Wandse: ಬಗ್ವಾಡಿಯ ಮನೆ ಮನೆಗೂ ಶ್ರೀದೇವಿ

9 ದಿನಗಳಲ್ಲಿ ಎಲ್ಲ 180 ಮನೆಗಳಿಗೆ ಮಹಿಷಾಸುರಮರ್ದಿನಿ ದರ್ಶನ; ಧಾರ್ಮಿಕ ಭಾವ ಉದ್ದೀಪನಕ್ಕೆ ದೇಗುಲದಿಂದ ವಿನೂತನ ಪ್ರಯತ್ನ

Team Udayavani, Oct 12, 2024, 1:30 PM IST

15

ವಂಡ್ಸೆ: ಶರನ್ನವರಾತ್ರಿಯ ಸಂದರ್ಭದಲ್ಲಿ ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ವಿನೂತನ ಕಾರ್ಯಕ್ರಮವೊಂದಕ್ಕೆ ಚಾಲನೆ ನೀಡಿದೆ. ಶ್ರೀ ದೇವಿ ಮಹಿಷಾಸುರಮರ್ದಿನಿ ದೇವಿ ಬಗ್ವಾಡಿ ಗ್ರಾಮದ ಪ್ರತಿ ಮನೆ ಮನೆಗೆ ಹೋಗಿ ದರ್ಶನ ನೀಡುವ ಅಪರೂಪದ ಕಾರ್ಯಕ್ರಮ ನಡೆಯುತ್ತಿದ್ದು, ಇದೀಗ ಕೊನೆಯ ಹಂತಕ್ಕೆ ತಲುಪಿದೆ. ನವರಾತ್ರಿಯ ಒಂಬತ್ತು ದಿನಗಳಲ್ಲಿ ಗ್ರಾಮದ ಎಲ್ಲ 180 ಮನೆಗಳಿಗೆ ದೇವಿಯ ಭೇಟಿ ನಡೆಯಲಿದೆ.

ಮಧ್ಯಾಹ್ನದ ಮಹಾ ಪೂಜೆಯ ಬಳಿಕ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ದೇವಿಯ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿರಿಸಿ ತಲೆಯ ಮೇಲೆ ಹೊತ್ತು ಕಾಲ್ನಡಿಗೆಯಲ್ಲಿ ಗ್ರಾಮದ ಮನೆಮನೆಗೆ ತೆರಳಲಾಗುತ್ತದೆ. ಇದರೊಂದಿಗೆ ಭಜನಾ ತಂಡ, ಅರ್ಚಕರು, ಪ್ರತಿನಿಧಿಗಳು ಇರುತ್ತಾರೆ.

ಮನೆಮನೆಗೆ ಆಗಮಿಸುವ ದೇವಿಯನ್ನು ಭಕ್ತಾದಿಗಳು ಭಕ್ತಿ ಗೌರವದಿಂದ ಸ್ವಾಗತಿಸಿಕೊಳ್ಳುತ್ತಾರೆ. ಮನೆಯ ಒಳಗೆ ದೇವಿಯನ್ನು ಇರಿಸಿ ಪೂಜಿಸಲಾಗುತ್ತದೆ. ಈ ಸಂದರ್ಭದಲ್ಲಿ ಭಜನಾ ತಂಡದಿಂದ ಮನೆಯಲ್ಲಿ ಭಜನೆ ನೆಡೆಯುತ್ತದೆ. ಮನೆಯಲ್ಲಿ ಪೂಜೆ ಸಲ್ಲಿಕೆಯ ಬಳಿಕ ಕ್ಷೇತ್ರದ ಗಂಧ ಪ್ರಸಾದವನ್ನು ನೀಡಿ ಮತ್ತೂಂದು ಮನೆಗೆ ತಂಡ ತೆರಳುತ್ತದೆ. ಈ ಹೀಗೆ ಒಂಭತ್ತು ದಿನಗಳ ಕಾಲ ನಡೆಯುತ್ತದೆ. ಶರನ್ನವರಾತ್ರಿಯ ಸಂದರ್ಭ ಶ್ರೀ ದೇವಿಯೇ ಮನೆಗೆ ಬರುವ ವಿನೂತನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ಮನೆ ಮನೆಯಲ್ಲಿ ಆರಾಧನೆ
ಈ ಕಾರ್ಯಕ್ರಮದ ರೂಪುರೇಷೆ, ಪರಿಕಲ್ಪನೆಯ ಬಗ್ಗೆ ಆಡಳಿತ ಮಂಡಳಿ ಅಧ್ಯಕ್ಷರಾದ ಉದಯ ಕುಮಾರ್‌ ಹಟ್ಟಿಯಂಗಡಿ ವಿವರಿಸುತ್ತಾ, ಬಗ್ವಾಡಿಯಲ್ಲಿ ಹಲವಾರು ಹೊಸ ಹೊಸ ಕಾರ್ಯಕ್ರಮಗಳು, ಪ್ರಾರಂಭಗೊಂಡು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ನವರಾತ್ರಿಯ ಸಮಯದಲ್ಲಿ ಶಕ್ತಿಸ್ವರೂಪಿಣಿ ಮಹಿಷಾಮರ್ದಿನಿ ದೇವಿ ಬಗ್ವಾಡಿ ಗ್ರಾಮದ ಮನೆ ಮನ ಅಲಂಕರಿಸಬೇಕು ಎನ್ನುವ ಪರಿಕಲ್ಪನೆಯಲ್ಲಿ ಬಗ್ವಾಡಿ ಗ್ರಾಮದ ಪ್ರತಿಮನೆಗೆ ಭಜನೆ ತಂಡದೊಂದಿಗೆ ಪೂಜಿಸಲ್ಪಟ್ಟ ಮಹಿಷಾಸುರಮರ್ದಿನಿ ದೇವಿಯೊಂದಿಗೆ ತೆರಳಿ ಪ್ರತಿಮನೆಯಲ್ಲಿ ಆರಾಧಿ ಸುವ ಧಾರ್ಮಿಕ ಪ್ರಕ್ರಿಯೆ ಇದಾಗಿದೆ ಎಂದು ಹೇಳಿದರು.

ಇಡೀ ಬಗ್ವಾಡಿ ಗ್ರಾಮದ ಎಲ್ಲ ಮನೆಗಳನ್ನು ತಲುಪುವ ನಿಟ್ಟಿನಲ್ಲಿ ಸಭೆಗಳನ್ನು ನಡೆಸಿ ಯೋಜನೆ ಮಾಡಿದವು. 9 ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡದಲ್ಲಿ ಸ್ಥಳೀಯ ಪ್ರತಿನಿ ಧಿಗಳು, ಆಡಳಿತ ಸಮಿತಿ ಪ್ರತಿನಿ ಧಿಗಳು, ಭಜನಾ ತಂಡದವರು ಇರುತ್ತಾರೆ. ಪ್ರತಿದಿನ 15-20 ಮನೆ ತಲುಪುವ ಗುರಿ ಹೊಂದಲಾಗಿದೆ ಎಂದರು.

ಶಕ್ತಿ ಸಂಚಯನ, ಭಕ್ತಿ ಸಂಚಯನ
ದೇವರೇ ಮನೆಗೆ ಭೇಟಿ ನೀಡುವುದರಿಂದ ಶಕ್ತಿ ಸಂಚಯವಾಗುತ್ತದೆ. ಧನಾತ್ಮಕವಾದ ಲವಲವಿಕೆ ಮೂಡುತ್ತದೆ. ಮನೆಯಲ್ಲಿ ತಾಳ, ಘಂಟೆ, ಜಾಗಟೆ ನಾದದೊಂದಿಗೆ ಭಜನೆಯಿಂದ ಋಣಾತ್ಮಕ ಶಕ್ತಿಗಳು ನಾಶವಾಗುತ್ತವೆ ಎನ್ನುವುದು ಯೋಜನೆಯ ಮೂಲ ಚಿಂತನೆ. ಕಾರ್ಯಕ್ರಮ ಆರಂಭದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಇದರ ಅಧ್ಯಕ್ಷರಾದ ರಾಜು ಮೆಂಡನ್‌ ವಂಡ್ಸೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಣೇಶ ಮೆಂಡನ್‌ ಮುಂಬಯಿ, ಎನ್‌.ಡಿ ಚಂದನ್‌, ಕೃಷ್ಣಮೂರ್ತಿ ನಾಯ್ಕ ಮುಂಬಯಿ, ರಾಘವೇಂದ್ರ ಚಂದನ್‌ ಮುಂಬಯಿ, ಎಂ.ಎಂ.ಸುವರ್ಣ, ಎಂ.ಆರ್‌ ನಾಯ್ಕ, ಸಂತೋಷ್‌ ಶೆಟ್ಟಿ ಬಗ್ವಾಡಿ, ನಿವೃತ್ತ ಮುಖ್ಯ ಶಿಕ್ಷಕ ರಾಜೀವ ಶೆಟ್ಟಿ ಬಗ್ವಾಡಿ, ಆನಂದ ಕೆ.ನಾಯ್ಕ, ನಾಗೇಶ ಪಿ.ಕಾಂಚನ್‌, ದಿನೇಶ ಕಾಂಚನ್‌, ಪ್ರಭಾಕರ ಸೇನಾಪುರ, ಶ್ಯಾಮಲ ಜಿ.ಚಂದನ್‌, ರಾಜೀವ ಸೌರಭ, ಶೋಭಾ ಪುತ್ರನ್‌, ವಾಸು ಜಿ.ನಾಯ್ಕ, ಕ್ಷೇತ್ರದ ಪ್ರಧಾನ ಅರ್ಚಕರು ಉಪಸ್ಥಿತರಿದ್ದರು. ಶ್ರೀ ಮಹಿಷಾಸುರಮರ್ದಿನಿ ಭಜನಾ ತಂಡದ ಸದಸ್ಯರು, ಶ್ರೀ ಮಾತಾ ಭಜನಾ ಮಂಡಳಿ ಹಕ್ರೆಮಠ ಕೊಡೇರಿ ಇಲ್ಲಿನ ಭಜನಾ ತಂಡದವರು ಭಾಗವಹಿಸಿದ್ದರು.

-ಡಾ| ಸುಧಾಕರ ನಂಬಿಯಾರ್

ಟಾಪ್ ನ್ಯೂಸ್

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ

1

2025ಕ್ಕೆ ಬಾಲಿವುಡ್‌ಗೆ ಸೀಕ್ವೆಲ್‌ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

2

Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ

Hubli: BK Hariprasad licked the feet of fake Gandhis: Pralhad Joshi

Hubli: ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು

Life: ಇತರರನ್ನು ಮೆಚ್ಚಿಸುವ ವ್ಯರ್ಥ ಪ್ರಯತ್ನವೇಕೆ?

Life: ಇತರರನ್ನು ಮೆಚ್ಚಿಸುವ ವ್ಯರ್ಥ ಪ್ರಯತ್ನವೇಕೆ?

12-crime

Hagaribommanahalli: ಅನೈತಿಕ ಸಂಬಂಧ: ಯುವಕನ ಬರ್ಬರ ಕೊಲೆ; ಆರೋಪಿ ಪೊಲೀಸರಿಗೆ ಶರಣು

Nature: ಸಮತೋಲಿತ ಅಭಿವೃದ್ಧಿಯೇ ಪ್ರಕೃತಿ ಉಳಿವಿಗೆ ಮುನ್ನುಡಿ

Nature: ಸಮತೋಲಿತ ಅಭಿವೃದ್ಧಿಯೇ ಪ್ರಕೃತಿ ಉಳಿವಿಗೆ ಮುನ್ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Udupi;ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ ʼನಿʼ-ಶತಾಭಿವಂದನಂ

9-karkala

KBC: ಕೆಬಿಸಿಯಲ್ಲಿ 12.5 ಲ.ರೂ.ಗೆದ್ದ ಕಾರ್ಕಳ ಮೂಲದ ಡಾ| ಶ್ರೀಶ್‌ ಶೆಟ್ಟಿ

18

Kaup: ದಿವ್ಯಾಂಗರ ಸಹಾಯಕ್ಕೆ ಟೀಮ್‌ ಮಾರುತಿ ಕುಣಿತ

16(1)

Gangolli: ಪುಟ್ಟ ಊರಿನಲ್ಲಿ ಆರು ತಂಡಗಳಿಂದ ಪ್ರದರ್ಶನ

8-ucchila

Udupi Uchila Dasara 2024: ವೈಭವದ ಶೋಭಾಯಾತ್ರೆಗೆ ಅಂತಿಮ ಸಿದ್ಧತೆ 

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ

1-aaa

Udupi;ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ ʼನಿʼ-ಶತಾಭಿವಂದನಂ

1

2025ಕ್ಕೆ ಬಾಲಿವುಡ್‌ಗೆ ಸೀಕ್ವೆಲ್‌ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

2

Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ

Hubli: BK Hariprasad licked the feet of fake Gandhis: Pralhad Joshi

Hubli: ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.