PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?
ಸದ್ಯ ಕೆನಡಾದಲ್ಲಿ ಭಾರತೀಯರ ಸುರಕ್ಷತೆ ಪ್ರಮುಖ ವಿಚಾರ...
Team Udayavani, Oct 11, 2024, 6:06 PM IST
ಲಾವೋಸ್ : ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಶುಕ್ರವಾರ(ಅ11) ಲಾವೋಸ್ನಲ್ಲಿ ನಡೆದ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ “ಸಂಕ್ಷಿಪ್ತ ವಿಚಾರ ವಿನಿಮಯ ” ಮಾಡಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
ಕಳೆದ ವರ್ಷ ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ನಂತರ ಭಾರತ ಮತ್ತು ಕೆನಡಾ ಸಂಬಂಧ ಹಳಸಿತ್ತು. ಭಾರತವೇ ನಿಜ್ಜರ್ ಹತ್ಯೆ ಮಾಡಿಸಿದೆ ಎಂಬ ಹಿಂದಿನ ಆರೋಪಗಳ ಕುರಿತು ಪ್ರಸ್ತಾಪಿಸಿದಾಗ, ಟ್ರುಡೊ ”ಕೆನಡಿಯನ್ನರ ಸುರಕ್ಷತೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುವ” ಕುರಿತು ಪ್ರಧಾನಿ ಮೋದಿಯವರೊಂದಿಗೆ ಮಾತನಾಡಿರುವುದಾಗಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಜಸ್ಟಿನ್ ಟ್ರುಡೊ “ನಾವು ಮಾಡಬೇಕಾದ ಕೆಲಸವಿದೆ ಎಂದು ನಾನು ಒತ್ತಿಹೇಳಿದೆ. ನಾವು ಏನು ಮಾತನಾಡಿದ್ದೇವೆ ಎಂಬುದರ ಕುರಿತು ನಾನು ವಿವರ ನೀಡಲು ಹೋಗುವುದಿಲ್ಲ, ಕೆನಡಿಯನ್ನರ ಸುರಕ್ಷತೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುವುದು ಕೆನಡಾದ ಸರಕಾರದ ಮೂಲಭೂತ ಜವಾಬ್ದಾರಿಗಳಲ್ಲಿ ಒಂದಾಗಿದೆ ಎಂದು ನಾನು ಹಲವು ಬಾರಿ ಹೇಳಿದ್ದೇನೆ ಮತ್ತು ಅದನ್ನೇ ನಾನು ಮಾಡುತ್ತೇನೆ ಎನ್ನುವುದು ಗಮನದಲ್ಲಿರಲಿ ”ಎಂದು ಹೇಳಿದ್ದಾರೆ.
ಕೆನಡಾದ ವಲಸೆ ನೀತಿಯಿಂದಾಗಿ ಭಾರತೀಯ ವಿದ್ಯಾರ್ಥಿಗಳು ಗಡಿಪಾರಿನ ಭೀತಿಯನ್ನು ಎದುರಿಸುತ್ತಿದ್ದಾರೆ. ಇನ್ನೊಂದೆಡೆ ಕೆನಡಾದ ಬ್ರ್ಯಾಂಪ್ಟನ್ನ ರೆಸ್ಟೋರೆಂಟ್ ಒಂದರಲ್ಲಿ ತಿನಿಸುಗಳನ್ನು ಬಡಿಸುವ ವೇಟರ್ ಮತ್ತು ಸರ್ವರ್ ಕೆಲಸಕ್ಕಾಗಿ ಸಾವಿರಾರು ಭಾರತೀಯ ವಿದ್ಯಾರ್ಥಿ ಗಳು ಸಾಲು ನಿಂತಿದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗಿ ಕಳವಳಕ್ಕೆ ಕಾರಣವಾಗಿದೆ.
ಪ್ರಧಾನಿ ಮೋದಿ ಅವರು ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಗಾಗಿ ಲಾವೋಸ್ಗೆ ಎರಡು ದಿನಗಳ ಪ್ರವಾಸದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!
Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್
Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್
Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ
Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tamil Nadu; ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ
Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ
Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!
Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು
UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.