ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ
ಸ್ವ ಪಕ್ಷದ ಸರ್ಕಾರದ ವಿರುದ್ಧವೇ ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ
Team Udayavani, Oct 12, 2024, 12:48 PM IST
ಬೆಳಗಾವಿ: ರೈತರ ಪರ ಯಾವುದೇ ಯೋಜನೆಗಳು ಬರುತ್ತಿಲ್ಲ. ರೈತರು ಬದುಕು ದುಸ್ತರವಾಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಹರಿಹಾಯ್ದಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ತಾವಂಶಿ ಗ್ರಾಮದಲ್ಲಿ ಶನಿವಾರ (ಅ.12) ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ವಿಧಾನಸೌಧದಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದೆ. ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ಳುತ್ತೀಯಾ, ನಿನ್ನ ಕೆಲಸ ಮಾಡುತ್ತೇವೆಂದು ಹೇಳಿ ಅನುದಾನ ಬಿಡುಗಡೆ ಮಾಡದ ಮಂತ್ರಿಗಳಿದ್ದಾರೆ ಎಂದು ಅನುದಾನ ನೀಡದ ಸ್ವಪಕ್ಷೀಯ ಸಚಿವರ ವಿರುದ್ಧ ರಾಜು ಕಾಗೆ ಗರಂ ಆದರು.
ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೆ ನೀವೇನು ತಿನ್ನುತ್ತೀರೀ? ನಿಮ್ಮ ಬಳಿ ರೊಕ್ಕ, ಬಂಗಾರ ಬೆಳ್ಳಿ ಸಾಕಷ್ಟು ಇರಬಹುದು, ಆದರೆ ಅದನ್ನು ತಿನ್ನೋಕಾಗುತ್ತಾ? ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ. ರೈತರು ಬದುಕಿದರೆ ಮಾತ್ರ ಈ ದೇಶ ಪ್ರಗತಿ ಹೊಂದಲು ಸಾಧ್ಯವಿದೆ. ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ಚೈನಿ (ಮೋಜು, ಮಸ್ತಿ) ಮಾಡುತ್ತಿಲ್ಲ. ರೈತರ ಕಷ್ಟ ಸುಖಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡ್ತಿದ್ದೇನೆ. ಆದರೆ ಸರ್ಕಾರದವರು ನಮಗೆ ಸ್ಪಂದನೆ ಮಾಡುತ್ತಿಲ್ಲ ಎಂದು ಸಿದ್ದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಕಾಗೆ ಬೇಕಾದರೆ ನಾನು ನಾಳೆ ಹೋಗಿ ರಾಜೀನಾಮೆ ಕೊಡುತ್ತೇನೆ, ಏತಕ್ಕಾಗಿ ನಾವು ಎಂಎಲ್ಎ ಗಳಾಗಿರಬೇಕು, ಯಾತಕ್ಕಾಗಿ ನಾವು ಅಧಿಕಾರದಲ್ಲಿಬೇಕು. ಆಡಳಿತ ಪಕ್ಷದ ಒಬ್ಬ ಶಾಸಕನಾಗಿ ಅಸಹಾಯಕತೆ ಬಗ್ಗೆ ಹೇಳುತ್ತಿದ್ದೀನಿ. ಎಷ್ಟರಮಟ್ಟಿಗೆ ಈ ವ್ಯವಸ್ಥೆಯಲ್ಲಿ ಬದುಕಿದ್ದೇವೆ ಎಂದು ಅರ್ಥ ಮಾಡಿಕೊಳ್ಳಿ. ಕಾಂಗ್ರೆಸ್ ಸರ್ಕಾರದ ನಡೆಯಿಂದಾಗಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ ಎಂದರು.
ಹೀಗಾಗಿ ಮುಂದಿನ ಸಲ ನನಗೆ ಎಂಎಲ್ಎ ಆಗುವುದು ಬೇಕಾಗಿಲ್ಲ ಎಂದು ಕ್ಷೇತ್ರದ ಜನತೆ ಮುಂದೆ ಶಾಸಕ ರಾಜು ಕಾಗೆ ತಮ್ಮ ಅಸಹಾಯಕತೆ ತೊಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ರಾಜ್ಯ ಸರ್ಕಾರವು ಭಯೋತ್ಪಾದಕರನ್ನು ಹುಟ್ಟು ಹಾಕುವ ಕೆಲಸ ಮಾಡುತ್ತಿದೆ: ಬೆಲ್ಲದ್
Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ
Vijayanagara: ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು.. ಕುಸಿಯುವ ಭೀತಿ, ಆತಂಕದಲ್ಲಿ ಜನ
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ
Udupi;ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ ʼನಿʼ-ಶತಾಭಿವಂದನಂ
2025ಕ್ಕೆ ಬಾಲಿವುಡ್ಗೆ ಸೀಕ್ವೆಲ್ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ
Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ
Hubli: ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.