Davanagere: ದಸರಾ ಹಬ್ಬದ ಬೃಹತ್ ಶೋಭಾಯಾತ್ರೆ
Team Udayavani, Oct 12, 2024, 3:31 PM IST
ದಾವಣಗೆರೆ: ವಿಶ್ವ ಹಿಂದು ಪರಿಷದ್, ಸಾರ್ವಜನಿಕ ವಿಜಯ ದಶಮಿ ಮಹೋನ್ನತ ಸಮಿತಿ ಆಶ್ರಯದಲ್ಲಿ ದಸರಾ ಹಬ್ಬದ ಅಂಗವಾಗಿ ಶನಿವಾರ 43ನೇ ವರ್ಷದ ಬೃಹತ್ ಶೋಭಾಯಾತ್ರೆ ನಡೆಯಿತು.
ಬೇತೂರು ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ವೃತ್ತದಿಂದ ಪ್ರಾರಂಭವಾದ ಬೃಹತ್ ಶೋಭಾ ಯಾತ್ರೆಗೆ ವಿನೋಬ ನಗರದ ಜಡೇಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿ ಚಾಲನೆ ನೀಡಿದರು.
ಸಮಾಳ, ನಂದಿಕೋಲು, ವೀರಗಾಸೆ, ಡೊಳ್ಳು, ಕೋಲಾಟ, ಸಾಂಪ್ರದಾಯಿಕ ವಾದ್ಯ ಇತ್ಯಾದಿ ಕಲಾತಂಡಗಳು ಶೋಭಾಯಾತ್ರೆಯ ಮೆರಗು ಹೆಚ್ಚಿಸಿದವು.
ರಾಷ್ಟ್ರಪಿತ ಮಹಾತ್ಮ ಗಾಂಧಿ, ಬಸವಣ್ಣ, ವಿವೇಕಾನಂದ, ಗೋಲಾವಲ್ಕರ್, ವಾಲ್ಮೀಕಿ ಮುಂತಾದ ಮಹನೀಯರು, ದಾರ್ಶನಿಕರ ಸ್ತಬ್ದ ಚಿತ್ರಗಳಿದ್ದವು. ಹಗೇದಿಬ್ಬ ವೃತ್ತದಲ್ಲಿ ಉಗ್ರ ನರಸಿಂಹವತಾರದ ರೂಪಕ ಚಿತ್ರ ಗಮನ ಸೆಳೆಯಿತು.
ವೆಂಕಟೇಶ್ವರ ವೃತ್ತದಿಂದ ಪ್ರಾರಂಭವಾದ ಶೋಭಾಯಾತ್ರೆ ಹಳೆ ಬಿಡಿಒ ಆಫೀಸ್ ರಸ್ತೆ, ಚಾಮರಾಜಪೇಟೆ, ಚೌಕಿಪೇಟೆ, ಹೊಂಡದ ವೃತ್ತ, ಅರುಣಾ ಚಿತ್ರಮಂದಿರ ವೃತ್ತ, ಹಳೆ ಪಿಬಿ ರಸ್ತೆ ಮೂಲಕ ಶ್ರೀ ಬೀರಲಿಂಗೇಶ್ವರ ಮೈದಾನ ತಲುಪಲಿದೆ.
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ಕೆ.ಬಿ. ಶಂಕರನಾರಾಯಣ, ಎಸ್. ಟಿ. ವೀರೇಶ್, ರಾಜನಹಳ್ಳಿ ಶಿವಕುಮಾರ್, ಶ್ರೀ ನಿವಾಸ್ ದಾಸಕರಿಯಪ್ಪ, ಬಿ.ಜಿ. ಅಜಯ್ ಕುಮಾರ್, ಮಲ್ಲಿಕಾರ್ಜುನ, ಹರೀಶ್ ಪವಾರ್, ಆರ್.ಎಲ್. ಶಿವಪ್ರಕಾಶ್, ಚೇತನಾ ಶಿವಕುಮಾರ್, ಎಚ್.ಬಿ.ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ ನಾಗಪ್ಪ, ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳು, ವಿನಾಯಕ ರಾನಡೆ, ಶಿವನಗೌಡ ಪಾಟೀಲ್, ಟಿಂಕರ್ ಮಂಜಣ್ಣ ಇತರರು ಇದ್ದರು.
ಮೇಯರ್ ಕೆ. ಚಮನ್ ಸಾಬ್, ತಂಜೀಮುಲ್ ಮುಸ್ಲಿಂಮೀನ್ ಫಂಡ್ ಅಸೋಸಿಯೇಷನ್ ಅಧ್ಯಕ್ಷ ದಾದುಸೇಠ್, ಟಿ. ಅಸ್ಗರ್ ಒಳಗೊಂಡಂತೆ ಮುಸ್ಲಿಂ ಸಮಾಜದ ಮುಖಂಡರು ಶೋಭಾಯಾತ್ರೆ ಮೆರವಣಿಗೆಯಲ್ಲಿನ ಹಿಂದು ಸಮಾಜದ ಮುಖಂಡರಿಗೆ ಹೂಮಾಲೆ, ಶಾಲು ಹಾಕಿ ಸನ್ಮಾನಿಸಿದರು. ಪರಸ್ಪರ ಸಿಹಿ ಹಂಚುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾದರು.
ಶೋಭಾಯಾತ್ರೆ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಡ್ರೋಣ್ ಮೂಲಕ ಮೆರವಣಿಗೆ ಮೇಲೆ ನಿಗಾ ವಹಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ
ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ
ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ
Davangere: ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಬಂಧನ
Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.