Hagaribommanahalli: ಅನೈತಿಕ ಸಂಬಂಧ: ಯುವಕನ ಬರ್ಬರ ಕೊಲೆ; ಆರೋಪಿ ಪೊಲೀಸರಿಗೆ ಶರಣು


Team Udayavani, Oct 12, 2024, 4:34 PM IST

12-crime

ಹಗರಿಬೊಮ್ಮನಹಳ್ಳಿ: ಅನೈತಿಕ ಸಂಬಂಧ ಹೊಂದಿದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಹಾಡಹಗಲೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಚಿಲುಗೋಡು ಗ್ರಾಮದಲ್ಲಿ  ವಿಜಯದಶಮಿಯ ಹಬ್ಬದ ದಿನ( ಅ. 12ರ ಶನಿವಾರ) ನಡೆದಿದೆ.

ಆನಂದೇವನಹಳ್ಳಿ ಬಸವರಾಜ್ (26) ಎಂಬಾತ ಕೊಲೆಯಾದವನು.

ಅ. 12ರ ಶನಿವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ಈ ಘಟನೆ ಸಂಭವಿಸಿದೆ. ಕೊಲೆ ಮಾಡಿದ ವ್ಯಕ್ತಿ ಚಿಲುಗೋಡು ಗ್ರಾಮದ ಬಸರಕೋಡು ಪಕ್ಕೀರಸ್ವಾಮಿ ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಬಸವರಾಜ್ ಅವರು ಪಕ್ಕೀರಸ್ವಾಮಿ ಅವರ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ.

ಈ ಬಗ್ಗೆ ಕಳೆದ 3 ತಿಂಗಳಲ್ಲಿ ಅನೈತಿಕ ಸಂಬಂಧ ಹಿನ್ನೆಲೆ ತಂಬ್ರಹಳ್ಳಿ ಠಾಣೆಯಲ್ಲಿ ತನ್ನ ಹೆಂಡತಿ ಕಾಣೆಯಾಗಿದ್ದಾಳೆ ಎಂದು ಬಸರಕೋಡು ಪಕ್ಕೀರಸ್ವಾಮಿ ದೂರು ನೀಡಿದ್ದರು.

ತಿಂಗಳ ಬಳಿಕ ಆನಂದಳ್ಳಿ ಬಸವರಾಜ್ ಮತ್ತು ಪಕ್ಕೀರಸ್ವಾಮಿ ಹೆಂಡತಿಯನ್ನು ಪೊಲೀಸರು ಪತ್ತೆ ಮಾಡಿ ಠಾಣೆಗೆ ಕರೆ ತಂದಿದ್ದರು. ಬಳಿಕ ರಾಜಿ ಪಂಚಾಯತಿ ಮೂಲಕ ಪರಸ್ಪರ ಮುಚ್ಚಳಿಕೆ ಪತ್ರ ಬರೆದುಕೊಟ್ಟು ಪಕ್ಕೀರಸ್ವಾಮಿ ತನ್ನ ಹೆಂಡತಿಯೊಂದಿಗೆ ಜೀವನ ನಡೆಸುತ್ತಿದ್ದರು.

ಊರು ತೊರೆದಿದ್ದ ಬಸವರಾಜ್ ಕೆಲದಿನಗಳ ಹಿಂದೆ ಊರಿಗೆ ಬಂದಿದ್ದನು. ಮತ್ತೆ  ತನ್ನ ಹೆಂಡತಿಯೊಂದಿಗೆ ಸಂಬಂಧ ಇದೆ ಎಂದು ಶಂಕೆಯಿಂದ  ಕಣ್ಣಿಗೆ ಬಿದ್ದ ಬಸವರಾಜ್ ನನ್ನು ಚೀಲಗೋಡು ಬಸ್ ನಿಲ್ದಾಣದ  ಬಳಿ ತಂಬ್ರಹಳ್ಳಿ ಹಗರಿಬೊಮ್ಮನಹಳ್ಳಿ ಮುಖ್ಯ ರಸ್ತೆಯ ಪಕ್ಕದ ವೀರ ಯೋಧ ಮೌನೇಶ್ ಪುತ್ಥಳಿ ಮುಂಭಾಗದಲ್ಲೇ ಹಾಡ ಹಗಲೇ ಕೊಡಲಿಯಿಂದ ತಲೆ ಮತ್ತು ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ 100 ಮೀಟರ್ ದೂರ ಓಡಿ ಹೋಗಿ ನಡುರಸ್ತೆಯಲ್ಲಿ ಕೊಡಲಿ ಬಿಟ್ಟು ತಂಬ್ರಹಳ್ಳಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಸ್ಥಳಕ್ಕೆ ಸಿಪಿಐ ವಿಕಾಸ್ ಲಮಾಣಿ ತಂಬ್ರಹಳ್ಳಿ ಪೊಲೀಸ್ ಇನ್ಸ್ ಪೆಕ್ಟರ್ ಗುರುಚಂದ್ರ ಯಾದವ್ ಹಾಗೂ ಸಿಬ್ಬಂದಿ ಭೇಟಿ ನೀಡಿ, ಮುಂದಿನ ತನಿಖೆ ಕೈಗೊಂಡಿದ್ದಾರೆ. ಕೊಲೆ ಮಾಡಿದವನನ್ನು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

Jamboo1

Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

1-ree

India vs Bangladesh; ಸಂಜು ಸ್ಯಾಮ್ಸನ್ ಅಬ್ಬರ: ಚೊಚ್ಚಲ T20 ಅಂತಾರಾಷ್ಟ್ರೀಯ ಶತಕ

10

Mangaluru: ನಿವೃತ್ತ ಕರ್ನಲ್‌ ರತ್ನಕುಮಾರ್‌ ಅಡಪ ನಿಧನ

1-sanju-bg

Bollywood actor; ಸಂಜಯ್ ದತ್ ಕರಾವಳಿ ಭೇಟಿ: ಕಟೀಲಿನಲ್ಲಿ ಪ್ರಾರ್ಥನೆ

Mysore-Press

Tax Injustice: ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ

Kharge (2)

Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ

shettar

Hubli ಗಲಭೆ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವುದು ದೊಡ್ಡ ದುರಂತ: ಶೆಟ್ಟರ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-hosapete

Hosapete ರೋಟರಿ ಕ್ಲಬ್ ನೂತನ ಸಭಾಂಗಣಕ್ಕೆ ರತನ್ ಟಾಟಾ ಹೆಸರು

7-vijayanagara

Vijayanagara: ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

19

Mangaluru: ಲಾರಿ ಅಡಿಗೆ ಬಿದ್ದು ಸ್ಕೂಟರ್‌ ಸವಾರ ಸಾವು

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

17

Women’s T20 World Cup: ಶ್ರೀಲಂಕಾ ವಿರುದ್ಧ ಕಿವೀಸ್‌ಗೆ 8 ವಿಕೆಟ್‌ ಜಯಭೇರಿ

Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಸುಲಭ ಜಯ

Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಸುಲಭ ಜಯ

Asia TT: ಭಾರತ ಮಹಿಳಾ ಡಬಲ್ಸ್‌ ಜೋಡಿ ಸೆಮೀಸ್‌ಗೆ, ಪದಕ ಖಚಿತ

Asia TT: ಭಾರತ ಮಹಿಳಾ ಡಬಲ್ಸ್‌ ಜೋಡಿ ಸೆಮೀಸ್‌ಗೆ, ಪದಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.