಿಗರು ಆಗಮಿಸುವುದರಿಂದ ಅರಮನೆ ಆವರಣ ಸೇರಿ ಜಂಬೂ ಸವಾರಿ ಸಾಗುವ ರಾಜಮಾರ್ಗದಲ್ಲಿ ಆಸನದ ವ್ಯವಸ್ಥೆ ಸೇರಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
5ನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು 2020, 21ರಲ್ಲಿ ಕೊರೊನಾ ಕಾರಣದಿಂದಾಗಿ ಅರಮನೆಗೆ ಸೀಮಿತವಾಗಿದ್ದ ಜಂಬೂ ಸವಾರಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಅರಮನೆ ಆವರಣದಲ್ಲಷ್ಟೇ ಅಂಬಾರಿ ಹೊತ್ತಿದ್ದ. 2022, 23ರಲ್ಲಿ ಬನ್ನಿಮಂಟಪದವರೆಗೆ ಚಿನ್ನದ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ ಅಭಿಮನ್ಯು ಸತತ 5ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊರಲು ಸಜ್ಜಾಗಿದ್ದಾನೆ. ಅಭಿಮನ್ಯು ಜತೆಗೆ 8 ಆನೆಗಳು, ಅಶ್ವರೋಹಿಪಡೆ ಮೆರವಣಿಗೆ ಯಲ್ಲಿ ಪಾಲ್ಗೊಳ್ಳಲಿವೆ. ಇದರ ಜತೆಗೆ ರಾಜ್ಯದ 31 ಜಿಲ್ಲಾ ಪಂಚಾಯಿತಿಗಳ, ರಾಜ್ಯಮಟ್ಟದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು, ಸ್ತಬ್ಧಚಿತ್ರ ಉಪಸಮಿತಿ ಸೇರಿ ಒಟ್ಟು 51 ಸ್ತಬ್ಧಚಿತ್ರಗಳು ಸೇರಿ 100ಕ್ಕೂ ಹೆಚ್ಚು ಜಾನಪದ ತಂಡಗಳು ಭಾಗವಹಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ
Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ
Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು
Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು
UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ
Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.